AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್​ಗೆ ಹೆಚ್ಚುವರಿ ಜವಾಬ್ದಾರಿ

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಇತ್ತ ತಂಡದಲ್ಲಿರುವ ಅನುಭವಿ ಆಟಗಾರ ಫಾಫ್ ಡುಪ್ಲೆಸಿಸ್​ಗೆ ಉಪನಾಯಕನ ಪಟ್ಟ ನೀಡಲಾಗಿದೆ. ಹಾಗೆಯೇ ಮತ್ತೋರ್ವ ಅನುಭವಿ ದಾಂಡಿಗ ಕೆಎಲ್ ರಾಹುಲ್​ಗೆ ಮಧ್ಯಮ ಕ್ರಮಾಂಕದ ಜವಾಬ್ದಾರಿವಹಿಸಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Mar 19, 2025 | 7:34 AM

Share
ಐಪಿಎಲ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸುವಲ್ಲಿ ನಿರವಾಗಿದೆ. ಅತ್ತ ಆಡುವ ಬಳಗದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕನ್ನಡಿಗ ಕೆಎಲ್ ರಾಹುಲ್​ಗೆ ಹೆಚ್ಚಿನ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.

ಐಪಿಎಲ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸುವಲ್ಲಿ ನಿರವಾಗಿದೆ. ಅತ್ತ ಆಡುವ ಬಳಗದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕನ್ನಡಿಗ ಕೆಎಲ್ ರಾಹುಲ್​ಗೆ ಹೆಚ್ಚಿನ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಬಾರಿ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದಿಲ್ಲ. ತಂಡದಲ್ಲಿ ಸ್ಪೋಟಕ ಓಪನರ್​ಗಳಾಗಿ ಫಾಫ್ ಡುಪ್ಲೆಸಿಸ್ ಹಾಗೂ  ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇದ್ದಾರೆ. ಹೀಗಾಗಿ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಬಾರಿ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದಿಲ್ಲ. ತಂಡದಲ್ಲಿ ಸ್ಪೋಟಕ ಓಪನರ್​ಗಳಾಗಿ ಫಾಫ್ ಡುಪ್ಲೆಸಿಸ್ ಹಾಗೂ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇದ್ದಾರೆ. ಹೀಗಾಗಿ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

2 / 5
ಇತ್ತೀಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾಗೆ ಗೆಲುವು ತಂದುಕೊಡುವಲ್ಲಿ ಅವರು ಯಶಸ್ವಿಯಾಗಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಕೆಎಲ್​ಆರ್​ಗೆ ವಹಿಸಲು ನಿರ್ಧರಿಸಿದೆ.

ಇತ್ತೀಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾಗೆ ಗೆಲುವು ತಂದುಕೊಡುವಲ್ಲಿ ಅವರು ಯಶಸ್ವಿಯಾಗಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಕೆಎಲ್​ಆರ್​ಗೆ ವಹಿಸಲು ನಿರ್ಧರಿಸಿದೆ.

3 / 5
ಈ ಹಿಂದೆ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಆರಂಭಿಕನಾಗಿ ಆಡಿದ್ದೇ ಹೆಚ್ಚು. ಆದರೆ ಡೆಲ್ಲಿ ಕ್ಯಾಪಿಟಲ್ಸ್​ ಪರ ಅಗ್ರ ಕ್ರಮಾಂಕಗಳಲ್ಲಿ ಕಣಕ್ಕಿಳಿಯಲು ಫಾಫ್ ಡುಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕರುಣ್ ನಾಯರ್​ನಂತಹ ಆಟಗಾರರಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಹ ಅವರೇ ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಆರಂಭಿಕನಾಗಿ ಆಡಿದ್ದೇ ಹೆಚ್ಚು. ಆದರೆ ಡೆಲ್ಲಿ ಕ್ಯಾಪಿಟಲ್ಸ್​ ಪರ ಅಗ್ರ ಕ್ರಮಾಂಕಗಳಲ್ಲಿ ಕಣಕ್ಕಿಳಿಯಲು ಫಾಫ್ ಡುಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕರುಣ್ ನಾಯರ್​ನಂತಹ ಆಟಗಾರರಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಹ ಅವರೇ ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

5 / 5
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ