AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದು ಬಟನ್ ಹೆಚ್ಚಿಸಿ ನೂತನ ಜೆರ್ಸಿ ಬಿಡುಗಡೆ ಮಾಡಿದ ಪಂಜಾಬ್ ಕಿಂಗ್ಸ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಒಂದಲ್ಲ ಒಂದು ಕಾರಣಕ್ಕೆ ಟ್ರೋಲ್ ಆಗುತ್ತಿರುತ್ತದೆ. ಅದು ಆಟಗಾರರ ಆಯ್ಕೆಯಿಂದ ಇರಬಹುದು. ಇಲ್ಲ ಪಂದ್ಯಗಳಲ್ಲಿ ಮಾಡುವ ಎಡವಟ್ಟುಗಳಿಂದ ಇರಬಹುದು. ಆದರೆ ಈ ಬಾರಿ ಜೆರ್ಸಿ ವಿಷಯದಿಂದ ಟ್ರೋಲ್​ಗೆ ಒಳಗಾಗಿದ್ದಾರೆ. ಅದು ಸಹ ನೂತನ ಜೆರ್ಸಿ ಬಿಡುಗಡೆ ಮಾಡಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Mar 08, 2025 | 1:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​​ ಸೀಸನ್-18 ಕ್ಕಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ ಪಂಜಾಬ್ ಕಿಂಗ್ಸ್ ಕೂಡ ಐಪಿಎಲ್ 2025ರ ಕಿಟ್ ಅನ್ನು ಬಿಡುಗಡೆ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​​ ಸೀಸನ್-18 ಕ್ಕಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ ಪಂಜಾಬ್ ಕಿಂಗ್ಸ್ ಕೂಡ ಐಪಿಎಲ್ 2025ರ ಕಿಟ್ ಅನ್ನು ಬಿಡುಗಡೆ ಮಾಡಿದೆ.

1 / 5
ಆದರೆ ಪಂಜಾಬ್ ಕಿಂಗ್ಸ್ ಐಪಿಎಲ್ ಸೀಸನ್​-18 ಕ್ಕಾಗಿ ಅನಾವರಣಗೊಳಿಸಿದ ಜೆರ್ಸಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ವಿಶೇಷ. ಅಂದರೆ ಐಪಿಎಲ್ 2024 ರಲ್ಲಿ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಮುಂದುವರೆಸಲಾಗಿದೆ.

ಆದರೆ ಪಂಜಾಬ್ ಕಿಂಗ್ಸ್ ಐಪಿಎಲ್ ಸೀಸನ್​-18 ಕ್ಕಾಗಿ ಅನಾವರಣಗೊಳಿಸಿದ ಜೆರ್ಸಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದು ವಿಶೇಷ. ಅಂದರೆ ಐಪಿಎಲ್ 2024 ರಲ್ಲಿ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಮುಂದುವರೆಸಲಾಗಿದೆ.

2 / 5
ಇದಾಗ್ಯೂ ನೂತನ ಜೆರ್ಸಿಯಲ್ಲಿ ಕಂಡು ಬಂದಿರುವ ವ್ಯತ್ಯಾಸವೆಂದರೆ ಒಂದು ಬಟನ್ ಮಾತ್ರ. ಅಂದರೆ ಕಳೆದ ಬಾರಿ ಪಂಜಾಬ್ ಕಿಂಗ್ಸ್ ಆಟಗಾರರು ಧರಿಸಿದ್ದ ಜೆರ್ಸಿಯಲ್ಲಿ 2 ಬಟನ್​ಗಳಿದ್ದರೆ, ಈ ಬಾರಿ ಅದನ್ನು ಮೂರಕ್ಕೇರಿಸಿದೆ. ಈ ಮೂರು ಬಟನ್​ಗಳ ಜೆರ್ಸಿಯನ್ನೇ ನೂತನ ವಿನ್ಯಾಸದ ಜೆರ್ಸಿ ಎಂದು ಬಿಡುಗಡೆ ಮಾಡಿ ಇದೀಗ ನಗೆಪಾಲಿಗೀಡಾಗಿದೆ.

ಇದಾಗ್ಯೂ ನೂತನ ಜೆರ್ಸಿಯಲ್ಲಿ ಕಂಡು ಬಂದಿರುವ ವ್ಯತ್ಯಾಸವೆಂದರೆ ಒಂದು ಬಟನ್ ಮಾತ್ರ. ಅಂದರೆ ಕಳೆದ ಬಾರಿ ಪಂಜಾಬ್ ಕಿಂಗ್ಸ್ ಆಟಗಾರರು ಧರಿಸಿದ್ದ ಜೆರ್ಸಿಯಲ್ಲಿ 2 ಬಟನ್​ಗಳಿದ್ದರೆ, ಈ ಬಾರಿ ಅದನ್ನು ಮೂರಕ್ಕೇರಿಸಿದೆ. ಈ ಮೂರು ಬಟನ್​ಗಳ ಜೆರ್ಸಿಯನ್ನೇ ನೂತನ ವಿನ್ಯಾಸದ ಜೆರ್ಸಿ ಎಂದು ಬಿಡುಗಡೆ ಮಾಡಿ ಇದೀಗ ನಗೆಪಾಲಿಗೀಡಾಗಿದೆ.

3 / 5
ಈ ಮೂರು ಬಟನ್ ಹೊಂದಿರುವ ನೂತನ ಜೆರ್ಸಿ ಧರಿಸಿ ಪಂಜಾಬ್ ಕಿಂಗ್ಸ್ ಮಾರ್ಚ್ 25 ರಂದು ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದ ಮೊದಲ ಎದುರಾಳಿ ಗುಜರಾತ್ ಟೈಟಾನ್ಸ್​. ಈ ಪಂದ್ಯದ ಮೂಲಕ ಪಂಜಾಬ್ ಪಡೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಈ ಮೂರು ಬಟನ್ ಹೊಂದಿರುವ ನೂತನ ಜೆರ್ಸಿ ಧರಿಸಿ ಪಂಜಾಬ್ ಕಿಂಗ್ಸ್ ಮಾರ್ಚ್ 25 ರಂದು ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದ ಮೊದಲ ಎದುರಾಳಿ ಗುಜರಾತ್ ಟೈಟಾನ್ಸ್​. ಈ ಪಂದ್ಯದ ಮೂಲಕ ಪಂಜಾಬ್ ಪಡೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

4 / 5
ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್.

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಲ್, ಅರ್ಷ್‌ದೀಪ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಶಶಾಂಕ್ ಸಿಂಗ್, ಪ್ರಭ್​ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ವಿಜಯ್‌ಕುಮಾರ್ ವೈಶಾಕ್, ಯಶ್ ಠಾಕೂರ್, ಮಾರ್ಕೊ ಯಾನ್ಸೆನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಝ್ಮತುಲ್ಲಾ ಒಮರ್​​ಝಾಹಿ,ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ, ಕ್ಸೇವಿಯರ್ ಬ್ರಾಟ್​ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ, ನೆಹಾಲ್ ವಧೇರಾ, ಹರ್ನೂರ್ ಪನ್ನು, ಕುಲ್ದೀಪ್ ಸೇನ್.

5 / 5
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ