AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್​ಗೇರಲು ಮೂರೇ ಮೂರು ಹೆಜ್ಜೆ ದೂರ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲಾರ್ಧದಲ್ಲೇ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಮೊದಲ 6 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್​ನತ್ತ ಹೆಜ್ಜೆಯನ್ನಿಟ್ಟಿದೆ. ಅಂದರೆ ಮುಂದಿನ ಹಂತಕ್ಕೇರಲು ಡೆಲ್ಲಿ ಪಡೆಗೆ ಕೇವಲ 3 ಗೆಲುವುಗಳ ಅವಶ್ಯಕತೆಯಿದೆ.

ಝಾಹಿರ್ ಯೂಸುಫ್
|

Updated on: Apr 17, 2025 | 10:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ 6 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು 5 ಜಯ ಸಾಧಿಸಿದೆ. ಈ ಐದು ಗೆಲುವುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಂದರೆ ಮೊದಲಾರ್ಧಲ್ಲೇ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಡೆಲ್ಲಿ ಪಡೆ ಪ್ಲೇಆಫ್​ನತ್ತ ಹೆಜ್ಜೆಯನ್ನಿಟ್ಟಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ 6 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು 5 ಜಯ ಸಾಧಿಸಿದೆ. ಈ ಐದು ಗೆಲುವುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಂದರೆ ಮೊದಲಾರ್ಧಲ್ಲೇ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಡೆಲ್ಲಿ ಪಡೆ ಪ್ಲೇಆಫ್​ನತ್ತ ಹೆಜ್ಜೆಯನ್ನಿಟ್ಟಿದೆ.

1 / 12
ಐಪಿಎಲ್​ನ ಪ್ಲೇಆಫ್ ಕಟ್ ಆಫ್ ಪಾಯಿಂಟ್ 16. ಅಂದರೆ 16 ಅಂಕಗಳನ್ನು ಪಡೆಯುವ ತಂಡವು ಪ್ಲೇಆಫ್​ಗೇರುವುದು ಬಹುತೇಕ ಖಚಿತ. ಇದೀಗ 6 ಪಂದ್ಯಗಳಲ್ಲಿ 10 ಅಂಕಗಳನ್ನು ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 8 ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದರೆ ಸಾಕು. ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದು ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು. ಅದರಂತೆ 32 ಪಂದ್ಯಗಳ ಮುಕ್ತಾಯದ ವೇಳೆಗೆ ಪ್ಲೇಆಫ್​ಗೇರಲು ಯಾವ ತಂಡಕ್ಕೆ ಎಷ್ಟು ಗೆಲುವಿನ ಅಗತ್ಯವಿದೆ ಎಂದು ನೋಡುವುದಾದರೆ....

ಐಪಿಎಲ್​ನ ಪ್ಲೇಆಫ್ ಕಟ್ ಆಫ್ ಪಾಯಿಂಟ್ 16. ಅಂದರೆ 16 ಅಂಕಗಳನ್ನು ಪಡೆಯುವ ತಂಡವು ಪ್ಲೇಆಫ್​ಗೇರುವುದು ಬಹುತೇಕ ಖಚಿತ. ಇದೀಗ 6 ಪಂದ್ಯಗಳಲ್ಲಿ 10 ಅಂಕಗಳನ್ನು ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 8 ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದರೆ ಸಾಕು. ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದು ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು. ಅದರಂತೆ 32 ಪಂದ್ಯಗಳ ಮುಕ್ತಾಯದ ವೇಳೆಗೆ ಪ್ಲೇಆಫ್​ಗೇರಲು ಯಾವ ತಂಡಕ್ಕೆ ಎಷ್ಟು ಗೆಲುವಿನ ಅಗತ್ಯವಿದೆ ಎಂದು ನೋಡುವುದಾದರೆ....

2 / 12
ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

3 / 12
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3  ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

4 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು 11  ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

5 / 12
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

6 / 12
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

7 / 12
ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್​ಗೆ ನೆಟ್ ರನ್ ರೇಟ್​ ಮೂಲಕ ಪ್ಲೇಆಫ್​ಗೇರಲು ಅವಕಾಶ ಸಿಗಲಿದೆ.

8 / 12
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

9 / 12
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್​ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

10 / 12
ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

ಸನ್​ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ.

11 / 12
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್​ಕೆ ತಂಡಕ್ಕೆ  ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್​ಕೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

12 / 12
Follow us
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​