Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಸಿಕ್ತು ಸೂಪರ್ ಸಿಹಿ ಸುದ್ದಿ

IPL 2025: 2025ರ ಐಪಿಎಲ್‌ಗೆ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಗಾಯದಿಂದ ಚೇತರಿಸಿಕೊಂಡಿದ್ದು, ಐಪಿಎಲ್‌ನಲ್ಲಿ ಆಡಲು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಆದಾಗ್ಯೂ, ಈ ಬಾರಿ ಅವರು ಕೇವಲ ಬ್ಯಾಟ್ಸ್‌ಮನ್ ಆಗಿ ಆಡಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Mar 13, 2025 | 10:18 PM

2025 ರ ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೂಪರ್ ಸುದ್ದಿಯೊಂದು ಸಿಕ್ಕಿದೆ. ಇದೇ ಮೊದಲ ಬಾರಿಗೆ ರಿಷಬ್ ಪಂತ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ತಂಡ ಲೀಗ್ ಆರಂಭಕ್ಕೂ ಮುನ್ನವೇ ಸ್ಟಾರ್ ಆಟಗಾರನ ಅಲಭ್ಯತೆಯ ಭಯಕ್ಕೀಡಾಗಿತ್ತು. ಆದರೀಗ ಆ ಸ್ಟಾರ್ ಆಟಗಾರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಐಪಿಎಲ್​ಗೆ ಲಭ್ಯರಾಗಿದ್ದಾರೆ ಎಂದು ವರದಿಯಾಗಿದೆ.

2025 ರ ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೂಪರ್ ಸುದ್ದಿಯೊಂದು ಸಿಕ್ಕಿದೆ. ಇದೇ ಮೊದಲ ಬಾರಿಗೆ ರಿಷಬ್ ಪಂತ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ತಂಡ ಲೀಗ್ ಆರಂಭಕ್ಕೂ ಮುನ್ನವೇ ಸ್ಟಾರ್ ಆಟಗಾರನ ಅಲಭ್ಯತೆಯ ಭಯಕ್ಕೀಡಾಗಿತ್ತು. ಆದರೀಗ ಆ ಸ್ಟಾರ್ ಆಟಗಾರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಐಪಿಎಲ್​ಗೆ ಲಭ್ಯರಾಗಿದ್ದಾರೆ ಎಂದು ವರದಿಯಾಗಿದೆ.

1 / 5
ಇಎಸ್‌ಪಿಎನ್ ಕ್ರಿಕ್‌ಇನ್ಫೊ ಪ್ರಕಾರ, ಆಸ್ಟ್ರೇಲಿಯಾ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಇದೀಗ ಇಂಜುರಿಯಿಂದ ಚೇತರಿಸಿಕೊಂಡಿದ್ದು, ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಹೀಗಾಗಿ ಇಷ್ಟು ದಿನ ಅವರ ಅಲಭ್ಯತೆಯ ಬಗ್ಗೆ ಚಿಂತೆಗೀಡಾಗಿದ್ದ ಲಕ್ನೋ ತಂಡಕ್ಕೆ ಆನೆ ಬಲ ಬಂದಂತ್ತಾಗಿದೆ. ಆದರೆ ಮಾರ್ಷ್​ ಈ ಬಾರಿಯ ಐಪಿಎಲ್‌ನಲ್ಲಿ ಕೇವಲ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯಲಿದ್ದಾರೆ ಎಂದಉ ವರದಿಯಾಗಿದೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೊ ಪ್ರಕಾರ, ಆಸ್ಟ್ರೇಲಿಯಾ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಇದೀಗ ಇಂಜುರಿಯಿಂದ ಚೇತರಿಸಿಕೊಂಡಿದ್ದು, ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಹೀಗಾಗಿ ಇಷ್ಟು ದಿನ ಅವರ ಅಲಭ್ಯತೆಯ ಬಗ್ಗೆ ಚಿಂತೆಗೀಡಾಗಿದ್ದ ಲಕ್ನೋ ತಂಡಕ್ಕೆ ಆನೆ ಬಲ ಬಂದಂತ್ತಾಗಿದೆ. ಆದರೆ ಮಾರ್ಷ್​ ಈ ಬಾರಿಯ ಐಪಿಎಲ್‌ನಲ್ಲಿ ಕೇವಲ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯಲಿದ್ದಾರೆ ಎಂದಉ ವರದಿಯಾಗಿದೆ.

2 / 5
ವಾಸ್ತವವಾಗಿ 2025 ರ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮಿಚೆಲ್ ಮಾರ್ಷ್ ಗಾಯಗೊಂಡಿದ್ದರು. ಇದರಿಂದಾಗಿ ಅವರು 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಕಳೆದುಕೊಳ್ಳಬೇಕಾಯಿತು. ಹಲವು ತಿಂಗಳುಗಳ ಕಾಲ ಕ್ರಿಕೆಟ್ ಚಟುವಟಿಕೆಯಿಂದ ದೂರ ಉಳಿದಿದ್ದ ಮಾರ್ಷ್ ಈಗ ಮೈದಾನಕ್ಕೆ ಮರಳಲು ಸಿದ್ಧರಾಗಿದ್ದಾರೆ. ಮಾರ್ಷ್ ಕಳೆದ ಸೀಸಿನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.

ವಾಸ್ತವವಾಗಿ 2025 ರ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮಿಚೆಲ್ ಮಾರ್ಷ್ ಗಾಯಗೊಂಡಿದ್ದರು. ಇದರಿಂದಾಗಿ ಅವರು 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಕಳೆದುಕೊಳ್ಳಬೇಕಾಯಿತು. ಹಲವು ತಿಂಗಳುಗಳ ಕಾಲ ಕ್ರಿಕೆಟ್ ಚಟುವಟಿಕೆಯಿಂದ ದೂರ ಉಳಿದಿದ್ದ ಮಾರ್ಷ್ ಈಗ ಮೈದಾನಕ್ಕೆ ಮರಳಲು ಸಿದ್ಧರಾಗಿದ್ದಾರೆ. ಮಾರ್ಷ್ ಕಳೆದ ಸೀಸಿನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.

3 / 5
ಇದೀಗ ಲಕ್ನೋ ತಂಡವನ್ನು ಸೇರಿಕೊಂಡಿರುವ ಮಾರ್ಷ್​ ಅವರ ಐಪಿಎಲ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಇದುವರೆಗೆ ಆಡಿರುವ 42 ಪಂದ್ಯಗಳಲ್ಲಿ 19.55 ಸರಾಸರಿಯಲ್ಲಿ 3 ಅರ್ಧಶತಕಗಳನ್ನು ಒಳಗೊಂಡಂತೆ 665 ರನ್ ಗಳಿಸಿದ್ದಾರೆ. ಆದರೆ, ಕಳೆದ ಸೀಸನ್​ನಲ್ಲಿ ಕಳಪೆ ಫಾರ್ಮ್​ಗೆ ತುತ್ತಾಗಿದ್ದ ಮಾರ್ಷ್, ಆಡಿದ 4 ಪಂದ್ಯಗಳಲ್ಲಿ ಕೇವಲ 61 ರನ್ ಗಳಿಸಿದರು ಮತ್ತು ಬೌಲಿಂಗ್‌ನಲ್ಲೂ ಸಪ್ಪೆ ಪ್ರದರ್ಶನ ನೀಡಿದ್ದರು.

ಇದೀಗ ಲಕ್ನೋ ತಂಡವನ್ನು ಸೇರಿಕೊಂಡಿರುವ ಮಾರ್ಷ್​ ಅವರ ಐಪಿಎಲ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಇದುವರೆಗೆ ಆಡಿರುವ 42 ಪಂದ್ಯಗಳಲ್ಲಿ 19.55 ಸರಾಸರಿಯಲ್ಲಿ 3 ಅರ್ಧಶತಕಗಳನ್ನು ಒಳಗೊಂಡಂತೆ 665 ರನ್ ಗಳಿಸಿದ್ದಾರೆ. ಆದರೆ, ಕಳೆದ ಸೀಸನ್​ನಲ್ಲಿ ಕಳಪೆ ಫಾರ್ಮ್​ಗೆ ತುತ್ತಾಗಿದ್ದ ಮಾರ್ಷ್, ಆಡಿದ 4 ಪಂದ್ಯಗಳಲ್ಲಿ ಕೇವಲ 61 ರನ್ ಗಳಿಸಿದರು ಮತ್ತು ಬೌಲಿಂಗ್‌ನಲ್ಲೂ ಸಪ್ಪೆ ಪ್ರದರ್ಶನ ನೀಡಿದ್ದರು.

4 / 5
ಲಕ್ನೋ ತಂಡ: ರಿಷಬ್ ಪಂತ್ (ನಾಯಕ), ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್‌ರಾಮ್, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಸ್ನೋಯ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಜ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಜ್ಕೆ

ಲಕ್ನೋ ತಂಡ: ರಿಷಬ್ ಪಂತ್ (ನಾಯಕ), ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್‌ರಾಮ್, ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ರವಿ ಬಿಸ್ನೋಯ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಜ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಜ್ಕೆ

5 / 5
Follow us
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು