AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್

Dinesh Karthik: ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಡಿಕೆ ಹೆಸರಿನಲ್ಲಿದೆ. ಇದೀಗ ಹೊಸ ಲೀಗ್​ಗಳ ಮೂಲಕ ಹೊಸ ಇನಿಂಗ್ಸ್​ ಆರಂಭಿಸುವ ಇರಾದೆಯಲ್ಲಿದ್ದಾರೆ ಡಿಕೆ.

ಝಾಹಿರ್ ಯೂಸುಫ್
|

Updated on: Aug 28, 2024 | 8:14 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮುಂಬರುವ ಲೆಜೆಂಡ್ಸ್​ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. LLC ಹರಾಜಿಗೂ ಮುನ್ನ ಡಿಕೆಯನ್ನು ಸದರ್ನ್ ಸೂಪರ್​ಸ್ಟಾರ್ಸ್​ ಫ್ರಾಂಚೈಸಿಯು ಆಯ್ಕೆ ಮಾಡಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮುಂಬರುವ ಲೆಜೆಂಡ್ಸ್​ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. LLC ಹರಾಜಿಗೂ ಮುನ್ನ ಡಿಕೆಯನ್ನು ಸದರ್ನ್ ಸೂಪರ್​ಸ್ಟಾರ್ಸ್​ ಫ್ರಾಂಚೈಸಿಯು ಆಯ್ಕೆ ಮಾಡಿಕೊಂಡಿದೆ.

1 / 6
ಅದರಂತೆ ಲೆಜೆಂಡ್ಸ್ ಲೀಗ್​ ಕ್ರಿಕೆಟ್​ನ 2024 ರ ಆವೃತ್ತಿಯಲ್ಲಿ ದಿನೇಶ್ ಕಾರ್ತಿಕ್ ಸದರ್ನ್ ಸೂಪರ್​ಸ್ಟಾರ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಿವೃತ್ತ ಆಟಗಾರರ ಲೀಗ್​ನಲ್ಲೂ ಡಿಕೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ.

ಅದರಂತೆ ಲೆಜೆಂಡ್ಸ್ ಲೀಗ್​ ಕ್ರಿಕೆಟ್​ನ 2024 ರ ಆವೃತ್ತಿಯಲ್ಲಿ ದಿನೇಶ್ ಕಾರ್ತಿಕ್ ಸದರ್ನ್ ಸೂಪರ್​ಸ್ಟಾರ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಿವೃತ್ತ ಆಟಗಾರರ ಲೀಗ್​ನಲ್ಲೂ ಡಿಕೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ.

2 / 6
ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ಶಿಖರ್ ಧವನ್ ಲೆಜೆಂಡ್ಸ್ ಲೀಗ್ ಕ್ರಿಕೆಟ್​ಗೆ ತಮ್ಮ ಹೆಸರು ನೀಡಿದ್ದರು. ಅದರಂತೆ ಈ ಬಾರಿಯ LLC ಹರಾಜಿನಲ್ಲಿ ಧವನ್ ಹೆಸರು ಕಾಣಿಸಿಕೊಳ್ಳಲಿದೆ. ಇದೀಗ ದಿನೇಶ್ ಕಾರ್ತಿಕ್ ಕೂಡ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿರುವುದು ವಿಶೇಷ.

ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ಶಿಖರ್ ಧವನ್ ಲೆಜೆಂಡ್ಸ್ ಲೀಗ್ ಕ್ರಿಕೆಟ್​ಗೆ ತಮ್ಮ ಹೆಸರು ನೀಡಿದ್ದರು. ಅದರಂತೆ ಈ ಬಾರಿಯ LLC ಹರಾಜಿನಲ್ಲಿ ಧವನ್ ಹೆಸರು ಕಾಣಿಸಿಕೊಳ್ಳಲಿದೆ. ಇದೀಗ ದಿನೇಶ್ ಕಾರ್ತಿಕ್ ಕೂಡ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿರುವುದು ವಿಶೇಷ.

3 / 6
ಹಾಗೆಯೇ ಮುಂಬರುವ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ದಿನೇಶ್ ಕಾರ್ತಿಕ್ ಕಣಕ್ಕಿಳಿಯಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಮಾಲೀಕತ್ವದ ಪಾರ್ಲ್ ರಾಯಲ್ಸ್ ಫ್ರಾಂಚೈಸಿಯು ಡಿಕೆಯನ್ನು ಖರೀದಿಸಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನಲ್ಲೂ ಕಣಕ್ಕಿಳಿಯಲು ಆರ್​ಸಿಬಿ ತಂಡದ ಮಾಜಿ ಆಟಗಾರ ಸಜ್ಜಾಗಿದ್ದಾರೆ.

ಹಾಗೆಯೇ ಮುಂಬರುವ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ದಿನೇಶ್ ಕಾರ್ತಿಕ್ ಕಣಕ್ಕಿಳಿಯಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಮಾಲೀಕತ್ವದ ಪಾರ್ಲ್ ರಾಯಲ್ಸ್ ಫ್ರಾಂಚೈಸಿಯು ಡಿಕೆಯನ್ನು ಖರೀದಿಸಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನಲ್ಲೂ ಕಣಕ್ಕಿಳಿಯಲು ಆರ್​ಸಿಬಿ ತಂಡದ ಮಾಜಿ ಆಟಗಾರ ಸಜ್ಜಾಗಿದ್ದಾರೆ.

4 / 6
ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿರುವ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಆರ್​ಸಿಬಿ ತಂಡದ ಮೆಂಟರ್​ ಹುದ್ದೆಯನ್ನು ಸಹ ಅಲಂಕರಿಸಲಿದ್ದಾರೆ. ಇತ್ತ ಐಪಿಎಲ್​ಗೆ ಗುಡ್ ಬೈ ಹೇಳಿರುವ ದಿನೇಶ್ ಕಾರ್ತಿಕ್ ಇದೀಗ ವಿವಿಧ ಲೀಗ್​ನತ್ತ ಮುಖ ಮಾಡಿರುವುದು ವಿಶೇಷ.

ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿರುವ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಆರ್​ಸಿಬಿ ತಂಡದ ಮೆಂಟರ್​ ಹುದ್ದೆಯನ್ನು ಸಹ ಅಲಂಕರಿಸಲಿದ್ದಾರೆ. ಇತ್ತ ಐಪಿಎಲ್​ಗೆ ಗುಡ್ ಬೈ ಹೇಳಿರುವ ದಿನೇಶ್ ಕಾರ್ತಿಕ್ ಇದೀಗ ವಿವಿಧ ಲೀಗ್​ನತ್ತ ಮುಖ ಮಾಡಿರುವುದು ವಿಶೇಷ.

5 / 6
ಅಂದಹಾಗೆ 17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್​, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು. ಇದೀಗ ಲೆಜೆಂಡ್ಸ್ ಲೀಗ್​ನಲ್ಲಿ ಸದರ್ನ್​ ಸೂಪರ್ ಸ್ಟಾರ್ಸ್​ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಅಂದಹಾಗೆ 17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್​, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು. ಇದೀಗ ಲೆಜೆಂಡ್ಸ್ ಲೀಗ್​ನಲ್ಲಿ ಸದರ್ನ್​ ಸೂಪರ್ ಸ್ಟಾರ್ಸ್​ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

6 / 6
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!