AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಹಿಸ್ಟರಿ, ಹಿಸ್ಟರಿ, ಹಿಸ್ಟರಿ… ಐಪಿಎಲ್​ನಲ್ಲಿ ಹೊಸ ಹಿಸ್ಟರಿ ನಿರ್ಮಿಸಿದ ಕೆಎಲ್ ರಾಹುಲ್

IPL 2025 DC vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 60ನೇ ಪಂದ್ಯದಲ್ಲಿ 2 ಶತಕಗಳು ಮೂಡಿಬಂದಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಶತಕ ಬಾರಿಸಿದ್ದರು. ಈ ಮೂಲಕ ಡಿಸಿ ಪಡೆ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಗುಜರಾತ್ ಟೈಟಾನ್ಸ್ 200 ರನ್​ಗಳ ಗುರಿ ಬೆನ್ನತ್ತಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:May 19, 2025 | 8:30 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೆಎಲ್ ರಾಹುಲ್ (KL Rahul) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಹುಲ್ ಆಕರ್ಷಕ ಶತಕ ಬಾರಿಸಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕೆಎಲ್ ರಾಹುಲ್ (KL Rahul) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಹುಲ್ ಆಕರ್ಷಕ ಶತಕ ಬಾರಿಸಿದ್ದರು.

1 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್​ಆರ್ 65 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 112 ರನ್ ಬಾರಿಸಿದರು. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ತಂಡಗಳ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯೊಂದು ಕನ್ನಡಿಗನ ಪಾಲಾಗಿದೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್​ಆರ್ 65 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 112 ರನ್ ಬಾರಿಸಿದರು. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ತಂಡಗಳ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯೊಂದು ಕನ್ನಡಿಗನ ಪಾಲಾಗಿದೆ.

2 / 5
ಅಂದರೆ ಐಪಿಎಲ್​ನಲ್ಲಿ ಮೂರು ತಂಡಗಳ ಪರ ಕಣಕ್ಕಿಳಿದು ಶತಕ ಸಿಡಿಸಿರುವುದು ಕೆಎಲ್ ರಾಹುಲ್ ಒಬ್ಬರೇ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ 2 ಶತಕ ಬಾರಿಸಿದ್ದರು. 2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 64 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕೆಎಲ್​ಆರ್​, ಆ ಬಳಿಕ 2020 ರಲ್ಲಿ ಆರ್​ಸಿಬಿ ವಿರುದ್ಧ 69 ಎಸೆತಗಳಲ್ಲಿ 132 ರನ್​ ಸಿಡಿಸಿದ್ದರು.

ಅಂದರೆ ಐಪಿಎಲ್​ನಲ್ಲಿ ಮೂರು ತಂಡಗಳ ಪರ ಕಣಕ್ಕಿಳಿದು ಶತಕ ಸಿಡಿಸಿರುವುದು ಕೆಎಲ್ ರಾಹುಲ್ ಒಬ್ಬರೇ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ 2 ಶತಕ ಬಾರಿಸಿದ್ದರು. 2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 64 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕೆಎಲ್​ಆರ್​, ಆ ಬಳಿಕ 2020 ರಲ್ಲಿ ಆರ್​ಸಿಬಿ ವಿರುದ್ಧ 69 ಎಸೆತಗಳಲ್ಲಿ 132 ರನ್​ ಸಿಡಿಸಿದ್ದರು.

3 / 5
ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ರಾಹುಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ಶತಕಗಳನ್ನು ಸಿಡಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 60 ಎಸೆತಗಳಲ್ಲಿ 103 ರನ್ ಬಾರಿಸಿದ್ದ ಕನ್ನಡಿಗ, ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧವೇ ದ್ವಿತೀಯ ಪಂದ್ಯದಲ್ಲಿ 62 ಎಸೆತಗಳಲ್ಲಿ 103 ರನ್ ಚಚ್ಚಿದ್ದರು.

ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ರಾಹುಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ಶತಕಗಳನ್ನು ಸಿಡಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 60 ಎಸೆತಗಳಲ್ಲಿ 103 ರನ್ ಬಾರಿಸಿದ್ದ ಕನ್ನಡಿಗ, ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧವೇ ದ್ವಿತೀಯ ಪಂದ್ಯದಲ್ಲಿ 62 ಎಸೆತಗಳಲ್ಲಿ 103 ರನ್ ಚಚ್ಚಿದ್ದರು.

4 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ 112 ರನ್ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ತಂಡಗಳ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೆಎಲ್​ಆರ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ 112 ರನ್ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ತಂಡಗಳ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೆಎಲ್​ಆರ್ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:30 am, Mon, 19 May 25

Follow us
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ