AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

IPL 2025: ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಸೊಂಟದ ನೋವಿನ ಕಾರಣ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಗ್ರೀನ್ ಐಪಿಎಲ್​ನ 18ನೇ ಆವೃತ್ತಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Oct 15, 2024 | 8:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

1 / 5
ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

2 / 5
ಅಂದರೆ ಮುಂದಿನ ಮೇ ತಿಂಗಳವರೆಗೆ ಕ್ಯಾಮರೋನ್ ಗ್ರೀನ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇತ್ತ ಐಪಿಎಲ್ ಸೀಸನ್-18 ಮಾರ್ಚ್ ಮತ್ತು ಮೇ ತಿಂಗಳ ನಡುವೆ ನಡೆಯಲಿದೆ. ಈ ಅವಧಿಯಲ್ಲಿ ಅಲಭ್ಯರಾಗುವ ಕಾರಣ ಆರ್​ಸಿಬಿ ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪಡೆಯಲ್ಲಿ ಆಸ್ಟ್ರೇಲಿಯನ್ ಆಲ್​ರೌಂಡರ್ ಕಾಣಿಸಿಕೊಳ್ಳುವುದಿಲ್ಲ.

ಅಂದರೆ ಮುಂದಿನ ಮೇ ತಿಂಗಳವರೆಗೆ ಕ್ಯಾಮರೋನ್ ಗ್ರೀನ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇತ್ತ ಐಪಿಎಲ್ ಸೀಸನ್-18 ಮಾರ್ಚ್ ಮತ್ತು ಮೇ ತಿಂಗಳ ನಡುವೆ ನಡೆಯಲಿದೆ. ಈ ಅವಧಿಯಲ್ಲಿ ಅಲಭ್ಯರಾಗುವ ಕಾರಣ ಆರ್​ಸಿಬಿ ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪಡೆಯಲ್ಲಿ ಆಸ್ಟ್ರೇಲಿಯನ್ ಆಲ್​ರೌಂಡರ್ ಕಾಣಿಸಿಕೊಳ್ಳುವುದಿಲ್ಲ.

3 / 5
ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 17.5 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಅದರಂತೆ ಐಪಿಎಲ್ 2024 ರಲ್ಲಿ ಆರ್​ಸಿಬಿ ಪರ 13 ಪಂದ್ಯಗಳನ್ನಾಡಿದ್ದ ಗ್ರೀನ್ 255 ರನ್ ಕಲೆಹಾಕಿದ್ದರು. ಅಲ್ಲದೆ 10 ವಿಕೆಟ್ ಪಡೆದಿದ್ದರು.

ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 17.5 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಅದರಂತೆ ಐಪಿಎಲ್ 2024 ರಲ್ಲಿ ಆರ್​ಸಿಬಿ ಪರ 13 ಪಂದ್ಯಗಳನ್ನಾಡಿದ್ದ ಗ್ರೀನ್ 255 ರನ್ ಕಲೆಹಾಕಿದ್ದರು. ಅಲ್ಲದೆ 10 ವಿಕೆಟ್ ಪಡೆದಿದ್ದರು.

4 / 5
ಹೀಗಾಗಿಯೇ ಈ ಬಾರಿಯ ಐಪಿಎಲ್​ಗೂ ಮುನ್ನ ಆಸ್ಟ್ರೇಲಿಯನ್ ಆಲ್​ರೌಂಡರ್​ನನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣ ಕ್ಯಾಮರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಬಹುತೇಕ ಖಚಿತವಾಗಿದೆ.

ಹೀಗಾಗಿಯೇ ಈ ಬಾರಿಯ ಐಪಿಎಲ್​ಗೂ ಮುನ್ನ ಆಸ್ಟ್ರೇಲಿಯನ್ ಆಲ್​ರೌಂಡರ್​ನನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣ ಕ್ಯಾಮರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಬಹುತೇಕ ಖಚಿತವಾಗಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ