AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸ್​ಗಳ ಸುರಿಮಳೆ… ಐಪಿಎಲ್​ನಲ್ಲಿ ಹೀನಾಯ ದಾಖಲೆ ಬರೆದ ರಶೀದ್ ಖಾನ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಯಲ್ಲಿ ರಶೀದ್ ಖಾನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಕಳಪೆ ಪ್ರದರ್ಶನದೊಂದಿಗೆ ಹೀನಾಯ ದಾಖಲೆಯನ್ನು ಸಹ ಬರೆದಿದ್ದಾರೆ. ಅದು ಕೂಡ ಆರ್​ಸಿಬಿ ತಂಡದ ಮಾಜಿ ವೇಗಿ ಮೊಹಮ್ಮದ್ ಸಿರಾಜ್ ಹೆಸರಿನಲ್ಲಿದ್ದ ಹೀನಾಯ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jun 01, 2025 | 10:32 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಶೀದ್ ಖಾನ್ (Rashid Khan) ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸರ್ ಚಚ್ಚಿಸಿಕೊಳ್ಳುವ ಮೂಲಕ. ಅಂದರೆ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸರ್ ಹೊಡೆಸಿಕೊಂಡ ಬೌಲರ್ ಎಂಬ ಹೀನಾಯ ದಾಖಲೆಯೊಂದು ರಶೀದ್ ಖಾನ್ ಪಾಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಶೀದ್ ಖಾನ್ (Rashid Khan) ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಕ್ಸರ್ ಚಚ್ಚಿಸಿಕೊಳ್ಳುವ ಮೂಲಕ. ಅಂದರೆ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸರ್ ಹೊಡೆಸಿಕೊಂಡ ಬೌಲರ್ ಎಂಬ ಹೀನಾಯ ದಾಖಲೆಯೊಂದು ರಶೀದ್ ಖಾನ್ ಪಾಲಾಗಿದೆ.

1 / 5
ಐಪಿಎಲ್​ 2025ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ಓವರ್​ಗಳನ್ನು ಎಸೆದಿದ್ದ ರಶೀದ್ ಖಾನ್ ಒಟ್ಟು 31 ರನ್ ಬಿಟ್ಟುಕೊಟ್ಟಿದ್ದರು. ಈ 31 ರನ್​ಗಳಲ್ಲಿ 2 ಸಿಕ್ಸ್​ಗಳು ಒಳಗೊಂಡಿದ್ದವು. ಇದರೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಹೊಡೆಸಿಕೊಂಡ ಅನಗತ್ಯ ದಾಖಲೆಯು ರಶೀದ್ ಖಾನ್ ಪಾಲಾಯಿತು.

ಐಪಿಎಲ್​ 2025ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ಓವರ್​ಗಳನ್ನು ಎಸೆದಿದ್ದ ರಶೀದ್ ಖಾನ್ ಒಟ್ಟು 31 ರನ್ ಬಿಟ್ಟುಕೊಟ್ಟಿದ್ದರು. ಈ 31 ರನ್​ಗಳಲ್ಲಿ 2 ಸಿಕ್ಸ್​ಗಳು ಒಳಗೊಂಡಿದ್ದವು. ಇದರೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಹೊಡೆಸಿಕೊಂಡ ಅನಗತ್ಯ ದಾಖಲೆಯು ರಶೀದ್ ಖಾನ್ ಪಾಲಾಯಿತು.

2 / 5
ಇದಕ್ಕೂ ಮುನ್ನ ಇಂತಹದೊಂದು ಕಳಪೆ ದಾಖಲೆ ಮೊಹಮ್ಮದ್ ಸಿರಾಜ್ ಹೆಸರಿನಲ್ಲಿತ್ತು. 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 22 ಸಿಕ್ಸ್​ಗಳನ್ನು ಹೊಡೆಸಿಕೊಂಡಿದ್ದರು. ಈ ಮೂಲಕ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ ಚಚ್ಚಿಸಿಕೊಂಡ ಬೌಲರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಇಂತಹದೊಂದು ಕಳಪೆ ದಾಖಲೆ ಮೊಹಮ್ಮದ್ ಸಿರಾಜ್ ಹೆಸರಿನಲ್ಲಿತ್ತು. 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 22 ಸಿಕ್ಸ್​ಗಳನ್ನು ಹೊಡೆಸಿಕೊಂಡಿದ್ದರು. ಈ ಮೂಲಕ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ ಚಚ್ಚಿಸಿಕೊಂಡ ಬೌಲರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆ ರಶೀದ್ ಖಾನ್ ಪಾಲಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ರಶೀದ್ ಖಾನ್ 15 ಪಂದ್ಯಗಳಿಂದ ಒಟ್ಟು 33 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಿಟ್ಟುಕೊಟ್ಟ ಬೌಲರ್ ಎಂಬ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ.

ಇದೀಗ ಈ ದಾಖಲೆ ರಶೀದ್ ಖಾನ್ ಪಾಲಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ರಶೀದ್ ಖಾನ್ 15 ಪಂದ್ಯಗಳಿಂದ ಒಟ್ಟು 33 ಸಿಕ್ಸರ್​ಗಳನ್ನು ಹೊಡೆಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಿಟ್ಟುಕೊಟ್ಟ ಬೌಲರ್ ಎಂಬ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ.

4 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ರಶೀದ್ ಖಾನ್ ಅವರ ಪ್ರದರ್ಶನ ಕೂಡ ಅಷ್ಟಕಷ್ಟೇ. 15 ಇನಿಂಗ್ಸ್​ಗಳಲ್ಲಿ ಒಟ್ಟು 330 ಎಸೆತಗಳನ್ನು ಎಸೆದಿದ್ದ ರಶೀದ್ 514 ರನ್​ಗಳನ್ನು ನೀಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 9 ವಿಕೆಟ್​ಗಳು ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಶೀದ್ ಖಾನ್ 10 ಕ್ಕಿಂತ ಕಡಿಮೆ ವಿಕೆಟ್ ಪಡೆದಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 9.34 ರನ್ ನೀಡುವ ಮೂಲಕ ಎಂಬುದೇ ಅಚ್ಚರಿ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ರಶೀದ್ ಖಾನ್ ಅವರ ಪ್ರದರ್ಶನ ಕೂಡ ಅಷ್ಟಕಷ್ಟೇ. 15 ಇನಿಂಗ್ಸ್​ಗಳಲ್ಲಿ ಒಟ್ಟು 330 ಎಸೆತಗಳನ್ನು ಎಸೆದಿದ್ದ ರಶೀದ್ 514 ರನ್​ಗಳನ್ನು ನೀಡಿದ್ದಾರೆ. ಈ ವೇಳೆ ಪಡೆದಿರುವುದು ಕೇವಲ 9 ವಿಕೆಟ್​ಗಳು ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಶೀದ್ ಖಾನ್ 10 ಕ್ಕಿಂತ ಕಡಿಮೆ ವಿಕೆಟ್ ಪಡೆದಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 9.34 ರನ್ ನೀಡುವ ಮೂಲಕ ಎಂಬುದೇ ಅಚ್ಚರಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ