AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕುತೂಹಲ ಮೂಡಿಸಿದ ಕೆಎಲ್ ರಾಹುಲ್ ನಡೆ..!

KL Rahul: ಐಪಿಎಲ್​ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋತಿದಕ್ಕಾಗಿ ಸಂಜಯ್ ಗೊಯೆಂಕಾ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ರಾಹುಲ್ ಮುಂದಿನ ಸೀಸನ್​ನಲ್ಲಿ ಲಕ್ನೋ ಪರ ಆಡುವುದಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ಸಂಜೀವ್ ಗೊಯೆಂಕಾ ಕೆಎಲ್ ರಾಹುಲ್ ಅವರನ್ನು ಕರೆಸಿ ಮಾತನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on: Aug 27, 2024 | 9:07 AM

Share
IPL 2025: ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಕೆಎಲ್ ರಾಹುಲ್ (KL Rahul) ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಭೇಟಿಯಾಗಿದ್ದಾರೆ. ಕೊಲ್ಕತ್ತಾದಲ್ಲಿರುವ ತಮ್ಮ ಕಚೇರಿಗೆ ರಾಹುಲ್ ಅವರನ್ನು ಕರೆಸಿಕೊಂಡು LSG ತಂಡದ ಮಾಲೀಕರು ಮಾತುಕತೆ ನಡೆಸಿದ್ದಾರೆ.

IPL 2025: ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಕೆಎಲ್ ರಾಹುಲ್ (KL Rahul) ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಭೇಟಿಯಾಗಿದ್ದಾರೆ. ಕೊಲ್ಕತ್ತಾದಲ್ಲಿರುವ ತಮ್ಮ ಕಚೇರಿಗೆ ರಾಹುಲ್ ಅವರನ್ನು ಕರೆಸಿಕೊಂಡು LSG ತಂಡದ ಮಾಲೀಕರು ಮಾತುಕತೆ ನಡೆಸಿದ್ದಾರೆ.

1 / 5
ಈ ಮಾತುಕತೆಯ ಬೆನ್ನಲ್ಲೇ ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ ಸಂಜೀವ್ ಗೊಯೆಂಕಾ ರಾಹುಲ್ ಅವರನ್ನು ಕರೆಸಿಕೊಂಡು ಮಾತನಾಡಬೇಕಿದ್ದರೆ, ಇಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ. ಅದರಲ್ಲೂ ಕೆಎಲ್​ಆರ್​ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲು ಮುಂದಾಗಿದ್ದು, ಇದೇ ಕಾರಣದಿಂದಾಗಿ ಅವರ ಮನವೊಲಿಸಲು ಇದೀಗ LSG ಮಾಲೀಕರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಈ ಮಾತುಕತೆಯ ಬೆನ್ನಲ್ಲೇ ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ ಸಂಜೀವ್ ಗೊಯೆಂಕಾ ರಾಹುಲ್ ಅವರನ್ನು ಕರೆಸಿಕೊಂಡು ಮಾತನಾಡಬೇಕಿದ್ದರೆ, ಇಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ. ಅದರಲ್ಲೂ ಕೆಎಲ್​ಆರ್​ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲು ಮುಂದಾಗಿದ್ದು, ಇದೇ ಕಾರಣದಿಂದಾಗಿ ಅವರ ಮನವೊಲಿಸಲು ಇದೀಗ LSG ಮಾಲೀಕರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

2 / 5
ಇನ್ನು ಭೇಟಿಯ ವೇಳೆ ತಮ್ಮನ್ನು ತಂಡದಲ್ಲೇ ಉಳಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬಯಸುತ್ತಿರುವುದಾಗಿ ಸಂಜೀವ್ ಗೊಯೆಂಕಾ ತಿಳಿಸಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅಂತಿಮ ನಿರ್ಧಾರವನ್ನು ತಿಳಿಸಿಲ್ಲ. ಹೀಗಾಗಿ ಕೆಎಲ್​ಆರ್​ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲೇ ಉಳಿಯಲಿದ್ದಾರಾ ಅಥವಾ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ.

ಇನ್ನು ಭೇಟಿಯ ವೇಳೆ ತಮ್ಮನ್ನು ತಂಡದಲ್ಲೇ ಉಳಿಸಿಕೊಳ್ಳಲು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬಯಸುತ್ತಿರುವುದಾಗಿ ಸಂಜೀವ್ ಗೊಯೆಂಕಾ ತಿಳಿಸಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅಂತಿಮ ನಿರ್ಧಾರವನ್ನು ತಿಳಿಸಿಲ್ಲ. ಹೀಗಾಗಿ ಕೆಎಲ್​ಆರ್​ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲೇ ಉಳಿಯಲಿದ್ದಾರಾ ಅಥವಾ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ.

3 / 5
ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದರೆ ರಾಹುಲ್ ಖರೀದಿಗೆ ಕೆಲ ಫ್ರಾಂಚೈಸಿಗಳು ಮುಂದಾಗಲಿದೆ. ಅದರಲ್ಲೂ ಹೊಸ ನಾಯಕ ಹಾಗೂ ವಿಕೆಟ್ ಕೀಪರ್​ನ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೆಎಲ್ ರಾಹುಲ್ ಖರೀದಿಗೆ ಹೆಚ್ಚಿನ ಆಸಕ್ತಿ ಹೊಂದಿದೆ.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದರೆ ರಾಹುಲ್ ಖರೀದಿಗೆ ಕೆಲ ಫ್ರಾಂಚೈಸಿಗಳು ಮುಂದಾಗಲಿದೆ. ಅದರಲ್ಲೂ ಹೊಸ ನಾಯಕ ಹಾಗೂ ವಿಕೆಟ್ ಕೀಪರ್​ನ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೆಎಲ್ ರಾಹುಲ್ ಖರೀದಿಗೆ ಹೆಚ್ಚಿನ ಆಸಕ್ತಿ ಹೊಂದಿದೆ.

4 / 5
ಹೀಗಾಗಿ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಆರ್​ಸಿಬಿ ಖರೀದಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರನ್ನು ಭೇಟಿಯಾಗಿರುವ ಕಾರಣ  ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬುದನ್ನು ಹಲವು ಫ್ರಾಂಚೈಸಿಗಳು ಎದುರು ನೋಡುತ್ತಿದೆ.

ಹೀಗಾಗಿ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಆರ್​ಸಿಬಿ ಖರೀದಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರನ್ನು ಭೇಟಿಯಾಗಿರುವ ಕಾರಣ ಕೆಎಲ್ ರಾಹುಲ್ ಅವರ ಮುಂದಿನ ನಡೆಯೇನು ಎಂಬುದನ್ನು ಹಲವು ಫ್ರಾಂಚೈಸಿಗಳು ಎದುರು ನೋಡುತ್ತಿದೆ.

5 / 5
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್