AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

IPL 2025 Mustafizur Rahman: ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಈವರೆಗೆ 57 ಪಂದ್ಯಗಳನ್ನಾಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಮುಸ್ತಫಿಝುರ್ ಒಟ್ಟು 61 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ಐಪಿಎಲ್ ಸೀಸನ್​-18ಗೆ ಬದಲಿ ಆಟಗಾರನಾಗಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 15, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳು ಶನಿವಾರದಿಂದ (ಮೇ 17) ಶುರುವಾಗಲಿದೆ. ಆದರೆ ಈ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅಲಭ್ಯರಾಗಿದ್ದಾರೆ. ಹೀಗಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳು ಶನಿವಾರದಿಂದ (ಮೇ 17) ಶುರುವಾಗಲಿದೆ. ಆದರೆ ಈ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅಲಭ್ಯರಾಗಿದ್ದಾರೆ. ಹೀಗಾಗಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1 / 5
ಈ ಆಯ್ಕೆಯ ಹೊರತಾಗಿಯೂ ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಇತ್ತ ಐಪಿಎಲ್​ಗೆ ಆಯ್ಕೆಯಾದ ಬೆನ್ನಲ್ಲೇ ಮುಸ್ತಫಿಝುರ್ ದುಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಅದು ಕೂಡ UAE ವಿರುದ್ಧ ಟಿ20 ಸರಣಿ ಆಡಲು. ಮೇ 17 ರಿಂದ ಬಾಂಗ್ಲಾದೇಶ್ ಹಾಗೂ ಯುಎಇ ನಡುವೆ 2 ಪಂದ್ಯಗಳ ಟಿ20 ಸರಣಿ ನಡೆಯಲಿದೆ. 

ಈ ಆಯ್ಕೆಯ ಹೊರತಾಗಿಯೂ ಮುಸ್ತಫಿಝುರ್ ರೆಹಮಾನ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ. ಏಕೆಂದರೆ ಇತ್ತ ಐಪಿಎಲ್​ಗೆ ಆಯ್ಕೆಯಾದ ಬೆನ್ನಲ್ಲೇ ಮುಸ್ತಫಿಝುರ್ ದುಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಅದು ಕೂಡ UAE ವಿರುದ್ಧ ಟಿ20 ಸರಣಿ ಆಡಲು. ಮೇ 17 ರಿಂದ ಬಾಂಗ್ಲಾದೇಶ್ ಹಾಗೂ ಯುಎಇ ನಡುವೆ 2 ಪಂದ್ಯಗಳ ಟಿ20 ಸರಣಿ ನಡೆಯಲಿದೆ. 

2 / 5
ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಮುಸ್ತಫಿಝುರ್ ರೆಹಮಾನ್ ಇದ್ದಾರೆ. ಯುಎಇ ವಿರುದ್ಧದ ಪಂದ್ಯಗಳ ಬಳಿಕ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವೆ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಶುರುವಾಗುವುದು ಮೇ 25 ರಿಂದ. ಜೂನ್ 3 ರಂದು ಈ ಸರಣಿಯ ಕೊನೆಯ ಪಂದ್ಯವಾಡಲಿದ್ದಾರೆ.

ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಮುಸ್ತಫಿಝುರ್ ರೆಹಮಾನ್ ಇದ್ದಾರೆ. ಯುಎಇ ವಿರುದ್ಧದ ಪಂದ್ಯಗಳ ಬಳಿಕ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವೆ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ. ಈ ಸರಣಿ ಶುರುವಾಗುವುದು ಮೇ 25 ರಿಂದ. ಜೂನ್ 3 ರಂದು ಈ ಸರಣಿಯ ಕೊನೆಯ ಪಂದ್ಯವಾಡಲಿದ್ದಾರೆ.

3 / 5
ಅಂದರೆ ಐಪಿಎಲ್​ನ ಫೈನಲ್​​ವರೆಗೆ ಮುಸ್ತಫಿಝುರ್ ರೆಹಮಾನ್ ಬಾಂಗ್ಲಾದೇಶ್ ತಂಡದಲ್ಲಿ ಕಾಣಿಸಿಕೊಳ್ಳುವುದು ಅನಿವಾರ್ಯ. ಇದೇ ಕಾರಣದಿಂದಾಗಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​, ಮುಸ್ತಫಿಝುರ್​ ರೆಹಮಾನ್​ಗೆ ಐಪಿಎಲ್ ಆಡಲು ಇನ್ನೂ ಸಹ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (NOC) ನೀಡಿಲ್ಲ. 

ಅಂದರೆ ಐಪಿಎಲ್​ನ ಫೈನಲ್​​ವರೆಗೆ ಮುಸ್ತಫಿಝುರ್ ರೆಹಮಾನ್ ಬಾಂಗ್ಲಾದೇಶ್ ತಂಡದಲ್ಲಿ ಕಾಣಿಸಿಕೊಳ್ಳುವುದು ಅನಿವಾರ್ಯ. ಇದೇ ಕಾರಣದಿಂದಾಗಿ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​, ಮುಸ್ತಫಿಝುರ್​ ರೆಹಮಾನ್​ಗೆ ಐಪಿಎಲ್ ಆಡಲು ಇನ್ನೂ ಸಹ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (NOC) ನೀಡಿಲ್ಲ. 

4 / 5
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾದರೂ ಮುಸ್ತಫಿಝುರ್​ ರೆಹಮಾನ್ ಐಪಿಎಲ್ ಆಡುತ್ತಾರೊ, ಇಲ್ಲವೊ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಯುಎಇ ಸರಣಿ ಬಳಿಕ ಅವರಿಗೆ ಎನ್​ಒಸಿ ನೀಡಿದರೆ ಮೇ 20 ರಂದು ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಬಹುದು. ಆದರೆ ಪಾಕ್ ವಿರುದ್ಧದ ಸರಣಿಯಿಂದ ಪ್ರಮುಖ ವೇಗಿ ಮುಸ್ತಫಿಝುರ್​ ರೆಹಮಾನ್ ಅವರನ್ನು ಬಿಸಿಬಿ ಹೊರಗಿಡುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆ. 

ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾದರೂ ಮುಸ್ತಫಿಝುರ್​ ರೆಹಮಾನ್ ಐಪಿಎಲ್ ಆಡುತ್ತಾರೊ, ಇಲ್ಲವೊ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಒಂದು ವೇಳೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಯುಎಇ ಸರಣಿ ಬಳಿಕ ಅವರಿಗೆ ಎನ್​ಒಸಿ ನೀಡಿದರೆ ಮೇ 20 ರಂದು ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಳ್ಳಬಹುದು. ಆದರೆ ಪಾಕ್ ವಿರುದ್ಧದ ಸರಣಿಯಿಂದ ಪ್ರಮುಖ ವೇಗಿ ಮುಸ್ತಫಿಝುರ್​ ರೆಹಮಾನ್ ಅವರನ್ನು ಬಿಸಿಬಿ ಹೊರಗಿಡುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆ. 

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು