AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

IPL 2025 KL Rahul: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-17 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಖರೀದಿಸಿದೆ. ಅದು ಕೂಡ ಬರೋಬ್ಬರಿ 14 ಕೋಟಿ ರೂ. ನೀಡುವ ಮೂಲಕ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 13, 2025 | 9:04 AM

Share
ಚೊಚ್ಚಲ ಐಸಿಸಿ ಟ್ರೋಫಿ ಗೆದ್ದ ಖುಷಿಯಲ್ಲಿರುವ ಕೆಎಲ್ ರಾಹುಲ್ ಮುಂಬರುವ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಈ ಬಾರಿಯ ಟೂರ್ನಿಯ ಮೊದಲಾರ್ಧದ ಕೆಲ ಪಂದ್ಯಗಳಿಂದ ಕನ್ನಡಿಗ ಹೊರಗುಳಿಯಲಿದ್ದು, ಏಪ್ರಿಲ್ ಮಧ್ಯ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಚೊಚ್ಚಲ ಐಸಿಸಿ ಟ್ರೋಫಿ ಗೆದ್ದ ಖುಷಿಯಲ್ಲಿರುವ ಕೆಎಲ್ ರಾಹುಲ್ ಮುಂಬರುವ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಈ ಬಾರಿಯ ಟೂರ್ನಿಯ ಮೊದಲಾರ್ಧದ ಕೆಲ ಪಂದ್ಯಗಳಿಂದ ಕನ್ನಡಿಗ ಹೊರಗುಳಿಯಲಿದ್ದು, ಏಪ್ರಿಲ್ ಮಧ್ಯ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಇದಕ್ಕೆ ಮುಖ್ಯ ಕಾರಣ ಕೆಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿ ದಂಪತಿ ಮೊದಲ ಮಗುವಿನ ನಿರೀಕ್ದೆಯಲ್ಲಿರುವುದು. ಗರ್ಭಿಣಿಯಾಗಿರುವ ಆಥಿಯಾಗೆ ವೈದ್ಯರು ಮುಂದಿನ ತಿಂಗಳು ಡೆಲಿವರಿ ಡೇಟ್ ನೀಡಿದ್ದಾರೆ. ಹೀಗಾಗಿ ಏಪ್ರಿಲ್​ನಲ್ಲಿ ಕೆಎಲ್ ರಾಹುಲ್ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಲಿದೆ.

ಇದಕ್ಕೆ ಮುಖ್ಯ ಕಾರಣ ಕೆಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿ ದಂಪತಿ ಮೊದಲ ಮಗುವಿನ ನಿರೀಕ್ದೆಯಲ್ಲಿರುವುದು. ಗರ್ಭಿಣಿಯಾಗಿರುವ ಆಥಿಯಾಗೆ ವೈದ್ಯರು ಮುಂದಿನ ತಿಂಗಳು ಡೆಲಿವರಿ ಡೇಟ್ ನೀಡಿದ್ದಾರೆ. ಹೀಗಾಗಿ ಏಪ್ರಿಲ್​ನಲ್ಲಿ ಕೆಎಲ್ ರಾಹುಲ್ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಲಿದೆ.

2 / 5
ಇತ್ತ ಪತ್ನಿಯೊಂದಿಗೆ ಸಮಯ ಕಳೆಯುವ ಉದ್ದೇಶದಿಂದಾಗಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ಮೂರು-ನಾಲ್ಕು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಹೀಗಾಗಿ ಅವರು ಏಪ್ರಿಲ್ ಮಧ್ಯ ಭಾಗದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತ ಪತ್ನಿಯೊಂದಿಗೆ ಸಮಯ ಕಳೆಯುವ ಉದ್ದೇಶದಿಂದಾಗಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ಮೂರು-ನಾಲ್ಕು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಹೀಗಾಗಿ ಅವರು ಏಪ್ರಿಲ್ ಮಧ್ಯ ಭಾಗದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರಿಗೆ ನಾಯಕತ್ವ ನೀಡಲು ಆಸಕ್ತಿ ತೋರಿದ್ದರು. ಆದರೆ ಕನ್ನಡಿಗ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. ಅಲ್ಲದೆ ಈ ಬಾರಿ ಆಟಗಾರನಾಗಿ ತಂಡಕ್ಕೆ ಕೊಡುಗೆ ನೀಡಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಅಥವಾ ಫಾಫ್ ಡುಪ್ಲೆಸಿಸ್ ಮುನ್ನಡೆಸುವ ಸಾಧ್ಯತೆಯಿದೆ.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರಿಗೆ ನಾಯಕತ್ವ ನೀಡಲು ಆಸಕ್ತಿ ತೋರಿದ್ದರು. ಆದರೆ ಕನ್ನಡಿಗ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. ಅಲ್ಲದೆ ಈ ಬಾರಿ ಆಟಗಾರನಾಗಿ ತಂಡಕ್ಕೆ ಕೊಡುಗೆ ನೀಡಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಅಥವಾ ಫಾಫ್ ಡುಪ್ಲೆಸಿಸ್ ಮುನ್ನಡೆಸುವ ಸಾಧ್ಯತೆಯಿದೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ