AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಬೆಂಕಿ ಬೌಲಿಂಗ್​ನೊಂದಿಗೆ ದಾಖಲೆ ಬರೆದ ಮೊಹಮ್ಮದ್ ಸಿರಾಜ್

IPL 2025: ಮೊಹಮ್ಮದ್ ಸಿರಾಜ್ ಆರ್​ಸಿಬಿ ಪರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 21 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಮ್ಮೆಯೂ ಪವರ್​ಪ್ಲೇನಲ್ಲಿ ಇಬ್ಬರನ್ನು ಬೌಲ್ಡ್ ಮಾಡಿರಲಿಲ್ಲ. ಅಲ್ಲದೆ 4 ಓವರ್​ಗಳಲ್ಲಿ ಒಮ್ಮೆಯೂ 20 ಕ್ಕಿಂತ ಕಡಿಮೆ ರನ್ ನೀಡಿರಲಿಲ್ಲ. ಆದರೆ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಪರಾಕ್ರಮ ಮೆರೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Apr 03, 2025 | 7:39 AM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ (Mohammed Siraj) ಕಮಾಲ್ ಮಾಡಿದ್ದಾರೆ. ಅದು ಕೂಡ ಬೆಂಕಿ ಬೌಲಿಂಗ್ ಮೂಲಕ. ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ (Mohammed Siraj) ಕಮಾಲ್ ಮಾಡಿದ್ದಾರೆ. ಅದು ಕೂಡ ಬೆಂಕಿ ಬೌಲಿಂಗ್ ಮೂಲಕ. ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ಆರ್​ಸಿಬಿ ತಂಡದ ಮಾಜಿ ವೇಗಿ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು. ಪವರ್​ಪ್ಲೇನಲ್ಲೇ ದೇವದತ್ ಪಡಿಕ್ಕಲ್ ಹಾಗೂ ಫಿಲ್ ಸಾಲ್ಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಸಿರಾಜ್, ಆರ್​ಸಿಬಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಆ ಬಳಿಕ ಲಿಯಾಮ್ ಲಿವಿಂಗ್​ಸ್ಟೋನ್ ವಿಕೆಟ್ ಕಬಳಿಸಿದರು.

ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ಆರ್​ಸಿಬಿ ತಂಡದ ಮಾಜಿ ವೇಗಿ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು. ಪವರ್​ಪ್ಲೇನಲ್ಲೇ ದೇವದತ್ ಪಡಿಕ್ಕಲ್ ಹಾಗೂ ಫಿಲ್ ಸಾಲ್ಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಸಿರಾಜ್, ಆರ್​ಸಿಬಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಆ ಬಳಿಕ ಲಿಯಾಮ್ ಲಿವಿಂಗ್​ಸ್ಟೋನ್ ವಿಕೆಟ್ ಕಬಳಿಸಿದರು.

2 / 5
ಹೀಗೆ 4 ಓವರ್​ಗಳಲ್ಲಿ ಮೊಹಮ್ಮದ್ ಸಿರಾಜ್ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿರುವುದು ವಿಶೇಷವಾಗಿತ್ತು. ಇದುವೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಹಮ್ಮದ್ ಸಿರಾಜ್ ಅವರ ಬೆಸ್ಟ್ ಬೌಲಿಂಗ್ ಫಿಗರ್ ಎಂದರೆ ನಂಬಲೇಬೇಕು. ಕಳೆದ 7 ವರ್ಷಗಳ ಕಾಲ ಆರ್​ಸಿಬಿ ಪರ ಆಡಿದ್ದ ಸಿರಾಜ್ ಬೆಂಗಳೂರಿನಲ್ಲಿ ಒಮ್ಮೆಯೂ ಇಂತಹದೊಂದು ಪ್ರದರ್ಶನ ನೀಡಿರಲಿಲ್ಲ.

ಹೀಗೆ 4 ಓವರ್​ಗಳಲ್ಲಿ ಮೊಹಮ್ಮದ್ ಸಿರಾಜ್ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿರುವುದು ವಿಶೇಷವಾಗಿತ್ತು. ಇದುವೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಹಮ್ಮದ್ ಸಿರಾಜ್ ಅವರ ಬೆಸ್ಟ್ ಬೌಲಿಂಗ್ ಫಿಗರ್ ಎಂದರೆ ನಂಬಲೇಬೇಕು. ಕಳೆದ 7 ವರ್ಷಗಳ ಕಾಲ ಆರ್​ಸಿಬಿ ಪರ ಆಡಿದ್ದ ಸಿರಾಜ್ ಬೆಂಗಳೂರಿನಲ್ಲಿ ಒಮ್ಮೆಯೂ ಇಂತಹದೊಂದು ಪ್ರದರ್ಶನ ನೀಡಿರಲಿಲ್ಲ.

3 / 5
ಅಂದರೆ ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್​ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿದ್ದಾರೆ. ಅಲ್ಲದೆ ಪವರ್​ಪ್ಲೇನಲ್ಲಿ ಇಬ್ಬರನ್ನು ಇದೇ ಮೊದಲ ಬಾರಿಗೆ ಬೌಲ್ಡ್ ಮಾಡಿದ್ದಾರೆ. ಈ ಮೂಲಕ ಕೈ ಬಿಟ್ಟಿದ್ದ ಆರ್​ಸಿಬಿ ವಿರುದ್ಧ ಮೊಹಮ್ಮದ್ ಸಿರಾಜ್ ಲೆಕ್ಕವನ್ನು ಚುಕ್ತಾ ಮಾಡಿದ್ದಾರೆ.

ಅಂದರೆ ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್​ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿದ್ದಾರೆ. ಅಲ್ಲದೆ ಪವರ್​ಪ್ಲೇನಲ್ಲಿ ಇಬ್ಬರನ್ನು ಇದೇ ಮೊದಲ ಬಾರಿಗೆ ಬೌಲ್ಡ್ ಮಾಡಿದ್ದಾರೆ. ಈ ಮೂಲಕ ಕೈ ಬಿಟ್ಟಿದ್ದ ಆರ್​ಸಿಬಿ ವಿರುದ್ಧ ಮೊಹಮ್ಮದ್ ಸಿರಾಜ್ ಲೆಕ್ಕವನ್ನು ಚುಕ್ತಾ ಮಾಡಿದ್ದಾರೆ.

4 / 5
ಅಲ್ಲದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್​ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿ ಐಪಿಎಲ್​ನ ಸಕ್ರಿಯ ಬೌಲರ್ ಎಂಬ ದಾಖಲೆಯನ್ನು ಸಹ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ 7 ವರ್ಷಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಾಧ್ಯವಾಗದ ಸಾಧನೆಯನ್ನು ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲೇ ಸಾಧಿಸಿರುವುದೇ ವಿಶೇಷ.

ಅಲ್ಲದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್​ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿ ಐಪಿಎಲ್​ನ ಸಕ್ರಿಯ ಬೌಲರ್ ಎಂಬ ದಾಖಲೆಯನ್ನು ಸಹ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ 7 ವರ್ಷಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಾಧ್ಯವಾಗದ ಸಾಧನೆಯನ್ನು ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲೇ ಸಾಧಿಸಿರುವುದೇ ವಿಶೇಷ.

5 / 5

Published On - 7:31 am, Thu, 3 April 25

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ