AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ಪಂದ್ಯ, 11 ಕೋಟಿ ರೂ: ಐಪಿಎಲ್​ಗೆ ಟೀಮ್ ಇಂಡಿಯಾ ವೇಗಿ ಡೌಟ್..!

IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಯಾಂಕ್ ಯಾದವ್ ಕಳೆದ ಸೀಸನ್​ನಲ್ಲಿ ಆಡಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಗಮನ ಸೆಳೆದ ಮಯಾಂಕ್ ಅವರನ್ನು ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಆದರೆ ಇದೀಗ ಅವರು ಐಪಿಎಲ್ ಸೀಸನ್​-18 ರಲ್ಲಿ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.

ಝಾಹಿರ್ ಯೂಸುಫ್
|

Updated on: Mar 11, 2025 | 9:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗಾಯದ ಚಿಂತೆ ದೂರವಾಗಿಲ್ಲ. ಅದು ಸಹ ಕಳೆದ ಸೀಸನ್​ ವೇಳೆ ಶುರುವಾದ ಗಾಯದ ಚಿಂತೆ. ಹೌದು, ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬೌಲರ್​ ಮಯಾಂಕ್ ಯಾದವ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗಾಯದ ಚಿಂತೆ ದೂರವಾಗಿಲ್ಲ. ಅದು ಸಹ ಕಳೆದ ಸೀಸನ್​ ವೇಳೆ ಶುರುವಾದ ಗಾಯದ ಚಿಂತೆ. ಹೌದು, ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬೌಲರ್​ ಮಯಾಂಕ್ ಯಾದವ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು.

1 / 5
ಹೀಗಾಗಿ ಮಯಾಂಕ್ ಯಾದವ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ 3 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮತ್ತೆ ಗಾಯಗೊಂಡ ಕಾರಣ ಮಯಾಂಕ್ ಯಾದವ್ ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೀಗಾಗಿ ಮಯಾಂಕ್ ಯಾದವ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ 3 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮತ್ತೆ ಗಾಯಗೊಂಡ ಕಾರಣ ಮಯಾಂಕ್ ಯಾದವ್ ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2 / 5
ಇದೀಗ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಆಡಲಿರುವ ಮೊದಲ 7 ಪಂದ್ಯಗಳಲ್ಲಿ ಮಯಾಂಕ್ ಕಾಣಿಸಿಕೊಳ್ಳುವುದಿಲ್ಲ.

ಇದೀಗ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನ ಮೊದಲಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಆಡಲಿರುವ ಮೊದಲ 7 ಪಂದ್ಯಗಳಲ್ಲಿ ಮಯಾಂಕ್ ಕಾಣಿಸಿಕೊಳ್ಳುವುದಿಲ್ಲ.

3 / 5
ಆ ಬಳಿಕ ಅವರು ಸಂಪೂರ್ಣ ಗುಣಮುಖರಾಗಿ ಎನ್​ಸಿಎ ಕಡೆಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಲಭಿಸಿದರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸ್ಪೀಡ್​ಸ್ಟರ್ ಮಯಾಂಕ್ ಯಾದವ್ ಕಣಕ್ಕಿಳಿಯುವುದು ಅನುಮಾನ ಎನ್ನಬಹುದು.

ಆ ಬಳಿಕ ಅವರು ಸಂಪೂರ್ಣ ಗುಣಮುಖರಾಗಿ ಎನ್​ಸಿಎ ಕಡೆಯಿಂದ ಫಿಟ್​ನೆಸ್ ಸರ್ಟಿಫಿಕೇಟ್ ಲಭಿಸಿದರೆ ಮಾತ್ರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸ್ಪೀಡ್​ಸ್ಟರ್ ಮಯಾಂಕ್ ಯಾದವ್ ಕಣಕ್ಕಿಳಿಯುವುದು ಅನುಮಾನ ಎನ್ನಬಹುದು.

4 / 5
ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಝ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಝ್ಕ್​, ಮಯಾಂಕ್ ಯಾದವ್.

ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಝ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಝ್ಕ್​, ಮಯಾಂಕ್ ಯಾದವ್.

5 / 5
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ