AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

PBKS vs DC: ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮೇ 8 ರಂದು ನಡೆಯಬೇಕಿದ್ದ ಪಂದ್ಯವನ್ನು ಮೇ 24 ಕ್ಕೆ ಮುಂದೂಡಲಾಗಿದೆ. ಅಲ್ಲದೆ ಈ ಪಂದ್ಯವನ್ನು ಜೈಪುರದ ಸವಾಯಿ ಮಾನ್​ಸಿಂಗ್ ಸ್ಡೇಡಿಯಂನಲ್ಲಿ ಆಯೋಜಿಸಲಿದ್ದಾರೆ. ಈ ಮೂಲಕ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂದ್ಯವನ್ನು ಮರು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: May 13, 2025 | 10:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಪುನರಾರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಮೇ 8 ರಂದು ಸ್ಥಗಿತಗೊಂಡಿದ್ದ ಪಂದ್ಯಾವಳಿಗೆ ಮೇ 17 ರಂದು ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶನಿವಾರದಿಂದ ಐಪಿಎಲ್ ಮತ್ತೆ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಪುನರಾರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಮೇ 8 ರಂದು ಸ್ಥಗಿತಗೊಂಡಿದ್ದ ಪಂದ್ಯಾವಳಿಗೆ ಮೇ 17 ರಂದು ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶನಿವಾರದಿಂದ ಐಪಿಎಲ್ ಮತ್ತೆ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

1 / 6
ಇನ್ನು ಮೇ 8 ರಂದು ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಮರು ಆಯೋಜಿಸಲು ನಿರ್ಧರಿಸಲಾಗಿದೆ. ಈ ಪಂದ್ಯವು ಮೇ 24 ರಂದು ನಡೆಯಲಿದ್ದು, ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದೆ.

ಇನ್ನು ಮೇ 8 ರಂದು ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಮರು ಆಯೋಜಿಸಲು ನಿರ್ಧರಿಸಲಾಗಿದೆ. ಈ ಪಂದ್ಯವು ಮೇ 24 ರಂದು ನಡೆಯಲಿದ್ದು, ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದೆ.

2 / 6
ಇದಕ್ಕೂ ಮುನ್ನ ಮೇ 8 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 10.1 ಓವರ್​ಗಳಲ್ಲಿ 122 ರನ್​ ಕಲೆಹಾಕಿತ್ತು. ಈ ಪಂದ್ಯದ ನಡುವೆ ಭಾರತ-ಪಾಕ್ ನಡುವೆ ಯುದ್ಧ ಭೀತಿ ಎದುರಾಗಿದ್ದು, ಹೀಗಾಗಿ ಅರ್ಧದಲ್ಲೇ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಇದಕ್ಕೂ ಮುನ್ನ ಮೇ 8 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 10.1 ಓವರ್​ಗಳಲ್ಲಿ 122 ರನ್​ ಕಲೆಹಾಕಿತ್ತು. ಈ ಪಂದ್ಯದ ನಡುವೆ ಭಾರತ-ಪಾಕ್ ನಡುವೆ ಯುದ್ಧ ಭೀತಿ ಎದುರಾಗಿದ್ದು, ಹೀಗಾಗಿ ಅರ್ಧದಲ್ಲೇ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

3 / 6
ಅಲ್ಲದೆ ಈ ಪಂದ್ಯ ಸ್ಥಗಿತಗೊಂಡಿದ್ದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿತ್ತು. ಆದರೆ ಯುದ್ಧ ಭೀತಿ ಹಿನ್ನಲೆ ಪಂದ್ಯ ಸ್ಥಗಿತಗೊಂಡಿದ್ದರಿಂದ, ಮ್ಯಾಚ್ ಅನ್ನು ಮರು ನಿಗದಿ ಮಾಡುವಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಗಳು ಮನವಿ ಮಾಡಿದೆ.

ಅಲ್ಲದೆ ಈ ಪಂದ್ಯ ಸ್ಥಗಿತಗೊಂಡಿದ್ದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿತ್ತು. ಆದರೆ ಯುದ್ಧ ಭೀತಿ ಹಿನ್ನಲೆ ಪಂದ್ಯ ಸ್ಥಗಿತಗೊಂಡಿದ್ದರಿಂದ, ಮ್ಯಾಚ್ ಅನ್ನು ಮರು ನಿಗದಿ ಮಾಡುವಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಗಳು ಮನವಿ ಮಾಡಿದೆ.

4 / 6
ಅದರಂತೆ ಇದೀಗ ಮೇ 24 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕಗಳು ಸಿಗುವುದು ಖಚಿತ. ಆದರೆ ಸೋಲುವ ತಂಡ ಒಂದು ಅಂಕವನ್ನು ಕಳೆದುಕೊಳ್ಳಲಿದೆ. ಏಕೆಂದರೆ ಪಂದ್ಯ ಸ್ಥಗಿತಗೊಂಡಾಗ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗಿತ್ತು.

ಅದರಂತೆ ಇದೀಗ ಮೇ 24 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕಗಳು ಸಿಗುವುದು ಖಚಿತ. ಆದರೆ ಸೋಲುವ ತಂಡ ಒಂದು ಅಂಕವನ್ನು ಕಳೆದುಕೊಳ್ಳಲಿದೆ. ಏಕೆಂದರೆ ಪಂದ್ಯ ಸ್ಥಗಿತಗೊಂಡಾಗ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗಿತ್ತು.

5 / 6
ಇದೀಗ ಪಾಯಿಂಟ್ಸ್​ ಟೇಬಲ್​ನಿಂದ  ಆ ಅಂಕವನ್ನು ಕಳೆಯಲಾಗಿದೆ. ಹೀಗಾಗಿ ಮರು ನಿಗದಿಯಾದ ಪಂದ್ಯದಲ್ಲಿ ಸೋಲುವ ತಂಡಕ್ಕೆ ಒಂದು ಪಾಯಿಂಟ್ಸ್​ ನಷ್ಟವಾಗಲಿದೆ. ಇತ್ತ ಗೆಲ್ಲುವ ತಂಡ 2 ಅಂಕಗಳ ಮೂಲಕ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಹಾಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದೀಗ ಪಾಯಿಂಟ್ಸ್​ ಟೇಬಲ್​ನಿಂದ  ಆ ಅಂಕವನ್ನು ಕಳೆಯಲಾಗಿದೆ. ಹೀಗಾಗಿ ಮರು ನಿಗದಿಯಾದ ಪಂದ್ಯದಲ್ಲಿ ಸೋಲುವ ತಂಡಕ್ಕೆ ಒಂದು ಪಾಯಿಂಟ್ಸ್​ ನಷ್ಟವಾಗಲಿದೆ. ಇತ್ತ ಗೆಲ್ಲುವ ತಂಡ 2 ಅಂಕಗಳ ಮೂಲಕ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಹಾಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

6 / 6
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ