AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿ ಕಪ್ ಗೆಲ್ಲಬೇಕೆಂದರೆ ಮುಂಬೈ ಫೈನಲ್​ಗೇರಲೇಬಾರದು..!

Mumbai Indians vs Punjab Kings Qualifier 2: ಐಪಿಎಲ್ 2025ರ ಕ್ವಾಲಿಫೈಯರ್ 2ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಐದನೇ ಬಾರಿ ಕ್ವಾಲಿಫೈಯರ್ 2 ಆಡುತ್ತಿದ್ದು, ಇದಕ್ಕೂ ಮೊದಲು ನಾಲ್ಕು ಬಾರಿ ಆಡಿದ್ದ ಕ್ವಾಲಿಫೈಯರ್ ಪಂದ್ಯಗಳ ಪೈಕಿ ಎರಡು ಬಾರಿ ಗೆದ್ದು ಐಪಿಎಲ್ ಪ್ರಶಸ್ತಿಯನ್ನು ಸಹ ಗೆದ್ದಿದೆ. ಅಂದರೆ ಮುಂಬೈ ಕ್ವಾಲಿಫೈಯರ್ 2 ಗೆದ್ದು ಫೈನಲ್​ಗೇರಿದರೆ ಆರ್​ಸಿಬಿಗೆ ಸಂಕಷ್ಟ ತಪ್ಪಿದಲ್ಲ.

ಪೃಥ್ವಿಶಂಕರ
|

Updated on:May 31, 2025 | 9:28 PM

Share
ಐಪಿಎಲ್ 2025 ಈಗ ಅಂತಿಮ ಹಂತಕ್ಕೆ ಬಂದಿದೆ, ಈ ಸೀಸನ್‌ನಲ್ಲಿ ಇನ್ನ ಕೇವಲ 2 ಪಂದ್ಯಗಳು ಮಾತ್ರ ಉಳಿದಿವೆ. ಜೂನ್ 1 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ -2 ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಐಪಿಎಲ್ 2025 ಈಗ ಅಂತಿಮ ಹಂತಕ್ಕೆ ಬಂದಿದೆ, ಈ ಸೀಸನ್‌ನಲ್ಲಿ ಇನ್ನ ಕೇವಲ 2 ಪಂದ್ಯಗಳು ಮಾತ್ರ ಉಳಿದಿವೆ. ಜೂನ್ 1 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ -2 ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

1 / 7
ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್, ಆರ್‌ಸಿಬಿ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ನಂತರ ಮುಂಬೈ ಇಂಡಿಯನ್ಸ್  ಕ್ವಾಲಿಫೈಯರ್ 2 ಕ್ಕೆ ಅರ್ಹತೆ ಪಡೆದುಕೊಂಡಿದೆ.

ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್, ಆರ್‌ಸಿಬಿ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ನಂತರ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್ 2 ಕ್ಕೆ ಅರ್ಹತೆ ಪಡೆದುಕೊಂಡಿದೆ.

2 / 7
ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಕ್ವಾಲಿಫೈಯರ್ -2 ಆಡುತ್ತಿರುವುದು ಇದು 5 ನೇ ಬಾರಿಯಾಗಲಿದೆ. ಕ್ವಾಲಿಫೈಯರ್-2 ರಲ್ಲಿ ಮುಂಬೈ ತಂಡದ ಪ್ರದರ್ಶನ ಉತ್ತಮವಾಗಿದ್ದು, ಆರ್‌ಸಿಬಿಯ ಹಾಗೂ ಅದರ ಅಭಿಮಾನಿಗಳ ಆತಂಕವನ್ನು ಹೆಚ್ಚಿಸುವ ಅಂಕಿಅಂಶಗಳೂ ಇವೆ.

ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಕ್ವಾಲಿಫೈಯರ್ -2 ಆಡುತ್ತಿರುವುದು ಇದು 5 ನೇ ಬಾರಿಯಾಗಲಿದೆ. ಕ್ವಾಲಿಫೈಯರ್-2 ರಲ್ಲಿ ಮುಂಬೈ ತಂಡದ ಪ್ರದರ್ಶನ ಉತ್ತಮವಾಗಿದ್ದು, ಆರ್‌ಸಿಬಿಯ ಹಾಗೂ ಅದರ ಅಭಿಮಾನಿಗಳ ಆತಂಕವನ್ನು ಹೆಚ್ಚಿಸುವ ಅಂಕಿಅಂಶಗಳೂ ಇವೆ.

3 / 7
2011 ರಿಂದ ಐಪಿಎಲ್‌ನಲ್ಲಿ ಪ್ಲೇಆಫ್ ಪರಿಚಯಿಸಲಾಯಿತು. ಅಂದಿನಿಂದ ಮುಂಬೈ ಇಂಡಿಯನ್ಸ್ ನಾಲ್ಕು ಬಾರಿ ಕ್ವಾಲಿಫೈಯರ್ -2 ಪಂದ್ಯವನ್ನು ಆಡಿದೆ. ಇದರಲ್ಲಿ 2 ಪಂದ್ಯಗಳನ್ನು ಗೆದ್ದಿದ್ದರೆ, 2 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಆದರೆ ವಿಶೇಷವೆಂದರೆ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್-2 ಪಂದ್ಯವನ್ನು ಗೆದ್ದಾಗಲೆಲ್ಲಾ, ಪ್ರಶಸ್ತಿಯನ್ನು ಗೆಲ್ಲುವಲ್ಲಿಯೂ ಯಶಸ್ವಿಯಾಗಿದೆ.

2011 ರಿಂದ ಐಪಿಎಲ್‌ನಲ್ಲಿ ಪ್ಲೇಆಫ್ ಪರಿಚಯಿಸಲಾಯಿತು. ಅಂದಿನಿಂದ ಮುಂಬೈ ಇಂಡಿಯನ್ಸ್ ನಾಲ್ಕು ಬಾರಿ ಕ್ವಾಲಿಫೈಯರ್ -2 ಪಂದ್ಯವನ್ನು ಆಡಿದೆ. ಇದರಲ್ಲಿ 2 ಪಂದ್ಯಗಳನ್ನು ಗೆದ್ದಿದ್ದರೆ, 2 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಆದರೆ ವಿಶೇಷವೆಂದರೆ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್-2 ಪಂದ್ಯವನ್ನು ಗೆದ್ದಾಗಲೆಲ್ಲಾ, ಪ್ರಶಸ್ತಿಯನ್ನು ಗೆಲ್ಲುವಲ್ಲಿಯೂ ಯಶಸ್ವಿಯಾಗಿದೆ.

4 / 7
2013ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ತಂಡವನ್ನು ಸೋಲಿಸಿತ್ತು. ಇದಾದ ನಂತರ, ಫೈನಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2013ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ತಂಡವನ್ನು ಸೋಲಿಸಿತ್ತು. ಇದಾದ ನಂತರ, ಫೈನಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

5 / 7
ಅದೇ ರೀತಿ, 2017 ರಲ್ಲಿಯೂ ಸಹ ಮುಂಬೈ ಕ್ವಾಲಿಫೈಯರ್ -2 ಗೆದ್ದು, ಆ ನಂತರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡವನ್ನು ಸೋಲಿಸಿತ್ತು. ಆ ಬಳಿಕ 2023 ರಲ್ಲಿ ಕ್ವಾಲಿಫೈಯರ್ 2 ಆಡಿದ್ದ ಮುಂಬೈ ಇಂಡಿಯನ್ಸ್, ಆ ಪಂದ್ಯದಲ್ಲಿ ಸೋಲನ್ನು ಎದುರಿಸಿತ್ತು.

ಅದೇ ರೀತಿ, 2017 ರಲ್ಲಿಯೂ ಸಹ ಮುಂಬೈ ಕ್ವಾಲಿಫೈಯರ್ -2 ಗೆದ್ದು, ಆ ನಂತರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡವನ್ನು ಸೋಲಿಸಿತ್ತು. ಆ ಬಳಿಕ 2023 ರಲ್ಲಿ ಕ್ವಾಲಿಫೈಯರ್ 2 ಆಡಿದ್ದ ಮುಂಬೈ ಇಂಡಿಯನ್ಸ್, ಆ ಪಂದ್ಯದಲ್ಲಿ ಸೋಲನ್ನು ಎದುರಿಸಿತ್ತು.

6 / 7
ಇದೀಗ ನಾಳೆ ನಡೆಯಲ್ಲಿರುವ ಕ್ವಾಲಿಫೈಯರ್-2 ರಲ್ಲಿ ಮುಂಬೈ ಇಂಡಿಯನ್ಸ್, ಪಂಜಾಬ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವೆ ಒಟ್ಟು 33 ಪಂದ್ಯಗಳು ನಡೆದಿದ್ದು, ಅದರಲ್ಲಿ ಮುಂಬೈ ತಂಡ 17 ಪಂದ್ಯಗಳಲ್ಲಿ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಬಾರಿಯೂ ಲೀಗ್ ಹಂತದಲ್ಲಿ ಪಂಜಾಬ್ ವಿರುದ್ಧದ ಪಂದ್ಯವನ್ನು ಗೆಲ್ಲಲು ಮುಂಬೈಗೆ ಸಾಧ್ಯವಾಗಲಿಲ್ಲ.

ಇದೀಗ ನಾಳೆ ನಡೆಯಲ್ಲಿರುವ ಕ್ವಾಲಿಫೈಯರ್-2 ರಲ್ಲಿ ಮುಂಬೈ ಇಂಡಿಯನ್ಸ್, ಪಂಜಾಬ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವೆ ಒಟ್ಟು 33 ಪಂದ್ಯಗಳು ನಡೆದಿದ್ದು, ಅದರಲ್ಲಿ ಮುಂಬೈ ತಂಡ 17 ಪಂದ್ಯಗಳಲ್ಲಿ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಬಾರಿಯೂ ಲೀಗ್ ಹಂತದಲ್ಲಿ ಪಂಜಾಬ್ ವಿರುದ್ಧದ ಪಂದ್ಯವನ್ನು ಗೆಲ್ಲಲು ಮುಂಬೈಗೆ ಸಾಧ್ಯವಾಗಲಿಲ್ಲ.

7 / 7

Published On - 9:28 pm, Sat, 31 May 25

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್