AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಶಿಖರ್ ಧವನ್ ಐಪಿಎಲ್ ಆಡ್ತಾರಾ?

IPL 2025: ಐಪಿಎಲ್​ನಲ್ಲಿ ಶಿಖರ್ ಧವನ್ ಈವರೆಗೆ 5 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಒಟ್ಟು 222 ಪಂದ್ಯಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 25, 2024 | 2:07 PM

Share
ಟೀಮ್ ಇಂಡಿಯಾದ ಎಡಗೈ ದಾಂಡಿಗ ಶಿಖರ್ ಧವನ್ (Shikhar Dhawan) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಆಗಸ್ಟ್ 24 ರಂದು ಸೋಷಿಯಲ್ ಮೀಡಿಯಾ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್ ಹಾಗೂ ಡೊಮೆಸ್ಟಿಕ್ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ಧವನ್ ತಿಳಿಸಿದ್ದಾರೆ.

ಟೀಮ್ ಇಂಡಿಯಾದ ಎಡಗೈ ದಾಂಡಿಗ ಶಿಖರ್ ಧವನ್ (Shikhar Dhawan) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಆಗಸ್ಟ್ 24 ರಂದು ಸೋಷಿಯಲ್ ಮೀಡಿಯಾ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್ ಹಾಗೂ ಡೊಮೆಸ್ಟಿಕ್ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ಧವನ್ ತಿಳಿಸಿದ್ದಾರೆ.

1 / 6
ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿಖರ್ ಧವನ್ ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯದ ಉತ್ತರ ಆಡಬಹುದು ಅಥವಾ ಆಡದೇ ಇರಬಹುದು. ಏಕೆಂದರೆ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿಖರ್ ಧವನ್ ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯದ ಉತ್ತರ ಆಡಬಹುದು ಅಥವಾ ಆಡದೇ ಇರಬಹುದು. ಏಕೆಂದರೆ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

2 / 6
ಐಪಿಎಲ್ 2024 ರಲ್ಲಿ ಶಿಖರ್ ಧವನ್ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕೇವಲ 5 ಪಂದ್ಯಗಳನ್ನಾಡಿದ್ದರು. ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಇದನ್ನು ಖುದ್ದು ಧವನ್ ಅವರೇ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಐಪಿಎಲ್ 2024 ರಲ್ಲಿ ಶಿಖರ್ ಧವನ್ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕೇವಲ 5 ಪಂದ್ಯಗಳನ್ನಾಡಿದ್ದರು. ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಂಪೂರ್ಣವಾಗಿ ಗುಣಮುಖರಾಗಿಲ್ಲ. ಇದನ್ನು ಖುದ್ದು ಧವನ್ ಅವರೇ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

3 / 6
ಐಪಿಎಲ್ ವೇಳೆ ಉಂಟಾದ ಗಾಯದಿಂದ ನಾನು ಚೇತರಿಸಿಕೊಂಡಿದ್ದೇನೆ. ಆದರೆ 100 ಪರ್ಸೆಂಟ್ ಗುಣಮುಖನಾಗಿಲ್ಲ. ಸಂಪೂರ್ಣ ಫಿಟ್​ನೆಸ್ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್​ ಸಾಧಿಸಿದರೆ ಮಾತ್ರ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್ ವೇಳೆ ಉಂಟಾದ ಗಾಯದಿಂದ ನಾನು ಚೇತರಿಸಿಕೊಂಡಿದ್ದೇನೆ. ಆದರೆ 100 ಪರ್ಸೆಂಟ್ ಗುಣಮುಖನಾಗಿಲ್ಲ. ಸಂಪೂರ್ಣ ಫಿಟ್​ನೆಸ್ ಸಾಧಿಸಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್​ ಸಾಧಿಸಿದರೆ ಮಾತ್ರ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

4 / 6
ಇನ್ನು ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದರೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಧವನ್ ಅವರಿಗೆ ಈಗ 38 ವರ್ಷಗಳು. ಅಲ್ಲದೆ ಫಿಟ್​ನೆಸ್ ಸಮಸ್ಯೆಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಶಿಖರ್ ಧವನ್ ಅವರನ್ನು ರಿಲೀಸ್ ಮಾಡಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹೊಸ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಇನ್ನು ಮುಂಬರುವ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದರೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಧವನ್ ಅವರಿಗೆ ಈಗ 38 ವರ್ಷಗಳು. ಅಲ್ಲದೆ ಫಿಟ್​ನೆಸ್ ಸಮಸ್ಯೆಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಶಿಖರ್ ಧವನ್ ಅವರನ್ನು ರಿಲೀಸ್ ಮಾಡಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹೊಸ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

5 / 6
ಶಿಖರ್ ಧವನ್ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 222 ಪಂದ್ಯಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ರನ್ ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಶಿಖರ್ ಧವನ್ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 222 ಪಂದ್ಯಗಳನ್ನಾಡಿರುವ ಅವರು 2 ಶತಕ ಹಾಗೂ 51 ಅರ್ಧಶತಕಗಳೊಂದಿಗೆ ಒಟ್ಟು 6768 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ರನ್ ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?