AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂತ್ ನಡೆ ಎತ್ತ ಕಡೆ

IPL 2025 Rishabh Pant: ರಿಷಭ್ ಪಂತ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ. ಏಕೆಂದರೆ ಪಂತ್ ಅವರ ಆಯ್ಕೆಯಿಂದ ವಿಕೆಟ್ ಕೀಪರ್, ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ನಾಯಕನ ಸ್ಥಾನವನ್ನು ತುಂಬಬಹುದು. ಹೀಗಾಗಿಯೇ ರಿಷಭ್ ಅವರ ಪ್ರಸ್ತುತ ನಡೆ ಈಗ ಕುತೂಹಲಕ್ಕೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Oct 24, 2024 | 8:23 AM

Share
IPL 2025: ಐಪಿಎಲ್ ಆಟಗಾರರ ರಿಟೈನ್ ದಿನಾಂಕ ಸಮೀಪಿಸುತ್ತಿದ್ದಂತೆ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ಈ ಅಪ್​ಡೇಟ್ ಪ್ರಕಾರ, ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರಲಿದ್ದಾರೆ. ಅಂದರೆ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪಂತ್ ನಿರ್ಧರಿಸಿದ್ದಾರಂತೆ.

IPL 2025: ಐಪಿಎಲ್ ಆಟಗಾರರ ರಿಟೈನ್ ದಿನಾಂಕ ಸಮೀಪಿಸುತ್ತಿದ್ದಂತೆ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ಈ ಅಪ್​ಡೇಟ್ ಪ್ರಕಾರ, ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರಲಿದ್ದಾರೆ. ಅಂದರೆ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪಂತ್ ನಿರ್ಧರಿಸಿದ್ದಾರಂತೆ.

1 / 6
ಆದರೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲು ಮುಂದಾಗಿರುವುದೇಕೆ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಕೆಲ ಫ್ರಾಂಚೈಸಿಗಳಿಂದ ಪಂತ್​ ಬಂದಿರುವ ಬಿಗ್ ಆಫರ್​ಗಳು. ಹೀಗೆ ಎಡಗೈ ದಾಂಡಿಗನ ಮೇಲೆ ಕಣ್ಣಿಟ್ಟಿರುವ ಫ್ರಾಂಚೈಸಿಗಳ ಪೈಕಿ ಅಗ್ರಸ್ಥಾನದಲ್ಲಿರುವುದ ಚೆನ್ನೈ ಸೂಪರ್ ಕಿಂಗ್ಸ್ ಎಂಬುದು ವಿಶೇಷ.

ಆದರೆ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯಲು ಮುಂದಾಗಿರುವುದೇಕೆ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಕೆಲ ಫ್ರಾಂಚೈಸಿಗಳಿಂದ ಪಂತ್​ ಬಂದಿರುವ ಬಿಗ್ ಆಫರ್​ಗಳು. ಹೀಗೆ ಎಡಗೈ ದಾಂಡಿಗನ ಮೇಲೆ ಕಣ್ಣಿಟ್ಟಿರುವ ಫ್ರಾಂಚೈಸಿಗಳ ಪೈಕಿ ಅಗ್ರಸ್ಥಾನದಲ್ಲಿರುವುದ ಚೆನ್ನೈ ಸೂಪರ್ ಕಿಂಗ್ಸ್ ಎಂಬುದು ವಿಶೇಷ.

2 / 6
ಐಪಿಎಲ್ ಮೆಗಾ ಹರಾಜಿನ ಸುದ್ದಿಯ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಚೆನ್ನೈ ಸೂಪರ್ ಕಿಂಗ್ಸ್​ ಮಾತುಕತೆ ನಡೆಸಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ  ಅವರನ್ನು ನೇಮಿಸಿಕೊಳ್ಳಲು ಸಿಎಸ್​ಕೆ ಆಸಕ್ತಿವಹಿಸಿದ್ದು, ಹೀಗಾಗಿ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

ಐಪಿಎಲ್ ಮೆಗಾ ಹರಾಜಿನ ಸುದ್ದಿಯ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಚೆನ್ನೈ ಸೂಪರ್ ಕಿಂಗ್ಸ್​ ಮಾತುಕತೆ ನಡೆಸಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿಯಾಗಿ ಅವರನ್ನು ನೇಮಿಸಿಕೊಳ್ಳಲು ಸಿಎಸ್​ಕೆ ಆಸಕ್ತಿವಹಿಸಿದ್ದು, ಹೀಗಾಗಿ ಪಂತ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು.

3 / 6
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರುತ್ತಿರುವ ಸುದ್ದಿಯ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಾರ್ಗೆಟ್ ಲಿಸ್ಟ್​ನಲ್ಲೂ ರಿಷಭ್ ಪಂತ್ ಹೆಸರಿಸಿದೆ ಎಂದು ಸುದ್ದಿಯಾಗಿದೆ. ಅಂದರೆ ಇಲ್ಲಿ ಸಿಎಸ್​ಕೆ ಜೊತೆ ಆರ್​ಸಿಬಿ ಕೂಡ ರಿಷಭ್ ಪಂತ್ ಮೇಲೆ ಕಣ್ಣಿಟ್ಟಿರುವುದು ಖಚಿತವಾಗಿದೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬರುತ್ತಿರುವ ಸುದ್ದಿಯ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಾರ್ಗೆಟ್ ಲಿಸ್ಟ್​ನಲ್ಲೂ ರಿಷಭ್ ಪಂತ್ ಹೆಸರಿಸಿದೆ ಎಂದು ಸುದ್ದಿಯಾಗಿದೆ. ಅಂದರೆ ಇಲ್ಲಿ ಸಿಎಸ್​ಕೆ ಜೊತೆ ಆರ್​ಸಿಬಿ ಕೂಡ ರಿಷಭ್ ಪಂತ್ ಮೇಲೆ ಕಣ್ಣಿಟ್ಟಿರುವುದು ಖಚಿತವಾಗಿದೆ.

4 / 6
ಇದರ ನಡುವೆ ಪಂಜಾಬ್ ಕಿಂಗ್ಸ್ ಕೂಡ ಹೊಸ ನಾಯಕನ ಹುಡುಕಾಟಕ್ಕೆ ಇಳಿದಿದೆ. ಇಲ್ಲಿ ಪಂಜಾಬ್ ತಂಡದ ನೂತನ ಕೋಚ್ ಆಗಿ ರಿಕಿ ಪಾಂಟಿಂಗ್ ನೇಮಕವಾಗಿದ್ದಾರೆ. ಈ ಹಿಂದೆ ಪಾಂಟಿಂಗ್ ಕೋಚಿಂಗ್​ನಲ್ಲೇ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು ಎಂಬುದು ಉಲ್ಲೇಖಾರ್ಹ. ಅಂದರೆ ಪಂತ್ ಮೆಗಾ ಹರಾಜಿಗೆ ಬರುವುದನ್ನು ಪಂಜಾಬ್ ಕಿಂಗ್ಸ್ ಕೂಡ ಕಾಯುತ್ತಿರುವುದು ಸುಳ್ಳಲ್ಲ.

ಇದರ ನಡುವೆ ಪಂಜಾಬ್ ಕಿಂಗ್ಸ್ ಕೂಡ ಹೊಸ ನಾಯಕನ ಹುಡುಕಾಟಕ್ಕೆ ಇಳಿದಿದೆ. ಇಲ್ಲಿ ಪಂಜಾಬ್ ತಂಡದ ನೂತನ ಕೋಚ್ ಆಗಿ ರಿಕಿ ಪಾಂಟಿಂಗ್ ನೇಮಕವಾಗಿದ್ದಾರೆ. ಈ ಹಿಂದೆ ಪಾಂಟಿಂಗ್ ಕೋಚಿಂಗ್​ನಲ್ಲೇ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು ಎಂಬುದು ಉಲ್ಲೇಖಾರ್ಹ. ಅಂದರೆ ಪಂತ್ ಮೆಗಾ ಹರಾಜಿಗೆ ಬರುವುದನ್ನು ಪಂಜಾಬ್ ಕಿಂಗ್ಸ್ ಕೂಡ ಕಾಯುತ್ತಿರುವುದು ಸುಳ್ಳಲ್ಲ.

5 / 6
ಹೀಗಾಗಿ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಂಡರೆ ಮೂರು ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದಂತು ದಿಟ. ಇದಾಗ್ಯೂ ಅಂತಿಮವಾಗಿ ಪಂಟರ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಹೀಗಾಗಿ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಕಾಣಿಸಿಕೊಂಡರೆ ಮೂರು ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದಂತು ದಿಟ. ಇದಾಗ್ಯೂ ಅಂತಿಮವಾಗಿ ಪಂಟರ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?