AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ತಂಡಕ್ಕೆ ರವಿಚಂದ್ರನ್ ಅಶ್ವಿನ್ ರಿಎಂಟ್ರಿ?

IPL 2025: 2009 ರಿಂದ 2015 ರವರೆಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ರವಿಚಂದ್ರನ್ ಅಶ್ವಿನ್ 97 ಪಂದ್ಯಗಳಿಂದ 90 ವಿಕೆಟ್ ಕಬಳಿಸಿದ್ದರು. ಇದೀಗ 9 ವರ್ಷಗಳ ಬಳಿಕ ಮತ್ತೆ ತವರಿನ ತಂಡದ ಪರ ಕಣಕ್ಕಿಳಿಯಲು ಅಶ್ವಿನ್ ಸಜ್ಜಾಗಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಅಶ್ವಿನ್ ಖರೀದಿಗೆ ಸಿಎಸ್​ಕೆ ಮುಂದಾಗುವುದುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Sep 26, 2024 | 2:53 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 6
ಕಳೆದ ಜೂನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದರು. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ.

ಕಳೆದ ಜೂನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದರು. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ.

2 / 6
ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 6
ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ