Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!

IPL 2025 RCB vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ 28ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೋ ಗ್ರೀನ್ ಅಭಿಯಾನದ ಭಾಗವಾಗಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Apr 13, 2025 | 12:23 PM

IPL 2025: ಐಪಿಎಲ್​ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್  (RR) ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡ ಹಸಿರು ಉಡುಪಿನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಇದುವೇ ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

IPL 2025: ಐಪಿಎಲ್​ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್  (RR) ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡ ಹಸಿರು ಉಡುಪಿನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಇದುವೇ ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.

1 / 6
ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ವಿಶೇಷ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿದಾಗ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಅಂದರೆ 2011 ರಿಂದ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ವಿಶೇಷ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿದಾಗ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಅಂದರೆ 2011 ರಿಂದ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ.

2 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗ್ರೀನ್ ಜೆರ್ಸಿಯಲ್ಲಿ ಈವರೆಗೆ 14 ಪಂದ್ಯಗಳನ್ನಾಡಿದ್ದು, ಈ ವೇಳೆ ನಾಲ್ಕು ಬಾರಿ ಮಾತ್ರ  ಗೆಲುವು ಸಾಧಿಸಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋತಿದೆ. ಹಾಗೆಯೇ ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗ್ರೀನ್ ಜೆರ್ಸಿಯಲ್ಲಿ ಈವರೆಗೆ 14 ಪಂದ್ಯಗಳನ್ನಾಡಿದ್ದು, ಈ ವೇಳೆ ನಾಲ್ಕು ಬಾರಿ ಮಾತ್ರ  ಗೆಲುವು ಸಾಧಿಸಿದೆ. ಇನ್ನುಳಿದ 8 ಪಂದ್ಯಗಳಲ್ಲಿ ಸೋತಿದೆ. ಹಾಗೆಯೇ ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

3 / 6
ಅದರಲ್ಲೂ ಕಳೆದ 5 ಸೀಸನ್​​ಗಳಲ್ಲಿ ಆರ್​ಸಿಬಿ ತಂಡವು ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿದಾಗ 3 ಬಾರಿ ಸೋಲನುಭವಿಸಿದೆ.  ಅಲ್ಲದೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದಾಗ ಕೆಕೆಆರ್​ ವಿರುದ್ಧ 1 ರನ್​ನಿಂದ ಸೋಲನುಭವಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅದರಲ್ಲೂ ಕಳೆದ 5 ಸೀಸನ್​​ಗಳಲ್ಲಿ ಆರ್​ಸಿಬಿ ತಂಡವು ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿದಾಗ 3 ಬಾರಿ ಸೋಲನುಭವಿಸಿದೆ.  ಅಲ್ಲದೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದಾಗ ಕೆಕೆಆರ್​ ವಿರುದ್ಧ 1 ರನ್​ನಿಂದ ಸೋಲನುಭವಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 6
ಇದೀಗ 16ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ಅದು ಸಹ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ವಿರುದ್ಧ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂಬ ವಾದವನ್ನು ತೊಡೆದು ಹಾಕುತ್ತಾರಾ ಕಾದು ನೋಡಬೇಕಿದೆ.

ಇದೀಗ 16ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ಅದು ಸಹ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ವಿರುದ್ಧ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂಬ ವಾದವನ್ನು ತೊಡೆದು ಹಾಕುತ್ತಾರಾ ಕಾದು ನೋಡಬೇಕಿದೆ.

5 / 6
ಆರ್​ಸಿಬಿ ತಂಡದ ಗ್ರೀನ್ ಜೆರ್ಸಿ ಪಂದ್ಯಗಳ ಫಲಿತಾಂಶ: 2011 ರಲ್ಲಿ ಗೆಲುವು, 2012 ರಲ್ಲಿ ಸೋಲು, 2013 ರಲ್ಲಿ ಸೋಲು, 2014 ರಲ್ಲಿ ಸೋಲು, 2015 ರಲ್ಲಿ ಫಲಿತಾಂಶವಿಲ್ಲ, 2016 ರಲ್ಲಿ ಗೆಲುವು, 2017 ರಲ್ಲಿ ಸೋಲು, 2018 ರಲ್ಲಿ ಸೋಲು, 2019 ರಲ್ಲಿ ಸೋಲು, 2020 ರಲ್ಲಿ ಸೋಲು, 2021 ರಲ್ಲಿ (ನೀಲಿ ಜೆರ್ಸಿ) ಸೋಲು, 2022 ರಲ್ಲಿ ಗೆಲುವು, 2023 ರಲ್ಲಿ ಗೆಲುವು. 2024 ರಲ್ಲಿ ಸೋಲು.

ಆರ್​ಸಿಬಿ ತಂಡದ ಗ್ರೀನ್ ಜೆರ್ಸಿ ಪಂದ್ಯಗಳ ಫಲಿತಾಂಶ: 2011 ರಲ್ಲಿ ಗೆಲುವು, 2012 ರಲ್ಲಿ ಸೋಲು, 2013 ರಲ್ಲಿ ಸೋಲು, 2014 ರಲ್ಲಿ ಸೋಲು, 2015 ರಲ್ಲಿ ಫಲಿತಾಂಶವಿಲ್ಲ, 2016 ರಲ್ಲಿ ಗೆಲುವು, 2017 ರಲ್ಲಿ ಸೋಲು, 2018 ರಲ್ಲಿ ಸೋಲು, 2019 ರಲ್ಲಿ ಸೋಲು, 2020 ರಲ್ಲಿ ಸೋಲು, 2021 ರಲ್ಲಿ (ನೀಲಿ ಜೆರ್ಸಿ) ಸೋಲು, 2022 ರಲ್ಲಿ ಗೆಲುವು, 2023 ರಲ್ಲಿ ಗೆಲುವು. 2024 ರಲ್ಲಿ ಸೋಲು.

6 / 6
Follow us
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!