AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

IPL 2025 Mustafizur Rahman: ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಈವರೆಗೆ 57 ಪಂದ್ಯಗಳನ್ನಾಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಮುಸ್ತಫಿಝುರ್ ಒಟ್ಟು 61 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ಐಪಿಎಲ್ ಸೀಸನ್​-18ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 15, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳು ಶನಿವಾರದಿಂದ (ಮೇ 17) ಶುರುವಾಗಲಿದೆ. ಆದರೆ ಈ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅಲಭ್ಯರಾಗಿದ್ದಾರೆ. ಹೀಗಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳು ಶನಿವಾರದಿಂದ (ಮೇ 17) ಶುರುವಾಗಲಿದೆ. ಆದರೆ ಈ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅಲಭ್ಯರಾಗಿದ್ದಾರೆ. ಹೀಗಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಈ ಆಯ್ಕೆಯ ಹೊರತಾಗಿಯೂ ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಇತ್ತ ಐಪಿಎಲ್​ಗೆ ಆಯ್ಕೆಯಾದ ಬೆನ್ನಲ್ಲೇ ಮುಸ್ತಫಿಝುರ್ ದುಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಅದು ಕೂಡ UAE ವಿರುದ್ಧ ಟಿ20 ಸರಣಿ ಆಡಲು. ಮೇ 17 ರಿಂದ ಬಾಂಗ್ಲಾದೇಶ್ ಹಾಗೂ ಯುಎಇ ನಡುವೆ 2 ಪಂದ್ಯಗಳ ಟಿ20 ಸರಣಿ ನಡೆಯಲಿದೆ. 

ಈ ಆಯ್ಕೆಯ ಹೊರತಾಗಿಯೂ ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಇತ್ತ ಐಪಿಎಲ್​ಗೆ ಆಯ್ಕೆಯಾದ ಬೆನ್ನಲ್ಲೇ ಮುಸ್ತಫಿಝುರ್ ದುಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಅದು ಕೂಡ UAE ವಿರುದ್ಧ ಟಿ20 ಸರಣಿ ಆಡಲು. ಮೇ 17 ರಿಂದ ಬಾಂಗ್ಲಾದೇಶ್ ಹಾಗೂ ಯುಎಇ ನಡುವೆ 2 ಪಂದ್ಯಗಳ ಟಿ20 ಸರಣಿ ನಡೆಯಲಿದೆ. 

2 / 5
ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಮುಸ್ತಫಿಝುರ್ ರೆಹಮಾನ್ ಇದ್ದಾರೆ. ಯುಎಇ ವಿರುದ್ಧದ ಪಂದ್ಯಗಳ ಬಳಿಕ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವೆ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಶುರುವಾಗುವುದು ಮೇ 25 ರಿಂದ. ಜೂನ್ 3 ರಂದು ಈ ಸರಣಿಯ ಕೊನೆಯ ಪಂದ್ಯವಾಡಲಿದ್ದಾರೆ.

ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಮುಸ್ತಫಿಝುರ್ ರೆಹಮಾನ್ ಇದ್ದಾರೆ. ಯುಎಇ ವಿರುದ್ಧದ ಪಂದ್ಯಗಳ ಬಳಿಕ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವೆ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಶುರುವಾಗುವುದು ಮೇ 25 ರಿಂದ. ಜೂನ್ 3 ರಂದು ಈ ಸರಣಿಯ ಕೊನೆಯ ಪಂದ್ಯವಾಡಲಿದ್ದಾರೆ.

3 / 5
ಅಂದರೆ ಐಪಿಎಲ್​ನ ಫೈನಲ್​​ವರೆಗೆ ಮುಸ್ತಫಿಝುರ್ ರೆಹಮಾನ್ ಬಾಂಗ್ಲಾದೇಶ್ ತಂಡದಲ್ಲಿ ಕಾಣಿಸಿಕೊಳ್ಳುವುದು ಅನಿವಾರ್ಯ. ಇದೇ ಕಾರಣದಿಂದಾಗಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​, ಮುಸ್ತಫಿಝುರ್​ ರೆಹಮಾನ್​ಗೆ ಐಪಿಎಲ್ ಆಡಲು ಇನ್ನೂ ಸಹ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (NOC) ನೀಡಿಲ್ಲ. 

ಅಂದರೆ ಐಪಿಎಲ್​ನ ಫೈನಲ್​​ವರೆಗೆ ಮುಸ್ತಫಿಝುರ್ ರೆಹಮಾನ್ ಬಾಂಗ್ಲಾದೇಶ್ ತಂಡದಲ್ಲಿ ಕಾಣಿಸಿಕೊಳ್ಳುವುದು ಅನಿವಾರ್ಯ. ಇದೇ ಕಾರಣದಿಂದಾಗಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​, ಮುಸ್ತಫಿಝುರ್​ ರೆಹಮಾನ್​ಗೆ ಐಪಿಎಲ್ ಆಡಲು ಇನ್ನೂ ಸಹ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (NOC) ನೀಡಿಲ್ಲ. 

4 / 5
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾದರೂ ಮುಸ್ತಫಿಝುರ್​ ರೆಹಮಾನ್ ಐಪಿಎಲ್ ಆಡುತ್ತಾರೊ, ಇಲ್ಲವೊ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಯುಎಇ ಸರಣಿ ಬಳಿಕ ಅವರಿಗೆ ಎನ್​ಒಸಿ ನೀಡಿದರೆ ಮೇ 20 ರಂದು ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಬಹುದು. ಆದರೆ ಪಾಕ್ ವಿರುದ್ಧದ ಸರಣಿಯಿಂದ ಪ್ರಮುಖ ವೇಗಿ ಮುಸ್ತಫಿಝುರ್​ ರೆಹಮಾನ್ ಅವರನ್ನು ಬಿಸಿಬಿ ಹೊರಗಿಡುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆ. 

ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾದರೂ ಮುಸ್ತಫಿಝುರ್​ ರೆಹಮಾನ್ ಐಪಿಎಲ್ ಆಡುತ್ತಾರೊ, ಇಲ್ಲವೊ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಯುಎಇ ಸರಣಿ ಬಳಿಕ ಅವರಿಗೆ ಎನ್​ಒಸಿ ನೀಡಿದರೆ ಮೇ 20 ರಂದು ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಬಹುದು. ಆದರೆ ಪಾಕ್ ವಿರುದ್ಧದ ಸರಣಿಯಿಂದ ಪ್ರಮುಖ ವೇಗಿ ಮುಸ್ತಫಿಝುರ್​ ರೆಹಮಾನ್ ಅವರನ್ನು ಬಿಸಿಬಿ ಹೊರಗಿಡುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆ. 

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ