AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ‘ಆರ್‌ಸಿಬಿ ಜೊತೆಗಿನ ಪಯಣ ಇನ್ನೂ ಮುಗಿದಿಲ್ಲ’; ಹ್ಯಾಪಿ ನ್ಯೂಸ್ ನೀಡಿದ ಗ್ಲೆನ್ ಮ್ಯಾಕ್ಸ್‌ವೆಲ್

Glenn Maxwell: ಆರ್​ಸಿಬಿ ತಂಡ ಕೇವಲ ಮೂರು ಆಟಗಾರರನ್ನು ಉಳಿಸಿಕೊಂಡಿದ್ದು, ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ತಂಡದಿಂದ ಬಿಟ್ಟಿದೆ. ಆದರೆ ಮ್ಯಾಕ್ಸ್‌ವೆಲ್ ಅವರು ಈ ನಿರ್ಧಾರದ ಬಗ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಮತ್ತು ಆರ್​ಸಿಬಿ ಯ ತಂತ್ರವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಮುಂಬರುವ ಮೆಗಾ ಹರಾಜಿನಲ್ಲಿ ಆರ್​ಸಿಬಿ ಮತ್ತೆ ಮ್ಯಾಕ್ಸ್‌ವೆಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Nov 06, 2024 | 5:34 PM

Share
ಐಪಿಎಲ್ 2025 ರ ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ ನವೆಂಬರ್ 24 ಮತ್ತು 25 ರಂದು ಆಟಗಾರರ ಹರಾಜು ನಡೆಯಲಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ 1574 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಾವು ತಂಡದಲ್ಲೇ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಿದ್ದವು. ಇದರಲ್ಲಿ ಕೆಲವು ಫ್ರಾಂಚೈಸಿಗಳು ಅಚ್ಚರಿಯ ನಿರ್ಧಾರವನ್ನು ಕೈಗೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದವು.

ಐಪಿಎಲ್ 2025 ರ ಮೆಗಾ ಹರಾಜಿಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ ನವೆಂಬರ್ 24 ಮತ್ತು 25 ರಂದು ಆಟಗಾರರ ಹರಾಜು ನಡೆಯಲಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ 1574 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಾವು ತಂಡದಲ್ಲೇ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಿದ್ದವು. ಇದರಲ್ಲಿ ಕೆಲವು ಫ್ರಾಂಚೈಸಿಗಳು ಅಚ್ಚರಿಯ ನಿರ್ಧಾರವನ್ನು ಕೈಗೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದವು.

1 / 7
ಆ ಫ್ರಾಂಚೈಸಿಗಳ ಪೈಕಿ ಆರ್​ಸಿಬಿ ಕೂಡ ಒಂದಾಗಿತ್ತು. ರಿಟೆನ್ಷನ್ ಪಟ್ಟಿ ಬಿಡುಗಡೆಯಾಗುವುದಕ್ಕೂ ಮುನ್ನ ಆರ್​ಸಿಬಿ ಯಾವ್ಯಾವ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬುದನ್ನು ಅಂದಾಜಿಸಲಾಗಿತ್ತು. ಆ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್, ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ಹೆಸರು ಸಹ ಸೇರಿತ್ತು.

ಆ ಫ್ರಾಂಚೈಸಿಗಳ ಪೈಕಿ ಆರ್​ಸಿಬಿ ಕೂಡ ಒಂದಾಗಿತ್ತು. ರಿಟೆನ್ಷನ್ ಪಟ್ಟಿ ಬಿಡುಗಡೆಯಾಗುವುದಕ್ಕೂ ಮುನ್ನ ಆರ್​ಸಿಬಿ ಯಾವ್ಯಾವ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬುದನ್ನು ಅಂದಾಜಿಸಲಾಗಿತ್ತು. ಆ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜಾಕ್ಸ್, ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ಹೆಸರು ಸಹ ಸೇರಿತ್ತು.

2 / 7
ಆದರೆ ಎಲ್ಲಾ ಊಹೆಗಳನ್ನು ಸುಳ್ಳು ಮಾಡಿದ್ದ ಆರ್​ಸಿಬಿ, ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಅವರಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದರ್, ಯಶ್ ದಯಾಳ್ ಮಾತ್ರ ಸೇರಿದ್ದರು. ಹೀಗಾಗಿ ಮೇಲೆ ತಿಳಿಸಿರುವ ಮೂರು ಆಟಗಾರರು ಮುಂದಿನ ಆವೃತ್ತಿಯಿಂದ ಆರ್​ಸಿಬಿ ಪರ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೀಗ ಈ ಬಗ್ಗೆ ಮಾತನಾಡಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಆದರೆ ಎಲ್ಲಾ ಊಹೆಗಳನ್ನು ಸುಳ್ಳು ಮಾಡಿದ್ದ ಆರ್​ಸಿಬಿ, ಕೇವಲ 3 ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಅವರಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದರ್, ಯಶ್ ದಯಾಳ್ ಮಾತ್ರ ಸೇರಿದ್ದರು. ಹೀಗಾಗಿ ಮೇಲೆ ತಿಳಿಸಿರುವ ಮೂರು ಆಟಗಾರರು ಮುಂದಿನ ಆವೃತ್ತಿಯಿಂದ ಆರ್​ಸಿಬಿ ಪರ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೀಗ ಈ ಬಗ್ಗೆ ಮಾತನಾಡಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

3 / 7
ಆರ್​ಸಿಬಿ ಫ್ರಾಂಚೈಸಿ ತನ್ನನ್ನು ಉಳಿಸಿಕೊಂಡಿರದ ಬಗ್ಗೆ ಮೌನ ಮುರಿದಿರುವ ಮ್ಯಾಕ್ಸ್‌ವೆಲ್, ಫ್ರಾಂಚೈಸಿಯ ಕಾರ್ಯತಂತ್ರ ನಿಜಕ್ಕೂ ನನಗೆ ಇಷ್ಟವಾಗಿದೆ. ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಈ ರೀತಿಯಾಗಿ ಮಾಡಿದರೆ ಒಳಿತು. ನನ್ನನ್ನು ತಂಡದಿಂದ ಹೊರಗಿಡುವ ಮುನ್ನ ಮೊ ಬೊಬಾಟ್ ಮತ್ತು ಆಂಡಿ ಫ್ಲವರ್ಸ್ ನನಗೆ ಕರೆ ಮಾಡಿದ್ದರು. ವೀಡಿಯೊ ಕಾಲ್​ನಲ್ಲಿ ನಮ್ಮ ನಡುವೆ 30 ನಿಮಿಷಕ್ಕೂ ಹೆಚ್ಚು ಸಮಯ ಮಾತುಕತೆ ನಡೆಯಿತು.

ಆರ್​ಸಿಬಿ ಫ್ರಾಂಚೈಸಿ ತನ್ನನ್ನು ಉಳಿಸಿಕೊಂಡಿರದ ಬಗ್ಗೆ ಮೌನ ಮುರಿದಿರುವ ಮ್ಯಾಕ್ಸ್‌ವೆಲ್, ಫ್ರಾಂಚೈಸಿಯ ಕಾರ್ಯತಂತ್ರ ನಿಜಕ್ಕೂ ನನಗೆ ಇಷ್ಟವಾಗಿದೆ. ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಈ ರೀತಿಯಾಗಿ ಮಾಡಿದರೆ ಒಳಿತು. ನನ್ನನ್ನು ತಂಡದಿಂದ ಹೊರಗಿಡುವ ಮುನ್ನ ಮೊ ಬೊಬಾಟ್ ಮತ್ತು ಆಂಡಿ ಫ್ಲವರ್ಸ್ ನನಗೆ ಕರೆ ಮಾಡಿದ್ದರು. ವೀಡಿಯೊ ಕಾಲ್​ನಲ್ಲಿ ನಮ್ಮ ನಡುವೆ 30 ನಿಮಿಷಕ್ಕೂ ಹೆಚ್ಚು ಸಮಯ ಮಾತುಕತೆ ನಡೆಯಿತು.

4 / 7
ಈ ವೇಳೆ ಈ ಇಬ್ಬರು ನನ್ನನ್ನು ಏಕೆ ಉಳಿಸಿಕೊಳ್ಳಲಿಲ್ಲ ಎಂಬುದನ್ನು ವಿವರವಾಗಿ ತಿಳಿಸಿದರು. ಉತ್ತಮ ತಂಡ ಕಟ್ಟಲು ನಾವು ಏನನ್ನು ನಿರೀಕ್ಷಿಸುತ್ತಿದ್ದವೆಂದು ಅವರು ನನಗೆ ಸಂಪೂರ್ಣ ಅರ್ಥ ಮಾಡಿಸಿದರು. ನನ್ನ ಪ್ರಕಾರ ಪ್ರತಿಯೊಂದು ತಂಡವೂ ಆರ್​ಸಿಬಿ ಯಂತೆಯೇ ಮಾಡಬೇಕೆಂದು ನಾನು ಬಯಸುತ್ತೇನೆ. ಇದು ತಂಡ ಮತ್ತು ಆಟಗಾರರ ನಡುವಿನ ಸಂಬಂಧವನ್ನು ಹೆಚ್ಚು ಸುಧಾರಿಸುತ್ತದೆ.

ಈ ವೇಳೆ ಈ ಇಬ್ಬರು ನನ್ನನ್ನು ಏಕೆ ಉಳಿಸಿಕೊಳ್ಳಲಿಲ್ಲ ಎಂಬುದನ್ನು ವಿವರವಾಗಿ ತಿಳಿಸಿದರು. ಉತ್ತಮ ತಂಡ ಕಟ್ಟಲು ನಾವು ಏನನ್ನು ನಿರೀಕ್ಷಿಸುತ್ತಿದ್ದವೆಂದು ಅವರು ನನಗೆ ಸಂಪೂರ್ಣ ಅರ್ಥ ಮಾಡಿಸಿದರು. ನನ್ನ ಪ್ರಕಾರ ಪ್ರತಿಯೊಂದು ತಂಡವೂ ಆರ್​ಸಿಬಿ ಯಂತೆಯೇ ಮಾಡಬೇಕೆಂದು ನಾನು ಬಯಸುತ್ತೇನೆ. ಇದು ತಂಡ ಮತ್ತು ಆಟಗಾರರ ನಡುವಿನ ಸಂಬಂಧವನ್ನು ಹೆಚ್ಚು ಸುಧಾರಿಸುತ್ತದೆ.

5 / 7
ಹೀಗಾಗಿ ಮುಂಬರುವ ಸೀಸನ್​ಗೆ ತಂಡದ ಕಾರ್ಯತಂತ್ರವನ್ನು ತಾನು ಅರ್ಥಮಾಡಿಕೊಂಡಿದ್ದೇನೆ. ಪ್ರಸ್ತುತ ಆರ್​ಸಿಬಿ ಜೊತೆಗಿನ ನನ್ನ ಪ್ರಯಾಣ ಇನ್ನೂ ಮುಗಿದಿಲ್ಲ ಎಂದು ಹೇಳಲು ಬಯಸುತ್ತೇನೆ. ಆರ್​ಸಿಬಿ ಫ್ರಾಂಚೈಸಿ ತಮ್ಮ ಸಿಬ್ಬಂದಿಯಲ್ಲೂ ಬದಲಾವಣೆಗಳನ್ನು ಮಾಡಿದೆ. ಹಾಗೆಯೇ ಸೂಕ್ತ ಆಟಗಾರರನ್ನು ಆಯ್ಕೆ ಮಾಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ನನಗೆ ತಿಳಿದಿದೆ. ನಾನು ಆ ತಂಡಕ್ಕೆ ಹಿಂತಿರುಗಲು ಇಷ್ಟಪಡುತ್ತೇನೆ. ಆಡಲು ಆರ್​ಸಿಬಿ ಉತ್ತಮ ಫ್ರಾಂಚೈಸ್ ಆಗಿದೆ ಎಂದು ಮ್ಯಾಕ್ಸ್‌ವೆಲ್ ಹೇಳಿದ್ದಾರೆ.

ಹೀಗಾಗಿ ಮುಂಬರುವ ಸೀಸನ್​ಗೆ ತಂಡದ ಕಾರ್ಯತಂತ್ರವನ್ನು ತಾನು ಅರ್ಥಮಾಡಿಕೊಂಡಿದ್ದೇನೆ. ಪ್ರಸ್ತುತ ಆರ್​ಸಿಬಿ ಜೊತೆಗಿನ ನನ್ನ ಪ್ರಯಾಣ ಇನ್ನೂ ಮುಗಿದಿಲ್ಲ ಎಂದು ಹೇಳಲು ಬಯಸುತ್ತೇನೆ. ಆರ್​ಸಿಬಿ ಫ್ರಾಂಚೈಸಿ ತಮ್ಮ ಸಿಬ್ಬಂದಿಯಲ್ಲೂ ಬದಲಾವಣೆಗಳನ್ನು ಮಾಡಿದೆ. ಹಾಗೆಯೇ ಸೂಕ್ತ ಆಟಗಾರರನ್ನು ಆಯ್ಕೆ ಮಾಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ನನಗೆ ತಿಳಿದಿದೆ. ನಾನು ಆ ತಂಡಕ್ಕೆ ಹಿಂತಿರುಗಲು ಇಷ್ಟಪಡುತ್ತೇನೆ. ಆಡಲು ಆರ್​ಸಿಬಿ ಉತ್ತಮ ಫ್ರಾಂಚೈಸ್ ಆಗಿದೆ ಎಂದು ಮ್ಯಾಕ್ಸ್‌ವೆಲ್ ಹೇಳಿದ್ದಾರೆ.

6 / 7
ಇದರರ್ಥ ಆರ್​ಸಿಬಿ ಬಳಿ ಇನ್ನು 3 ಆರ್​ಟಿಎಮ್​ ಆಯ್ಕೆಯಿದ್ದು, ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್​ರನ್ನು ಮತ್ತೊಮ್ಮೆ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಿವೆ ಎಂಬುದನ್ನು ನಾವು ಮ್ಯಾಕ್ಸ್‌ವೆಲ್ ಅವರ ಮಾತಿನಿಂದ ಅರಿತುಕೊಳ್ಳಬಹುದಾಗಿದೆ. ಇದು ನಿಜವಾದರೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಆರ್​ಸಿಬಿ ಜೆರ್ಸಿಯನ್ನು ತೊಟ್ಟು ಕಣಕ್ಕಿಳಿಯುವುದನ್ನು ನಾವು ಕಾಣಬಹುದಾಗಿದೆ.

ಇದರರ್ಥ ಆರ್​ಸಿಬಿ ಬಳಿ ಇನ್ನು 3 ಆರ್​ಟಿಎಮ್​ ಆಯ್ಕೆಯಿದ್ದು, ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್​ರನ್ನು ಮತ್ತೊಮ್ಮೆ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಿವೆ ಎಂಬುದನ್ನು ನಾವು ಮ್ಯಾಕ್ಸ್‌ವೆಲ್ ಅವರ ಮಾತಿನಿಂದ ಅರಿತುಕೊಳ್ಳಬಹುದಾಗಿದೆ. ಇದು ನಿಜವಾದರೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಆರ್​ಸಿಬಿ ಜೆರ್ಸಿಯನ್ನು ತೊಟ್ಟು ಕಣಕ್ಕಿಳಿಯುವುದನ್ನು ನಾವು ಕಾಣಬಹುದಾಗಿದೆ.

7 / 7
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ