AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಆರ್​ಸಿಬಿ ಪಡೆ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ. ಇದೀಗ ಐಪಿಎಲ್ ಮುಂದೂಡಿದ್ದರಿಂದ ಆರ್​ಸಿಬಿ ತಂಡದ ನಾಲ್ವರು ಆಟಗಾರರು ಮುಂದಿನ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 10, 2025 | 8:31 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಒಂದು ವಾರದವರೆಗೆ ಮುಂದೂಡಲಾಗಿದೆ. ಈ ಮುಂದೂಡುವಿಕೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಹೊಸ ಸಮಸ್ಯೆಯನ್ನು ಉಂಟು ಮಾಡಬಹುದು. ಏಕೆಂದರೆ ಒಂದು ವಾರದ ಬಳಿಕ ಐಪಿಎಲ್ ಮತ್ತೆ ಆಯೋಜನೆಗೊಂಡರೆ, ಕೆಲ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಒಂದು ವಾರದವರೆಗೆ ಮುಂದೂಡಲಾಗಿದೆ. ಈ ಮುಂದೂಡುವಿಕೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಹೊಸ ಸಮಸ್ಯೆಯನ್ನು ಉಂಟು ಮಾಡಬಹುದು. ಏಕೆಂದರೆ ಒಂದು ವಾರದ ಬಳಿಕ ಐಪಿಎಲ್ ಮತ್ತೆ ಆಯೋಜನೆಗೊಂಡರೆ, ಕೆಲ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

1 / 5
ಅದರಲ್ಲೂ ಆರ್​ಸಿಬಿ ತಂಡದ ಆಧಾರಸ್ತಂಭವೆಂದರೆ ಇಂಗ್ಲೆಂಡ್ ಆಟಗಾರರು. ಏಕೆಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಮೂವರು ಇಂಗ್ಲೆಂಡ್ ಆಟಗಾರರಿದ್ದಾರೆ. ಒಂದು ವೇಳೆ ಐಪಿಎಲ್ ಆರಂಭ ತಡವಾದರೆ, ಮುಂದಿನ ಪಂದ್ಯಗಳಿಗೆ ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್ ಹಾಗೂ ಫಿಲ್ ಸಾಲ್ಟ್ ಅಲಭ್ಯರಾಗುವುದು ಖಚಿತ.

ಅದರಲ್ಲೂ ಆರ್​ಸಿಬಿ ತಂಡದ ಆಧಾರಸ್ತಂಭವೆಂದರೆ ಇಂಗ್ಲೆಂಡ್ ಆಟಗಾರರು. ಏಕೆಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಮೂವರು ಇಂಗ್ಲೆಂಡ್ ಆಟಗಾರರಿದ್ದಾರೆ. ಒಂದು ವೇಳೆ ಐಪಿಎಲ್ ಆರಂಭ ತಡವಾದರೆ, ಮುಂದಿನ ಪಂದ್ಯಗಳಿಗೆ ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್ ಹಾಗೂ ಫಿಲ್ ಸಾಲ್ಟ್ ಅಲಭ್ಯರಾಗುವುದು ಖಚಿತ.

2 / 5
ಏಕೆಂದರೆ ಮೇ 22 ರಿಂದ ಇಂಗ್ಲೆಂಡ್ ಹಾಗೂ ಝಿಂಬಾಬ್ವೆ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಇದರ ಬೆನ್ನಲ್ಲೇ ಮೇ. 29 ರಿಂದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಕೂಡ ಆರಂಭವಾಗುತ್ತಿದೆ. ಈ ಸರಣಿಗಳಿಗೆ ಜೇಕಬ್ ಬೆಥೆಲ್, ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಫಿಲ್ ಸಾಲ್ಟ್ ಆಯ್ಕೆಯಾಗುವುದು ಖಚಿತ ಎನ್ನಬಹುದು.

ಏಕೆಂದರೆ ಮೇ 22 ರಿಂದ ಇಂಗ್ಲೆಂಡ್ ಹಾಗೂ ಝಿಂಬಾಬ್ವೆ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಇದರ ಬೆನ್ನಲ್ಲೇ ಮೇ. 29 ರಿಂದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಕೂಡ ಆರಂಭವಾಗುತ್ತಿದೆ. ಈ ಸರಣಿಗಳಿಗೆ ಜೇಕಬ್ ಬೆಥೆಲ್, ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಫಿಲ್ ಸಾಲ್ಟ್ ಆಯ್ಕೆಯಾಗುವುದು ಖಚಿತ ಎನ್ನಬಹುದು.

3 / 5
ಅತ್ತ ಇಂಗ್ಲೆಂಡ್​ ವಿರುದ್ಧದ ಸರಣಿಗೆ ಈಗಾಗಲೇ ವೆಸ್ಟ್ ಇಂಡೀಸ್ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಆರ್​ಸಿಬಿ ಆಟಗಾರ ರೊಮಾರಿಯೊ ಶೆಫರ್ಡ್ ಕೂಡ ಕಾಣಿಸಿಕೊಂಡಿದ್ದಾರೆ. ಅಂದರೆ ಐಪಿಎಲ್​ ತಡವಾಗಿ ಆರಂಭವಾದರೆ, ಆರ್​ಸಿಬಿ ತಂಡದಿಂದ ರೊಮಾರಿಯೊ ಶೆಫರ್ಡ್, ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಅತ್ತ ಇಂಗ್ಲೆಂಡ್​ ವಿರುದ್ಧದ ಸರಣಿಗೆ ಈಗಾಗಲೇ ವೆಸ್ಟ್ ಇಂಡೀಸ್ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಆರ್​ಸಿಬಿ ಆಟಗಾರ ರೊಮಾರಿಯೊ ಶೆಫರ್ಡ್ ಕೂಡ ಕಾಣಿಸಿಕೊಂಡಿದ್ದಾರೆ. ಅಂದರೆ ಐಪಿಎಲ್​ ತಡವಾಗಿ ಆರಂಭವಾದರೆ, ಆರ್​ಸಿಬಿ ತಂಡದಿಂದ ರೊಮಾರಿಯೊ ಶೆಫರ್ಡ್, ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 5
ಈ ನಾಲ್ವರು ಪ್ರಮುಖ ಆಟಗಾರರು ಆರ್​ಸಿಬಿ ತಂಡದಿಂದ ಹೊರಗುಳಿದರೆ, ಟೀಮ್​ನಲ್ಲಿ ವಿದೇಶಿ ಆಟಗಾರರಾಗಿ ಉಳಿಯುವುದು ಸೌತ್ ಆಫ್ರಿಕಾದ ಲುಂಗಿ ಎನ್​ಗಿಡಿ, ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್​ವುಡ್, ಟಿಮ್ ಡೇವಿಡ್ ಹಾಗೂ ಶ್ರೀಲಂಕಾದ ನುವಾನ್ ತುಷಾರ ಮಾತ್ರ. ಹೀಗಾಗಿ ಕೊನೆಯ ಪಂದ್ಯಗಳಿಗೆ ಆರ್​ಸಿಬಿ ನಾಲ್ವರು ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಈ ನಾಲ್ವರು ಪ್ರಮುಖ ಆಟಗಾರರು ಆರ್​ಸಿಬಿ ತಂಡದಿಂದ ಹೊರಗುಳಿದರೆ, ಟೀಮ್​ನಲ್ಲಿ ವಿದೇಶಿ ಆಟಗಾರರಾಗಿ ಉಳಿಯುವುದು ಸೌತ್ ಆಫ್ರಿಕಾದ ಲುಂಗಿ ಎನ್​ಗಿಡಿ, ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್​ವುಡ್, ಟಿಮ್ ಡೇವಿಡ್ ಹಾಗೂ ಶ್ರೀಲಂಕಾದ ನುವಾನ್ ತುಷಾರ ಮಾತ್ರ. ಹೀಗಾಗಿ ಕೊನೆಯ ಪಂದ್ಯಗಳಿಗೆ ಆರ್​ಸಿಬಿ ನಾಲ್ವರು ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ.

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ