AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿ ಕಪ್ ಗೆಲ್ಲಬೇಕೆಂದರೆ ಮುಂಬೈ ಫೈನಲ್​ಗೇರಲೇಬಾರದು..!

Mumbai Indians vs Punjab Kings Qualifier 2: ಐಪಿಎಲ್ 2025ರ ಕ್ವಾಲಿಫೈಯರ್ 2ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಐದನೇ ಬಾರಿ ಕ್ವಾಲಿಫೈಯರ್ 2 ಆಡುತ್ತಿದ್ದು, ಇದಕ್ಕೂ ಮೊದಲು ನಾಲ್ಕು ಬಾರಿ ಆಡಿದ್ದ ಕ್ವಾಲಿಫೈಯರ್ ಪಂದ್ಯಗಳ ಪೈಕಿ ಎರಡು ಬಾರಿ ಗೆದ್ದು ಐಪಿಎಲ್ ಪ್ರಶಸ್ತಿಯನ್ನು ಸಹ ಗೆದ್ದಿದೆ. ಅಂದರೆ ಮುಂಬೈ ಕ್ವಾಲಿಫೈಯರ್ 2 ಗೆದ್ದು ಫೈನಲ್​ಗೇರಿದರೆ ಆರ್​ಸಿಬಿಗೆ ಸಂಕಷ್ಟ ತಪ್ಪಿದಲ್ಲ.

ಪೃಥ್ವಿಶಂಕರ
|

Updated on:May 31, 2025 | 9:28 PM

ಐಪಿಎಲ್ 2025 ಈಗ ಅಂತಿಮ ಹಂತಕ್ಕೆ ಬಂದಿದೆ, ಈ ಸೀಸನ್‌ನಲ್ಲಿ ಇನ್ನ ಕೇವಲ 2 ಪಂದ್ಯಗಳು ಮಾತ್ರ ಉಳಿದಿವೆ. ಜೂನ್ 1 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ -2 ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಐಪಿಎಲ್ 2025 ಈಗ ಅಂತಿಮ ಹಂತಕ್ಕೆ ಬಂದಿದೆ, ಈ ಸೀಸನ್‌ನಲ್ಲಿ ಇನ್ನ ಕೇವಲ 2 ಪಂದ್ಯಗಳು ಮಾತ್ರ ಉಳಿದಿವೆ. ಜೂನ್ 1 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ -2 ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

1 / 7
ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್, ಆರ್‌ಸಿಬಿ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ನಂತರ ಮುಂಬೈ ಇಂಡಿಯನ್ಸ್  ಕ್ವಾಲಿಫೈಯರ್ 2 ಕ್ಕೆ ಅರ್ಹತೆ ಪಡೆದುಕೊಂಡಿದೆ.

ಕ್ವಾಲಿಫೈಯರ್-1 ರಲ್ಲಿ ಪಂಜಾಬ್ ಕಿಂಗ್ಸ್, ಆರ್‌ಸಿಬಿ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ನಂತರ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್ 2 ಕ್ಕೆ ಅರ್ಹತೆ ಪಡೆದುಕೊಂಡಿದೆ.

2 / 7
ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಕ್ವಾಲಿಫೈಯರ್ -2 ಆಡುತ್ತಿರುವುದು ಇದು 5 ನೇ ಬಾರಿಯಾಗಲಿದೆ. ಕ್ವಾಲಿಫೈಯರ್-2 ರಲ್ಲಿ ಮುಂಬೈ ತಂಡದ ಪ್ರದರ್ಶನ ಉತ್ತಮವಾಗಿದ್ದು, ಆರ್‌ಸಿಬಿಯ ಹಾಗೂ ಅದರ ಅಭಿಮಾನಿಗಳ ಆತಂಕವನ್ನು ಹೆಚ್ಚಿಸುವ ಅಂಕಿಅಂಶಗಳೂ ಇವೆ.

ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಕ್ವಾಲಿಫೈಯರ್ -2 ಆಡುತ್ತಿರುವುದು ಇದು 5 ನೇ ಬಾರಿಯಾಗಲಿದೆ. ಕ್ವಾಲಿಫೈಯರ್-2 ರಲ್ಲಿ ಮುಂಬೈ ತಂಡದ ಪ್ರದರ್ಶನ ಉತ್ತಮವಾಗಿದ್ದು, ಆರ್‌ಸಿಬಿಯ ಹಾಗೂ ಅದರ ಅಭಿಮಾನಿಗಳ ಆತಂಕವನ್ನು ಹೆಚ್ಚಿಸುವ ಅಂಕಿಅಂಶಗಳೂ ಇವೆ.

3 / 7
2011 ರಿಂದ ಐಪಿಎಲ್‌ನಲ್ಲಿ ಪ್ಲೇಆಫ್ ಪರಿಚಯಿಸಲಾಯಿತು. ಅಂದಿನಿಂದ ಮುಂಬೈ ಇಂಡಿಯನ್ಸ್ ನಾಲ್ಕು ಬಾರಿ ಕ್ವಾಲಿಫೈಯರ್ -2 ಪಂದ್ಯವನ್ನು ಆಡಿದೆ. ಇದರಲ್ಲಿ 2 ಪಂದ್ಯಗಳನ್ನು ಗೆದ್ದಿದ್ದರೆ, 2 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಆದರೆ ವಿಶೇಷವೆಂದರೆ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್-2 ಪಂದ್ಯವನ್ನು ಗೆದ್ದಾಗಲೆಲ್ಲಾ, ಪ್ರಶಸ್ತಿಯನ್ನು ಗೆಲ್ಲುವಲ್ಲಿಯೂ ಯಶಸ್ವಿಯಾಗಿದೆ.

2011 ರಿಂದ ಐಪಿಎಲ್‌ನಲ್ಲಿ ಪ್ಲೇಆಫ್ ಪರಿಚಯಿಸಲಾಯಿತು. ಅಂದಿನಿಂದ ಮುಂಬೈ ಇಂಡಿಯನ್ಸ್ ನಾಲ್ಕು ಬಾರಿ ಕ್ವಾಲಿಫೈಯರ್ -2 ಪಂದ್ಯವನ್ನು ಆಡಿದೆ. ಇದರಲ್ಲಿ 2 ಪಂದ್ಯಗಳನ್ನು ಗೆದ್ದಿದ್ದರೆ, 2 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಆದರೆ ವಿಶೇಷವೆಂದರೆ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್-2 ಪಂದ್ಯವನ್ನು ಗೆದ್ದಾಗಲೆಲ್ಲಾ, ಪ್ರಶಸ್ತಿಯನ್ನು ಗೆಲ್ಲುವಲ್ಲಿಯೂ ಯಶಸ್ವಿಯಾಗಿದೆ.

4 / 7
2013ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ತಂಡವನ್ನು ಸೋಲಿಸಿತ್ತು. ಇದಾದ ನಂತರ, ಫೈನಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2013ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ತಂಡವನ್ನು ಸೋಲಿಸಿತ್ತು. ಇದಾದ ನಂತರ, ಫೈನಲ್‌ನಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

5 / 7
ಅದೇ ರೀತಿ, 2017 ರಲ್ಲಿಯೂ ಸಹ ಮುಂಬೈ ಕ್ವಾಲಿಫೈಯರ್ -2 ಗೆದ್ದು, ಆ ನಂತರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡವನ್ನು ಸೋಲಿಸಿತ್ತು. ಆ ಬಳಿಕ 2023 ರಲ್ಲಿ ಕ್ವಾಲಿಫೈಯರ್ 2 ಆಡಿದ್ದ ಮುಂಬೈ ಇಂಡಿಯನ್ಸ್, ಆ ಪಂದ್ಯದಲ್ಲಿ ಸೋಲನ್ನು ಎದುರಿಸಿತ್ತು.

ಅದೇ ರೀತಿ, 2017 ರಲ್ಲಿಯೂ ಸಹ ಮುಂಬೈ ಕ್ವಾಲಿಫೈಯರ್ -2 ಗೆದ್ದು, ಆ ನಂತರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡವನ್ನು ಸೋಲಿಸಿತ್ತು. ಆ ಬಳಿಕ 2023 ರಲ್ಲಿ ಕ್ವಾಲಿಫೈಯರ್ 2 ಆಡಿದ್ದ ಮುಂಬೈ ಇಂಡಿಯನ್ಸ್, ಆ ಪಂದ್ಯದಲ್ಲಿ ಸೋಲನ್ನು ಎದುರಿಸಿತ್ತು.

6 / 7
ಇದೀಗ ನಾಳೆ ನಡೆಯಲ್ಲಿರುವ ಕ್ವಾಲಿಫೈಯರ್-2 ರಲ್ಲಿ ಮುಂಬೈ ಇಂಡಿಯನ್ಸ್, ಪಂಜಾಬ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವೆ ಒಟ್ಟು 33 ಪಂದ್ಯಗಳು ನಡೆದಿದ್ದು, ಅದರಲ್ಲಿ ಮುಂಬೈ ತಂಡ 17 ಪಂದ್ಯಗಳಲ್ಲಿ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಬಾರಿಯೂ ಲೀಗ್ ಹಂತದಲ್ಲಿ ಪಂಜಾಬ್ ವಿರುದ್ಧದ ಪಂದ್ಯವನ್ನು ಗೆಲ್ಲಲು ಮುಂಬೈಗೆ ಸಾಧ್ಯವಾಗಲಿಲ್ಲ.

ಇದೀಗ ನಾಳೆ ನಡೆಯಲ್ಲಿರುವ ಕ್ವಾಲಿಫೈಯರ್-2 ರಲ್ಲಿ ಮುಂಬೈ ಇಂಡಿಯನ್ಸ್, ಪಂಜಾಬ್ ತಂಡವನ್ನು ಸೋಲಿಸುವುದು ಸುಲಭವಲ್ಲ. ಐಪಿಎಲ್‌ನಲ್ಲಿ ಉಭಯ ತಂಡಗಳ ನಡುವೆ ಒಟ್ಟು 33 ಪಂದ್ಯಗಳು ನಡೆದಿದ್ದು, ಅದರಲ್ಲಿ ಮುಂಬೈ ತಂಡ 17 ಪಂದ್ಯಗಳಲ್ಲಿ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಬಾರಿಯೂ ಲೀಗ್ ಹಂತದಲ್ಲಿ ಪಂಜಾಬ್ ವಿರುದ್ಧದ ಪಂದ್ಯವನ್ನು ಗೆಲ್ಲಲು ಮುಂಬೈಗೆ ಸಾಧ್ಯವಾಗಲಿಲ್ಲ.

7 / 7

Published On - 9:28 pm, Sat, 31 May 25

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ