AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಕೆಎಲ್​​ ರಾಹುಲ್​ರನ್ನು​ ನೇರವಾಗಿ ಆಯ್ಕೆ ಮಾಡುವಂತಿಲ್ಲ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿಯ ಹರಾಜಿಗೂ ಮುನ್ನ ಕೆಎಲ್ ರಾಹುಲ್ ಅವರನ್ನು ಟ್ರೇಡ್ ಮಾಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಧ್ಯವಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಐಪಿಎಲ್​ನ ಮೆಗಾ ಹರಾಜು ನಿಯಮ. ಈ ನಿಯಮದ ಪ್ರಕಾರ ಆಟಗಾರರ ಟ್ರೇಡಿಂಗ್​ಗೆ ಅವಕಾಶವಿಲ್ಲ.

ಝಾಹಿರ್ ಯೂಸುಫ್
|

Updated on:Sep 17, 2024 | 1:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಸಿದ್ಧತೆಗಳ ನಡುವೆ ಎಲ್ಲರ ಕುತೂಹಲಕ್ಕೆ ಕಾರಣವಾಗಿರುವುದು ಕೆಎಲ್ ರಾಹುಲ್ (KL Rahul) ಅವರ ಮುಂದಿನ ನಡೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಕನ್ನಡಿಗ ಹೊರಬರುವುದು ಬಹುತೇಕ ಖಚಿತ. ಇದನ್ನು ಪುಷ್ಠೀಕರಿಸುವಂತೆ ರಾಹುಲ್ ಕೂಡ ಆರ್​ಸಿಬಿ ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಸಿದ್ಧತೆಗಳ ನಡುವೆ ಎಲ್ಲರ ಕುತೂಹಲಕ್ಕೆ ಕಾರಣವಾಗಿರುವುದು ಕೆಎಲ್ ರಾಹುಲ್ (KL Rahul) ಅವರ ಮುಂದಿನ ನಡೆ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಕನ್ನಡಿಗ ಹೊರಬರುವುದು ಬಹುತೇಕ ಖಚಿತ. ಇದನ್ನು ಪುಷ್ಠೀಕರಿಸುವಂತೆ ರಾಹುಲ್ ಕೂಡ ಆರ್​ಸಿಬಿ ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

1 / 6
ಆದರೆ ಆರ್​ಸಿಬಿ ಪರ ಮತ್ತೆ ಆಡುವ ಇಚ್ಛೆ ಹೊಂದಿದ್ದರೂ ಕೆಎಲ್ ರಾಹುಲ್ ನೇರವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗುವುದಿಲ್ಲ. ಅಂದರೆ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ರಾಹುಲ್ ಅವರನ್ನು ಟ್ರೇಡ್ ಮಾಡಲು ಅವಕಾಶವಿಲ್ಲ. ಬದಲಾಗಿ ಮೆಗಾ ಹರಾಜಿನ ಮೂಲಕವೇ ಖರೀದಿಸಬೇಕಾಗುತ್ತದೆ.

ಆದರೆ ಆರ್​ಸಿಬಿ ಪರ ಮತ್ತೆ ಆಡುವ ಇಚ್ಛೆ ಹೊಂದಿದ್ದರೂ ಕೆಎಲ್ ರಾಹುಲ್ ನೇರವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗುವುದಿಲ್ಲ. ಅಂದರೆ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ರಾಹುಲ್ ಅವರನ್ನು ಟ್ರೇಡ್ ಮಾಡಲು ಅವಕಾಶವಿಲ್ಲ. ಬದಲಾಗಿ ಮೆಗಾ ಹರಾಜಿನ ಮೂಲಕವೇ ಖರೀದಿಸಬೇಕಾಗುತ್ತದೆ.

2 / 6
ಏಕೆಂದರೆ ಐಪಿಎಲ್ ನಿಯಮಗಳ ಪ್ರಕಾರ, ಮೆಗಾ ಹರಾಜಿನ ಸಂದರ್ಭಗಳಲ್ಲಿ ಆಟಗಾರರ ಟ್ರೇಡಿಂಗ್​ಗೆ ಅವಕಾಶವಿಲ್ಲ. ಬದಲಾಗಿ ಈ ಮಿನಿ ಹರಾಜಿನ ವೇಳೆ ಮಾತ್ರ ಆಟಗಾರರನ್ನು ಟ್ರೇಡಿಂಗ್​ಗೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ಈ ಬಾರಿಯ ಹರಾಜಿಗೂ ಮುನ್ನ RCBಗೆ ಕೆಎಲ್ ರಾಹುಲ್ ಅವರನ್ನು ಖರೀದಿಸಲು ಸಾಧ್ಯವಾಗುವುದಿಲ್ಲ.

ಏಕೆಂದರೆ ಐಪಿಎಲ್ ನಿಯಮಗಳ ಪ್ರಕಾರ, ಮೆಗಾ ಹರಾಜಿನ ಸಂದರ್ಭಗಳಲ್ಲಿ ಆಟಗಾರರ ಟ್ರೇಡಿಂಗ್​ಗೆ ಅವಕಾಶವಿಲ್ಲ. ಬದಲಾಗಿ ಈ ಮಿನಿ ಹರಾಜಿನ ವೇಳೆ ಮಾತ್ರ ಆಟಗಾರರನ್ನು ಟ್ರೇಡಿಂಗ್​ಗೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ಈ ಬಾರಿಯ ಹರಾಜಿಗೂ ಮುನ್ನ RCBಗೆ ಕೆಎಲ್ ರಾಹುಲ್ ಅವರನ್ನು ಖರೀದಿಸಲು ಸಾಧ್ಯವಾಗುವುದಿಲ್ಲ.

3 / 6
ಇನ್ನು ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಇತರೆ ಫ್ರಾಂಚೈಸಿಗಳು ಕೂಡ ಅವರ ಖರೀದಿಗೆ ಆಸಕ್ತಿವಹಿಸಲಿದೆ. ಏಕೆಂದರೆ ರಾಹುಲ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಅದರಲ್ಲೂ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಮುನ್ನಡೆಸಿದ ಅನುಭವವನ್ನು ಸಹ ಹೊಂದಿದ್ದಾರೆ.

ಇನ್ನು ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಇತರೆ ಫ್ರಾಂಚೈಸಿಗಳು ಕೂಡ ಅವರ ಖರೀದಿಗೆ ಆಸಕ್ತಿವಹಿಸಲಿದೆ. ಏಕೆಂದರೆ ರಾಹುಲ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಅದರಲ್ಲೂ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಮುನ್ನಡೆಸಿದ ಅನುಭವವನ್ನು ಸಹ ಹೊಂದಿದ್ದಾರೆ.

4 / 6
ಹೀಗಾಗಿ ಕೆಎಲ್ ರಾಹುಲ್ ಅವರ ಖರೀದಿಯಿಂದ ಕ್ಯಾಪ್ಟನ್, ವಿಕೆಟ್ ಕೀಪರ್ ಹಾಗೂ ಓಪನರ್ ಸ್ಥಾನಗಳನ್ನು ತುಂಬಬಹುದು. ಹೀಗೆ ಒಂದೇ ಆಯ್ಕೆಯಿಂದ ಮೂರು ಸ್ಥಾನಗಳನ್ನು ತುಂಬಬಲ್ಲ ಆಟಗಾರರ ಖರೀದಿಗೆ ಹೆಚ್ಚಿನ ಫ್ರಾಂಚೈಸಿಗಳು ಆಸಕ್ತಿವಹಿಸಲಿದೆ.

ಹೀಗಾಗಿ ಕೆಎಲ್ ರಾಹುಲ್ ಅವರ ಖರೀದಿಯಿಂದ ಕ್ಯಾಪ್ಟನ್, ವಿಕೆಟ್ ಕೀಪರ್ ಹಾಗೂ ಓಪನರ್ ಸ್ಥಾನಗಳನ್ನು ತುಂಬಬಹುದು. ಹೀಗೆ ಒಂದೇ ಆಯ್ಕೆಯಿಂದ ಮೂರು ಸ್ಥಾನಗಳನ್ನು ತುಂಬಬಲ್ಲ ಆಟಗಾರರ ಖರೀದಿಗೆ ಹೆಚ್ಚಿನ ಫ್ರಾಂಚೈಸಿಗಳು ಆಸಕ್ತಿವಹಿಸಲಿದೆ.

5 / 6
ಇನ್ನು ಮೆಗಾ ಹರಾಜಿನ ಮೂಲಕ ಆರ್​ಸಿಬಿ ಕೆಎಲ್ ರಾಹುಲ್ ಅವರ ಖರೀದಿಗೆ ಮುಂದಾದರೂ, ಹೆಚ್ಚಿನ ಪೈಪೋಟಿ ಕಂಡು ಬರುವುದು ಖಚಿತ. ಹೀಗಾಗಿ ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿರುವ ಕನ್ನಡಿಗ ಅಂತಿಮವಾಗಿ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಮೆಗಾ ಹರಾಜಿನ ಮೂಲಕ ಆರ್​ಸಿಬಿ ಕೆಎಲ್ ರಾಹುಲ್ ಅವರ ಖರೀದಿಗೆ ಮುಂದಾದರೂ, ಹೆಚ್ಚಿನ ಪೈಪೋಟಿ ಕಂಡು ಬರುವುದು ಖಚಿತ. ಹೀಗಾಗಿ ಮೆಗಾ ಆಕ್ಷನ್​ನಲ್ಲಿ ಕಾಣಿಸಿಕೊಳ್ಳಲಿರುವ ಕನ್ನಡಿಗ ಅಂತಿಮವಾಗಿ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6

Published On - 1:53 pm, Tue, 17 September 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?