AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಹಿಸ್ಟರಿ, ಹಿಸ್ಟರಿ, ಹಿಸ್ಟರಿ… ಐಪಿಎಲ್​ನಲ್ಲಿ ಹೊಸ ಹಿಸ್ಟರಿ ನಿರ್ಮಿಸಿದ ಕೆಎಲ್ ರಾಹುಲ್

IPL 2025 DC vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 60ನೇ ಪಂದ್ಯದಲ್ಲಿ 2 ಶತಕಗಳು ಮೂಡಿಬಂದಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಶತಕ ಬಾರಿಸಿದ್ದರು. ಈ ಮೂಲಕ ಡಿಸಿ ಪಡೆ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಗುಜರಾತ್ ಟೈಟಾನ್ಸ್ 200 ರನ್​ಗಳ ಗುರಿ ಬೆನ್ನತ್ತಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:May 19, 2025 | 8:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೆಎಲ್ ರಾಹುಲ್ (KL Rahul) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಹುಲ್ ಆಕರ್ಷಕ ಶತಕ ಬಾರಿಸಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೆಎಲ್ ರಾಹುಲ್ (KL Rahul) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಹುಲ್ ಆಕರ್ಷಕ ಶತಕ ಬಾರಿಸಿದ್ದರು.

1 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್​ಆರ್ 65 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 112 ರನ್ ಬಾರಿಸಿದರು. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ತಂಡಗಳ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯೊಂದು ಕನ್ನಡಿಗನ ಪಾಲಾಗಿದೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್​ಆರ್ 65 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 112 ರನ್ ಬಾರಿಸಿದರು. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ತಂಡಗಳ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯೊಂದು ಕನ್ನಡಿಗನ ಪಾಲಾಗಿದೆ.

2 / 5
ಅಂದರೆ ಐಪಿಎಲ್​ನಲ್ಲಿ ಮೂರು ತಂಡಗಳ ಪರ ಕಣಕ್ಕಿಳಿದು ಶತಕ ಸಿಡಿಸಿರುವುದು ಕೆಎಲ್ ರಾಹುಲ್ ಒಬ್ಬರೇ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ 2 ಶತಕ ಬಾರಿಸಿದ್ದರು. 2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 64 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕೆಎಲ್​ಆರ್​, ಆ ಬಳಿಕ 2020 ರಲ್ಲಿ ಆರ್​ಸಿಬಿ ವಿರುದ್ಧ 69 ಎಸೆತಗಳಲ್ಲಿ 132 ರನ್​ ಸಿಡಿಸಿದ್ದರು.

ಅಂದರೆ ಐಪಿಎಲ್​ನಲ್ಲಿ ಮೂರು ತಂಡಗಳ ಪರ ಕಣಕ್ಕಿಳಿದು ಶತಕ ಸಿಡಿಸಿರುವುದು ಕೆಎಲ್ ರಾಹುಲ್ ಒಬ್ಬರೇ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ 2 ಶತಕ ಬಾರಿಸಿದ್ದರು. 2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 64 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕೆಎಲ್​ಆರ್​, ಆ ಬಳಿಕ 2020 ರಲ್ಲಿ ಆರ್​ಸಿಬಿ ವಿರುದ್ಧ 69 ಎಸೆತಗಳಲ್ಲಿ 132 ರನ್​ ಸಿಡಿಸಿದ್ದರು.

3 / 5
ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ರಾಹುಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ಶತಕಗಳನ್ನು ಸಿಡಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 60 ಎಸೆತಗಳಲ್ಲಿ 103 ರನ್ ಬಾರಿಸಿದ್ದ ಕನ್ನಡಿಗ, ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧವೇ ದ್ವಿತೀಯ ಪಂದ್ಯದಲ್ಲಿ 62 ಎಸೆತಗಳಲ್ಲಿ 103 ರನ್ ಚಚ್ಚಿದ್ದರು.

ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ರಾಹುಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ಶತಕಗಳನ್ನು ಸಿಡಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 60 ಎಸೆತಗಳಲ್ಲಿ 103 ರನ್ ಬಾರಿಸಿದ್ದ ಕನ್ನಡಿಗ, ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧವೇ ದ್ವಿತೀಯ ಪಂದ್ಯದಲ್ಲಿ 62 ಎಸೆತಗಳಲ್ಲಿ 103 ರನ್ ಚಚ್ಚಿದ್ದರು.

4 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ 112 ರನ್ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ತಂಡಗಳ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೆಎಲ್​ಆರ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ 112 ರನ್ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ತಂಡಗಳ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೆಎಲ್​ಆರ್ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:30 am, Mon, 19 May 25

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು