AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್​ ತಂಡದ ಪ್ರಮುಖ ಆಟಗಾರ ಅಲಭ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯದಿಂದ ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಆಲ್​ರೌಂಡರ್ ಹೊರಗುಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: May 29, 2025 | 8:23 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ಇಂದು ಚಾಲನೆ ದೊರೆಯಲಿದೆ. ಚಂಡೀಗಢ್​ನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಕಿಂಗ್ಸ್ ಪಡೆಯ ಪ್ರಮುಖ ಆಟಗಾರ ಅಲಭ್ಯರಾಗಿದ್ದಾರೆ.

1 / 5
ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

ಹೌದು, ಪಂಜಾಬ್ ಕಿಂಗ್ಸ್ ತಂಡದ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಪ್ಲೇಆಫ್ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಮಾರ್ಕೊ ಯಾನ್ಸೆನ್ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಯಾನ್ಸೆನ್ ಕಾಣಿಸಿಕೊಳ್ಳುವುದಿಲ್ಲ.

2 / 5
ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 14 ಪಂದ್ಯಗಳನ್ನಾಡಿರುವ ಯಾನ್ಸೆನ್ ಒಟ್ಟು 283 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 434 ರನ್ ನೀಡುವ ಮೂಲಕ ಒಟ್ಟು 16 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್​ನಲ್ಲೂ 75 ರನ್​ಗಳ ಕೊಡುಗೆ ನೀಡಿದ್ದಾರೆ.

3 / 5
ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದೀಗ ಪ್ಲೇಆಫ್ ಪಂದ್ಯಗಳಿಂದ ಮಾರ್ಕೊ ಯಾನ್ಸೆನ್ ಹೊರಗುಳಿಯುತ್ತಿರುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಹಿನ್ನಡೆ ಎನ್ನಬಹುದು. ಇದಾಗ್ಯೂ ಪಂಜಾಬ್ ಪಡೆಯಲ್ಲಿ ಅಫ್ಘಾನಿಸ್ತಾನದ ಆಲ್​ರೌಂಡರ್ ಅಝ್ಮತುಲ್ಲಾ ಒವರ್​ಝಾಹಿ ಇದ್ದು, ಇಂದಿನ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

4 / 5
ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

ಇನ್ನು ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡ ದ್ವಿತೀಯ ಕ್ವಾಲಿಫೈಯರ್ ಆಡಲಿದೆ. ಅಲ್ಲದೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೋತ ತಂಡಕ್ಕೆ ಫೈನಲ್​ಗೆ ಪ್ರವೇಶಿಸಲು ಮತ್ತೊಂದು ಅವಕಾಶ ದೊರೆಯಲಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ