Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB

IPL 2025 RCB full schedule: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವು ನಾಲ್ಕು ತಣಡಗಳ ವಿರುದ್ಧ ಏಕೈಕ ಪಂದ್ಯಗಳನ್ನಾಡಲಿದೆ. ಲೀಗ್​ ಹಂತದಲ್ಲಿ ನಡೆಯಲಿರುವ ಈ ಸುತ್ತಿನಲ್ಲಿ ಆರ್​ಸಿಬಿ ಐದು ತಂಡಗಳ ವಿರುದ್ಧ ತಲಾ 2 ಮ್ಯಾಚ್​ಗಳಲ್ಲಿ ಕಣಕ್ಕಿಳಿದರೆ, ಉಳಿದ ನಾಲ್ಕು ತಂಡಗಳ ವಿರುದ್ಧ ಒಂದೊಂದು ಪಂದ್ಯದಲ್ಲಿ ಮಾತ್ರ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on:Feb 17, 2025 | 9:07 AM

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

1 / 8
ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್​ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

2 / 8
ಹೀಗಾಗಿ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್​ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

ಹೀಗಾಗಿ ಆರ್​ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್​ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

3 / 8
RCB vs GT: ಆರ್​ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

RCB vs GT: ಆರ್​ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್​ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

4 / 8
RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್​ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

5 / 8
RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

6 / 8
RCB vs SRH: ಈ ಬಾರಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್​ ಮಳೆಯನ್ನು ನಿರೀಕ್ಷಿಸಬಹುದು.

RCB vs SRH: ಈ ಬಾರಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್​ ಮಳೆಯನ್ನು ನಿರೀಕ್ಷಿಸಬಹುದು.

7 / 8
ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.

8 / 8

Published On - 9:04 am, Mon, 17 February 25

Follow us
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ