AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 11 ವರ್ಷಗಳ ಬಳಿಕ ಅಂಕ ಪಟ್ಟಿಯಲ್ಲಿ ಮೇಲೇರಿದ ಪಂಜಾಬ್ ಕಿಂಗ್ಸ್

IPL 2025 PBKS vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 37 ರನ್​ಗಳ ಜಯ ಸಾಧಿಸಿ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

ಝಾಹಿರ್ ಯೂಸುಫ್
|

Updated on: May 05, 2025 | 9:03 AM

Share
IPL 2025: ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 11 ಪಂದ್ಯಗಳಲ್ಲಿ 7 ಜಯ ಹಾಗೂ ಒಂದು ಡ್ರಾನೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಒಟ್ಟು 15 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ.

IPL 2025: ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 11 ಪಂದ್ಯಗಳಲ್ಲಿ 7 ಜಯ ಹಾಗೂ ಒಂದು ಡ್ರಾನೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಒಟ್ಟು 15 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ.

1 / 5
ವಿಶೇಷ ಎಂದರೆ ಪಂಜಾಬ್ ಕಿಂಗ್ಸ್ ತಂಡವು ಬರೋಬ್ಬರಿ 11 ವರ್ಷಗಳ ಬಳಿಕ 15 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಕಳೆದ ಹನ್ನೊಂದು ಸೀಸನ್​ಗಳಲ್ಲಿ 14 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯಲು ಪಂಜಾಬ್ ಪಡೆಗೆ ಸಾಧ್ಯವಾಗಿಲ್ಲ. 2014 ರಲ್ಲಿ 22 ಅಂಕಗಳನ್ನು ಪಡೆದಿದ್ದೇ ಶ್ರೇಷ್ಠ ಸಾಧನೆ.

ವಿಶೇಷ ಎಂದರೆ ಪಂಜಾಬ್ ಕಿಂಗ್ಸ್ ತಂಡವು ಬರೋಬ್ಬರಿ 11 ವರ್ಷಗಳ ಬಳಿಕ 15 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಕಳೆದ ಹನ್ನೊಂದು ಸೀಸನ್​ಗಳಲ್ಲಿ 14 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯಲು ಪಂಜಾಬ್ ಪಡೆಗೆ ಸಾಧ್ಯವಾಗಿಲ್ಲ. 2014 ರಲ್ಲಿ 22 ಅಂಕಗಳನ್ನು ಪಡೆದಿದ್ದೇ ಶ್ರೇಷ್ಠ ಸಾಧನೆ.

2 / 5
ಇದಾದ ಬಳಿಕ ಒಮ್ಮೆಯೂ ಪಂಜಾಬ್ ಕಿಂಗ್ಸ್ ತಂಡ 7 ಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದಿರಲಿಲ್ಲ ಎಂದರೆ ನಂಬಲೇಬೇಕು. ಆದರೆ ಈ ಬಾರಿಯ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಒಟ್ಟು 15 ಅಂಕಗಳನ್ನು ಪಡೆದು ಪಂಜಾಬ್ ಪಡೆ ಪ್ಲೇಆಫ್​ನತ್ತ ಲಗ್ಗೆಯಿಟ್ಟಿದೆ.

ಇದಾದ ಬಳಿಕ ಒಮ್ಮೆಯೂ ಪಂಜಾಬ್ ಕಿಂಗ್ಸ್ ತಂಡ 7 ಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದಿರಲಿಲ್ಲ ಎಂದರೆ ನಂಬಲೇಬೇಕು. ಆದರೆ ಈ ಬಾರಿಯ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಒಟ್ಟು 15 ಅಂಕಗಳನ್ನು ಪಡೆದು ಪಂಜಾಬ್ ಪಡೆ ಪ್ಲೇಆಫ್​ನತ್ತ ಲಗ್ಗೆಯಿಟ್ಟಿದೆ.

3 / 5
ಇನ್ನು 2014ರ ಬಳಿಕ ಪಂಜಾಬ್ ಕಿಂಗ್ಸ್ ಪಾಲಿಗೆ ಮರೀಚಿಕೆಯಾಗಿರುವ ಪ್ಲೇಆಫ್​ ಸುತ್ತಿಗೇರಲು ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ ಶ್ರೇಯಸ್ ಅಯ್ಯರ್ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್​ನಲ್ಲಿ ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಇನ್ನು 2014ರ ಬಳಿಕ ಪಂಜಾಬ್ ಕಿಂಗ್ಸ್ ಪಾಲಿಗೆ ಮರೀಚಿಕೆಯಾಗಿರುವ ಪ್ಲೇಆಫ್​ ಸುತ್ತಿಗೇರಲು ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ ಶ್ರೇಯಸ್ ಅಯ್ಯರ್ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್​ನಲ್ಲಿ ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

4 / 5
ಅಂದಹಾಗೆ ಪಂಜಾಬ್ ಕಿಂಗ್ಸ್ ತಂಡದ ಮುಂದಿನ ಎದುರಾಳಿಗಳೆಂದರೆ... ಡೆಲ್ಲಿ ಕ್ಯಾಪಿಟಲ್ಸ್ (ಮೇ.8), ಮುಂಬೈ ಇಂಡಿಯನ್ಸ್ (ಮೇ.11) ಹಾಗೂ ರಾಜಸ್ಥಾನ್ ರಾಯಲ್ಸ್ (ಮೇ.16). ಈ ಮೂರು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ ಒಟ್ಟು 21 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

ಅಂದಹಾಗೆ ಪಂಜಾಬ್ ಕಿಂಗ್ಸ್ ತಂಡದ ಮುಂದಿನ ಎದುರಾಳಿಗಳೆಂದರೆ... ಡೆಲ್ಲಿ ಕ್ಯಾಪಿಟಲ್ಸ್ (ಮೇ.8), ಮುಂಬೈ ಇಂಡಿಯನ್ಸ್ (ಮೇ.11) ಹಾಗೂ ರಾಜಸ್ಥಾನ್ ರಾಯಲ್ಸ್ (ಮೇ.16). ಈ ಮೂರು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ ಒಟ್ಟು 21 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ.

5 / 5
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್