AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಭಾಗಶಃ ತಂಡಗಳ ಒತ್ತಾಯ; ಆರ್​ಸಿಬಿಗೆ ಎದುರಾಯ್ತು ಸಂಕಷ್ಟ..!

IPL 2024: ಮುಂದಿನ ವರ್ಷ ನಡೆಯಲ್ಲಿರುವ ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಸಂಖ್ಯೆಯನ್ನು 4 ರ ಬದಲು 8 ಕ್ಕೆ ಏರಿಸಬೇಕು ಎಂದು ಭಾಗಶಃ ಫ್ರಾಂಚೈಸಿಗಳು ಬಿಸಿಸಿಐ ಮುಂದೆ ಬೇಡಿಕೆ ಇಟ್ಟಿವೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Apr 10, 2024 | 6:07 PM

Share
ಐಪಿಎಲ್ 17ನೇ ಆವೃತ್ತಿಯ ಮೊದಲಾರ್ಧ ಮುಗಿದಿದ್ದು, ಇದೀಗ ದ್ವಿತೀಯಾರ್ಧ ಆರಂಭವಾಗಿದೆ. ಇಲ್ಲಿಯವರೆಗೆ ನಡೆದಿರುವ ಎಲ್ಲಾ ಪಂದ್ಯಗಳು ಅಭಿಮಾನಿಗಳನ್ನು ರಂಜಿಸಲು ಯಶಸ್ವಿಯಾಗಿವೆ. ಈ ನಡುವೆ ಮುಂದಿನ ಐಪಿಎಲ್ ಬಗ್ಗೆ ಚರ್ಚೆ ಶುರುವಾಗಿದ್ದು, ಮುಂದಿನ ವರ್ಷ ನಡೆಯಲ್ಲಿರುವ ಮೆಗಾ ಹರಾಜಿನ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

ಐಪಿಎಲ್ 17ನೇ ಆವೃತ್ತಿಯ ಮೊದಲಾರ್ಧ ಮುಗಿದಿದ್ದು, ಇದೀಗ ದ್ವಿತೀಯಾರ್ಧ ಆರಂಭವಾಗಿದೆ. ಇಲ್ಲಿಯವರೆಗೆ ನಡೆದಿರುವ ಎಲ್ಲಾ ಪಂದ್ಯಗಳು ಅಭಿಮಾನಿಗಳನ್ನು ರಂಜಿಸಲು ಯಶಸ್ವಿಯಾಗಿವೆ. ಈ ನಡುವೆ ಮುಂದಿನ ಐಪಿಎಲ್ ಬಗ್ಗೆ ಚರ್ಚೆ ಶುರುವಾಗಿದ್ದು, ಮುಂದಿನ ವರ್ಷ ನಡೆಯಲ್ಲಿರುವ ಮೆಗಾ ಹರಾಜಿನ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

1 / 8
ವಾಸ್ತವವಾಗಿ ಮುಂದಿನ ವರ್ಷ ಅಂದರೆ 2025 ರ ಐಪಿಎಲ್ ಆರಂಭಕ್ಕೂ ಮುನ್ನ ಮೆಗಾ ಹರಾಜು ನಡೆಯಲ್ಲಿದೆ. ಇದರರ್ಥ ಎಲ್ಲಾ ತಂಡಗಳು ಕೇವಲ 4 ಆಟಗಾರರನ್ನು ಮಾತ್ರ ತಮ್ಮಲ್ಲಿ ಉಳಿಸಿಕೊಂಡು ಮಿಕ್ಕವರೆಲ್ಲರನ್ನು ತಂಡದಿಂದ ಬಿಡುಗಡೆ ಮಾಡಬೇಕು.

ವಾಸ್ತವವಾಗಿ ಮುಂದಿನ ವರ್ಷ ಅಂದರೆ 2025 ರ ಐಪಿಎಲ್ ಆರಂಭಕ್ಕೂ ಮುನ್ನ ಮೆಗಾ ಹರಾಜು ನಡೆಯಲ್ಲಿದೆ. ಇದರರ್ಥ ಎಲ್ಲಾ ತಂಡಗಳು ಕೇವಲ 4 ಆಟಗಾರರನ್ನು ಮಾತ್ರ ತಮ್ಮಲ್ಲಿ ಉಳಿಸಿಕೊಂಡು ಮಿಕ್ಕವರೆಲ್ಲರನ್ನು ತಂಡದಿಂದ ಬಿಡುಗಡೆ ಮಾಡಬೇಕು.

2 / 8
ಹೀಗೆ ತಂಡದಿಂದ ಬಿಡುಗಡೆಯಾದ ಆಟಗಾರರು ಮತ್ತೊಮ್ಮೆ ಹರಾಜಿಗೆ ಬರಲಿದ್ದಾರೆ. ಅಲ್ಲಿ ಕಳೆದ ಆವೃತ್ತಿಗೆ ಅಧಿಕ ಮೊತ್ತ ಅಥವಾ ಕಡಿಮೆ ಮೊತ್ತ ಪಡೆಯಲ್ಲಿದ್ದಾರೆ. ಇದರೊಂದಿಗೆ ಅವರು ಹೊಸ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆದರೆ ಇದೀಗ ಭಾಗಶಃ ಪ್ರಾಂಚೈಸಿಗಳು ಬಿಸಿಸಿಐ ಮುಂದೆ ಒಂದೇ ಬೇಡಿಕೆ ಇಟ್ಟಿವೆ.

ಹೀಗೆ ತಂಡದಿಂದ ಬಿಡುಗಡೆಯಾದ ಆಟಗಾರರು ಮತ್ತೊಮ್ಮೆ ಹರಾಜಿಗೆ ಬರಲಿದ್ದಾರೆ. ಅಲ್ಲಿ ಕಳೆದ ಆವೃತ್ತಿಗೆ ಅಧಿಕ ಮೊತ್ತ ಅಥವಾ ಕಡಿಮೆ ಮೊತ್ತ ಪಡೆಯಲ್ಲಿದ್ದಾರೆ. ಇದರೊಂದಿಗೆ ಅವರು ಹೊಸ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆದರೆ ಇದೀಗ ಭಾಗಶಃ ಪ್ರಾಂಚೈಸಿಗಳು ಬಿಸಿಸಿಐ ಮುಂದೆ ಒಂದೇ ಬೇಡಿಕೆ ಇಟ್ಟಿವೆ.

3 / 8
ಅದೆನೆಂದರೆ ಮುಂದಿನ ವರ್ಷ ನಡೆಯಲ್ಲಿರುವ ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಸಂಖ್ಯೆಯನ್ನು 4 ರ ಬದಲು 8 ಕ್ಕೆ ಏರಿಸಬೇಕು ಎಂದು ಭಾಗಶಃ ಫ್ರಾಂಚೈಸಿಗಳು ಬಿಸಿಸಿಐ ಮುಂದೆ ಬೇಡಿಕೆ ಇಟ್ಟಿವೆ ಎಂದು ವರದಿಯಾಗಿದೆ.

ಅದೆನೆಂದರೆ ಮುಂದಿನ ವರ್ಷ ನಡೆಯಲ್ಲಿರುವ ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಸಂಖ್ಯೆಯನ್ನು 4 ರ ಬದಲು 8 ಕ್ಕೆ ಏರಿಸಬೇಕು ಎಂದು ಭಾಗಶಃ ಫ್ರಾಂಚೈಸಿಗಳು ಬಿಸಿಸಿಐ ಮುಂದೆ ಬೇಡಿಕೆ ಇಟ್ಟಿವೆ ಎಂದು ವರದಿಯಾಗಿದೆ.

4 / 8
ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಬಿಸಿಸಿಐ ಕೂಡ ಫ್ರಾಂಚೈಸಿಗಳ ಈ ಮನವಿಗೆ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಈಗಾಗಲೇ ಬಲಿಷ್ಠ ತಂಡವನ್ನು ಕಟ್ಟಿಕೊಂಡಿರುವ ಮುಂಬೈ, ಚೆನ್ನೈ, ಹೈದರಾಬಾದ್, ರಾಜಸ್ಥಾನ್, ಕೆಕೆಆರ್ ತಂಡಗಳು ತಮಗೆ ಬೇಕಾದ 8 ಆಟಗಾರನನ್ನು ತಮ್ಮಲ್ಲೇ ಉಳಿಸಿಕೊಳ್ಳಲಿವೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಬಿಸಿಸಿಐ ಕೂಡ ಫ್ರಾಂಚೈಸಿಗಳ ಈ ಮನವಿಗೆ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಈಗಾಗಲೇ ಬಲಿಷ್ಠ ತಂಡವನ್ನು ಕಟ್ಟಿಕೊಂಡಿರುವ ಮುಂಬೈ, ಚೆನ್ನೈ, ಹೈದರಾಬಾದ್, ರಾಜಸ್ಥಾನ್, ಕೆಕೆಆರ್ ತಂಡಗಳು ತಮಗೆ ಬೇಕಾದ 8 ಆಟಗಾರನನ್ನು ತಮ್ಮಲ್ಲೇ ಉಳಿಸಿಕೊಳ್ಳಲಿವೆ.

5 / 8
ಮುಂಬರುವ ಹರಾಜಿನಲ್ಲಿ ಉಳಿದಂತೆ ತಮಗೆ ಬೇಕಾದ ಆಟಗಾರನನ್ನು ಖರೀದಿಸಲಿವೆ. ಈ ನಿಯಮ ಜಾರಿಗೆ ಬಂದರೆ ಕೆಲವು ತಂಡಗಳಿಗೆ ಇದು ವರವಾದರೆ ಇನ್ನು ಕೆಲವು ತಂಡಗಳಿಗೆ ಇದು ಶಾಪವಾಗಲಿದೆ. ಅದರಲ್ಲೂ ಯಾವ ವಿಭಾಗದಲ್ಲೂ ಬಲಿಷ್ಠವಾಗಿರದ ಆರ್​ಸಿಬಿ ಕಥೆ ಇನ್ನು ಹೇಳ ತೀರದಾಗುತ್ತದೆ.

ಮುಂಬರುವ ಹರಾಜಿನಲ್ಲಿ ಉಳಿದಂತೆ ತಮಗೆ ಬೇಕಾದ ಆಟಗಾರನನ್ನು ಖರೀದಿಸಲಿವೆ. ಈ ನಿಯಮ ಜಾರಿಗೆ ಬಂದರೆ ಕೆಲವು ತಂಡಗಳಿಗೆ ಇದು ವರವಾದರೆ ಇನ್ನು ಕೆಲವು ತಂಡಗಳಿಗೆ ಇದು ಶಾಪವಾಗಲಿದೆ. ಅದರಲ್ಲೂ ಯಾವ ವಿಭಾಗದಲ್ಲೂ ಬಲಿಷ್ಠವಾಗಿರದ ಆರ್​ಸಿಬಿ ಕಥೆ ಇನ್ನು ಹೇಳ ತೀರದಾಗುತ್ತದೆ.

6 / 8
ಮುಂಬರುವ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಕೇವಲ 2 ರಿಂದ 3 ಆಟಗಾರನನ್ನು ತನ್ನಲ್ಲಿ ಉಳಿಸಿಕೊಂಡು ಮಿಕ್ಕವರನ್ನು ತಂಡದಿಂದ ಬಿಡುಗಡೆ ಮಾಡಿ, ಆ ನಂತರ ಮೆಗಾ ಹರಾಜಿನಲ್ಲಿ ಅವಶ್ಯಕ ಆಟಗಾರರನ್ನು ಖರೀದಿಸುವ ಮೂಲಕ ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿತ್ತು.

ಮುಂಬರುವ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಕೇವಲ 2 ರಿಂದ 3 ಆಟಗಾರನನ್ನು ತನ್ನಲ್ಲಿ ಉಳಿಸಿಕೊಂಡು ಮಿಕ್ಕವರನ್ನು ತಂಡದಿಂದ ಬಿಡುಗಡೆ ಮಾಡಿ, ಆ ನಂತರ ಮೆಗಾ ಹರಾಜಿನಲ್ಲಿ ಅವಶ್ಯಕ ಆಟಗಾರರನ್ನು ಖರೀದಿಸುವ ಮೂಲಕ ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿತ್ತು.

7 / 8
ಆದರೀಗ 8 ಆಟಗಾರನನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು ಎಂಬ ನಿಯಮ ಜಾರಿಗೆ ಬಂದರೆ, ಆರ್​ಸಿಬಿಗೆ ಬೇಕಾದ ಆಟಗಾರರು ಹರಾಜಿಗೆ ಬರಲು ಸಾಧ್ಯವಿಲ್ಲ. ಪ್ರಮುಖ ಆಟಗಾರನನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಳ್ಳುವುದರಿಂದ ಆರ್​ಸಿಬಿ ಮತ್ತೊಮ್ಮೆ ಅನಗತ್ಯ ಆಟಗಾರರ ಮೊರೆ ಹೋಗಬೇಕಾಗುತ್ತದೆ. ಇದರ ಪರಿಣಾಮವಾಗಿ ತಂಡ ಮತ್ತೆ ಕಳಪೆ ಆಟದಿಂದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.

ಆದರೀಗ 8 ಆಟಗಾರನನ್ನು ತಂಡದಲ್ಲಿ ಉಳಿಸಿಕೊಳ್ಳಬಹುದು ಎಂಬ ನಿಯಮ ಜಾರಿಗೆ ಬಂದರೆ, ಆರ್​ಸಿಬಿಗೆ ಬೇಕಾದ ಆಟಗಾರರು ಹರಾಜಿಗೆ ಬರಲು ಸಾಧ್ಯವಿಲ್ಲ. ಪ್ರಮುಖ ಆಟಗಾರನನ್ನು ಫ್ರಾಂಚೈಸಿಗಳು ತಮ್ಮಲ್ಲೇ ಉಳಿಸಿಕೊಳ್ಳುವುದರಿಂದ ಆರ್​ಸಿಬಿ ಮತ್ತೊಮ್ಮೆ ಅನಗತ್ಯ ಆಟಗಾರರ ಮೊರೆ ಹೋಗಬೇಕಾಗುತ್ತದೆ. ಇದರ ಪರಿಣಾಮವಾಗಿ ತಂಡ ಮತ್ತೆ ಕಳಪೆ ಆಟದಿಂದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ