AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025 DC vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 32ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 188 ರನ್​ಗಳಿಸಿ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸಿತು.

ಝಾಹಿರ್ ಯೂಸುಫ್
|

Updated on: Apr 17, 2025 | 9:04 AM

IPL 2025: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 89  ರನ್ ಬಾರಿಸಿ ಮಿಂಚಿದ್ದ ಕನ್ನಡಿಗ ಕರುಣ್ ನಾಯರ್ (Karun Nair)  ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಮುಗ್ಗರಿಸಿದ್ದಾರೆ. ಅದು ಸಹ ತನ್ನದೇ ತಪ್ಪಿನಿಂದಾಗಿ ಎಂಬುದು ವಿಶೇಷ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್ ಮೆಕ್​ಗುರ್ಕ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು.

IPL 2025: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 89  ರನ್ ಬಾರಿಸಿ ಮಿಂಚಿದ್ದ ಕನ್ನಡಿಗ ಕರುಣ್ ನಾಯರ್ (Karun Nair)  ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಮುಗ್ಗರಿಸಿದ್ದಾರೆ. ಅದು ಸಹ ತನ್ನದೇ ತಪ್ಪಿನಿಂದಾಗಿ ಎಂಬುದು ವಿಶೇಷ. ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್ ಮೆಕ್​ಗುರ್ಕ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದಿದ್ದರು.

1 / 5
ಆದರೆ ಕೇವಲ 9 ರನ್ ಬಾರಿಸಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಮೂರನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಸ್ಟ್ರೈಕ್​ನಲ್ಲಿದ್ದ ಅಭಿಷೇಕ್ ಪೊರೆಲ್ ಓಡಬೇಡಿ ಎಂದರೂ ರನ್​ಗಾಗಿ ಕರುಣ್ ಕ್ರೀಸ್​ ಬಿಟ್ಟಿದ್ದರು.

ಆದರೆ ಕೇವಲ 9 ರನ್ ಬಾರಿಸಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಮೂರನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು. ಸ್ಟ್ರೈಕ್​ನಲ್ಲಿದ್ದ ಅಭಿಷೇಕ್ ಪೊರೆಲ್ ಓಡಬೇಡಿ ಎಂದರೂ ರನ್​ಗಾಗಿ ಕರುಣ್ ಕ್ರೀಸ್​ ಬಿಟ್ಟಿದ್ದರು.

2 / 5
ಸ್ಟ್ರೈಕ್​ನಲ್ಲಿದ್ದ ಬ್ಯಾಟರ್​ನ ಸೂಚನೆಯನ್ನು ನೋಡದೇ ಅವಸರದಲ್ಲಿ ಅದಾಗಲೇ ಕ್ರೀಸ್ ಬಿಟ್ಟಿದ್ದ ಕರುಣ್ ನಾಯರ್ ಮತ್ತೆ ನಾನ್ ಸ್ಟ್ರೈಕ್​ಗೆ ತಲುಪುವಷ್ಟರಲ್ಲಿ ಸಂದೀಪ್ ಶರ್ಮಾ ರನೌಟ್ ಮಾಡಿದರು. ಪರಿಣಾಮ ಶೂನ್ಯದೊಂದಿಗೆ ಕರುಣ್ ನಾಯರ್ ಪೆವಿಲಿಯನ್​​ಗೆ ಹಿಂತಿರುಗಬೇಕಾಯಿತು.

ಸ್ಟ್ರೈಕ್​ನಲ್ಲಿದ್ದ ಬ್ಯಾಟರ್​ನ ಸೂಚನೆಯನ್ನು ನೋಡದೇ ಅವಸರದಲ್ಲಿ ಅದಾಗಲೇ ಕ್ರೀಸ್ ಬಿಟ್ಟಿದ್ದ ಕರುಣ್ ನಾಯರ್ ಮತ್ತೆ ನಾನ್ ಸ್ಟ್ರೈಕ್​ಗೆ ತಲುಪುವಷ್ಟರಲ್ಲಿ ಸಂದೀಪ್ ಶರ್ಮಾ ರನೌಟ್ ಮಾಡಿದರು. ಪರಿಣಾಮ ಶೂನ್ಯದೊಂದಿಗೆ ಕರುಣ್ ನಾಯರ್ ಪೆವಿಲಿಯನ್​​ಗೆ ಹಿಂತಿರುಗಬೇಕಾಯಿತು.

3 / 5
ಪೆವಿಲಿಯನ್​ನತ್ತ ಬಂದ ಕರುಣ್ ನಾಯರ್ ನೇರವಾಗಿ ಡ್ರೆಸ್ಸಿಂಗ್​ಗೆ ರೂಮ್​ಗೆ ತೆರಳಿದ್ದಾರೆ. ಅಲ್ಲದೆ ತನ್ನ ಕೋಪ ತಾಪಗಳನ್ನು ತೀರಿಸಿಕೊಂಡಿದ್ದಾರೆ. ತಾಳ್ಮೆ ಕಳೆದುಕೊಂಡು ಡ್ರೆಸ್ಸಿಂಗ್ ರೂಮ್​ನಲ್ಲಿ ತನ್ನ ಗ್ಲೌಸ್​, ಬ್ಯಾಟ್​ಗಳನ್ನು ಎಸೆಯುವ ಮೂಲಕ ಸಿಟ್ಟು ಹೊರಹಾಕುತ್ತಿರುವ ಕರುಣ್ ನಾಯರ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೆವಿಲಿಯನ್​ನತ್ತ ಬಂದ ಕರುಣ್ ನಾಯರ್ ನೇರವಾಗಿ ಡ್ರೆಸ್ಸಿಂಗ್​ಗೆ ರೂಮ್​ಗೆ ತೆರಳಿದ್ದಾರೆ. ಅಲ್ಲದೆ ತನ್ನ ಕೋಪ ತಾಪಗಳನ್ನು ತೀರಿಸಿಕೊಂಡಿದ್ದಾರೆ. ತಾಳ್ಮೆ ಕಳೆದುಕೊಂಡು ಡ್ರೆಸ್ಸಿಂಗ್ ರೂಮ್​ನಲ್ಲಿ ತನ್ನ ಗ್ಲೌಸ್​, ಬ್ಯಾಟ್​ಗಳನ್ನು ಎಸೆಯುವ ಮೂಲಕ ಸಿಟ್ಟು ಹೊರಹಾಕುತ್ತಿರುವ ಕರುಣ್ ನಾಯರ್ ಅವರ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 188 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದಾರೆ. ಅದರಂತೆ ಸೂಪರ್ ಓವರ್​ನತ್ತ ಸಾಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಆರ್ 11 ರನ್ ಕಲೆಹಾಕಿದರೆ, ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ 13 ರನ್​ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ಪಂದವನ್ನು ಗೆದ್ದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 188 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದಾರೆ. ಅದರಂತೆ ಸೂಪರ್ ಓವರ್​ನತ್ತ ಸಾಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಆರ್ 11 ರನ್ ಕಲೆಹಾಕಿದರೆ, ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ 13 ರನ್​ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ಪಂದವನ್ನು ಗೆದ್ದುಕೊಂಡಿದೆ.

5 / 5
Follow us
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ