AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್​ಗೇರಲಿರುವ 4 ತಂಡಗಳನ್ನು ಹೆಸರಿಸಿದ ಪಿಯೂಷ್ ಚಾವ್ಲಾ

IPL 2025 Playoff Prediction: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 55 ಪಂದ್ಯಗಳು ಪೂರ್ಣಗೊಂಡಿದೆ. ಇನ್ನು ಲೀಗ್ ಹಂತದಲ್ಲಿ ಉಳಿದಿರುವುದು 15 ಪಂದ್ಯಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂದು ಹೆಸರಿಸಿದ್ದಾರೆ ಮಾಜಿ ಆಟಗಾರ ಪಿಯೂಷ್ ಚಾವ್ಲಾ.

ಝಾಹಿರ್ ಯೂಸುಫ್
|

Updated on: May 06, 2025 | 1:57 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 55 ಪಂದ್ಯಗಳ ಬಳಿಕ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡರೆ, ಪಂಜಾಬ್ ಕಿಂಗ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 55 ಪಂದ್ಯಗಳ ಬಳಿಕ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡರೆ, ಪಂಜಾಬ್ ಕಿಂಗ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ.

1 / 6
ಇನ್ನುಳಿದ ಮೂರು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕೂಡ ಪ್ಲೇಆಫ್ ರೇಸ್​ನಲ್ಲಿದೆ. ಈ ಏಳು ತಂಡಗಳಲ್ಲಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಪಿಯೂಷ್ ಚಾವ್ಲಾ. 

ಇನ್ನುಳಿದ ಮೂರು ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕೂಡ ಪ್ಲೇಆಫ್ ರೇಸ್​ನಲ್ಲಿದೆ. ಈ ಏಳು ತಂಡಗಳಲ್ಲಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಪಿಯೂಷ್ ಚಾವ್ಲಾ. 

2 / 6
ಪಿಯೂಷ್ ಚಾವ್ಲಾ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೇರುವುದು ಖಚಿತ. ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಶುಭ್​ಮನ್ ಗಿಲ್ ಪಡೆಯು ಉಳಿದೆಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲಿದೆ ಎಂದು ಚಾವ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪಿಯೂಷ್ ಚಾವ್ಲಾ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೇರುವುದು ಖಚಿತ. ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಶುಭ್​ಮನ್ ಗಿಲ್ ಪಡೆಯು ಉಳಿದೆಲ್ಲಾ ತಂಡಗಳನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲಿದೆ ಎಂದು ಚಾವ್ಲಾ ಅಭಿಪ್ರಾಯಪಟ್ಟಿದ್ದಾರೆ.

3 / 6
ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ ಎಂದಿದ್ದಾರೆ ಪಿಯೂಷ್ ಚಾವ್ಲಾ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಲೀಗ್ ಹಂತದ ಮುಕ್ತಾಯದ ವೇಳೆಗೆ ಅವರು ಸಹ ಪ್ಲೇಆಫ್​ ಹಂತಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಅಕ್ಷರ್ ಪಟೇಲ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ ಎಂದಿದ್ದಾರೆ ಪಿಯೂಷ್ ಚಾವ್ಲಾ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿ ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಲೀಗ್ ಹಂತದ ಮುಕ್ತಾಯದ ವೇಳೆಗೆ ಅವರು ಸಹ ಪ್ಲೇಆಫ್​ ಹಂತಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

4 / 6
ಇನ್ನು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ಹೀಗಾಗಿ ಪಂಜಾಬ್ ಪಡೆಯನ್ನು ಸಹ ಈ ಬಾರಿ ಪ್ಲೇಆಫ್ ಸುತ್ತಿನಲ್ಲಿ ಎದುರು ನೋಡಬಹುದು ಎಂದು ಪಿಯೂಷ್ ಚಾವ್ಲಾ ಹೇಳಿದ್ದಾರೆ.

ಇನ್ನು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ಹೀಗಾಗಿ ಪಂಜಾಬ್ ಪಡೆಯನ್ನು ಸಹ ಈ ಬಾರಿ ಪ್ಲೇಆಫ್ ಸುತ್ತಿನಲ್ಲಿ ಎದುರು ನೋಡಬಹುದು ಎಂದು ಪಿಯೂಷ್ ಚಾವ್ಲಾ ಹೇಳಿದ್ದಾರೆ.

5 / 6
ಹಾಗೆಯೇ ನಾಲ್ಕನೇ ತಂಡವಾಗಿ ಮುಂಬೈ ಇಂಡಿಯನ್ಸ್ ಕೂಡ ಪ್ಲೇಆಫ್​ ಸುತ್ತಿನಲ್ಲಿ ಕಾಣಿಸಿಕೊಳ್ಳಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಸತತ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಉಳಿದ ಮ್ಯಾಚ್​ನಲ್ಲೂ ಉತ್ತಮ ಪ್ರದರ್ಶನದೊಂದಿಗೆ ಮುಂಬೈ ಪಡೆ ಪ್ಲೇಆಫ್ ಹಂತಕ್ಕೇರಲಿದೆ ಎಂದು ಪಿಯೂಷ್ ಚಾವ್ಲಾ ಭವಿಷ್ಯ ನುಡಿದಿದ್ದಾರೆ.

ಹಾಗೆಯೇ ನಾಲ್ಕನೇ ತಂಡವಾಗಿ ಮುಂಬೈ ಇಂಡಿಯನ್ಸ್ ಕೂಡ ಪ್ಲೇಆಫ್​ ಸುತ್ತಿನಲ್ಲಿ ಕಾಣಿಸಿಕೊಳ್ಳಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಸತತ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಉಳಿದ ಮ್ಯಾಚ್​ನಲ್ಲೂ ಉತ್ತಮ ಪ್ರದರ್ಶನದೊಂದಿಗೆ ಮುಂಬೈ ಪಡೆ ಪ್ಲೇಆಫ್ ಹಂತಕ್ಕೇರಲಿದೆ ಎಂದು ಪಿಯೂಷ್ ಚಾವ್ಲಾ ಭವಿಷ್ಯ ನುಡಿದಿದ್ದಾರೆ.

6 / 6
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್