AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಆರ್​ಸಿಬಿ ಪಡೆ ಪ್ಲೇಆಫ್ ಹಂತಕ್ಕೇರುವ ಸನಿಹದಲ್ಲಿದೆ. ಇದೀಗ ಐಪಿಎಲ್ ಮುಂದೂಡಿದ್ದರಿಂದ ಆರ್​ಸಿಬಿ ತಂಡದ ನಾಲ್ವರು ಆಟಗಾರರು ಮುಂದಿನ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 10, 2025 | 8:31 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಒಂದು ವಾರದವರೆಗೆ ಮುಂದೂಡಲಾಗಿದೆ. ಈ ಮುಂದೂಡುವಿಕೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಹೊಸ ಸಮಸ್ಯೆಯನ್ನು ಉಂಟು ಮಾಡಬಹುದು. ಏಕೆಂದರೆ ಒಂದು ವಾರದ ಬಳಿಕ ಐಪಿಎಲ್ ಮತ್ತೆ ಆಯೋಜನೆಗೊಂಡರೆ, ಕೆಲ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಒಂದು ವಾರದವರೆಗೆ ಮುಂದೂಡಲಾಗಿದೆ. ಈ ಮುಂದೂಡುವಿಕೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಹೊಸ ಸಮಸ್ಯೆಯನ್ನು ಉಂಟು ಮಾಡಬಹುದು. ಏಕೆಂದರೆ ಒಂದು ವಾರದ ಬಳಿಕ ಐಪಿಎಲ್ ಮತ್ತೆ ಆಯೋಜನೆಗೊಂಡರೆ, ಕೆಲ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

1 / 5
ಅದರಲ್ಲೂ ಆರ್​ಸಿಬಿ ತಂಡದ ಆಧಾರಸ್ತಂಭವೆಂದರೆ ಇಂಗ್ಲೆಂಡ್ ಆಟಗಾರರು. ಏಕೆಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಮೂವರು ಇಂಗ್ಲೆಂಡ್ ಆಟಗಾರರಿದ್ದಾರೆ. ಒಂದು ವೇಳೆ ಐಪಿಎಲ್ ಆರಂಭ ತಡವಾದರೆ, ಮುಂದಿನ ಪಂದ್ಯಗಳಿಗೆ ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್ ಹಾಗೂ ಫಿಲ್ ಸಾಲ್ಟ್ ಅಲಭ್ಯರಾಗುವುದು ಖಚಿತ.

ಅದರಲ್ಲೂ ಆರ್​ಸಿಬಿ ತಂಡದ ಆಧಾರಸ್ತಂಭವೆಂದರೆ ಇಂಗ್ಲೆಂಡ್ ಆಟಗಾರರು. ಏಕೆಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಮೂವರು ಇಂಗ್ಲೆಂಡ್ ಆಟಗಾರರಿದ್ದಾರೆ. ಒಂದು ವೇಳೆ ಐಪಿಎಲ್ ಆರಂಭ ತಡವಾದರೆ, ಮುಂದಿನ ಪಂದ್ಯಗಳಿಗೆ ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್ ಹಾಗೂ ಫಿಲ್ ಸಾಲ್ಟ್ ಅಲಭ್ಯರಾಗುವುದು ಖಚಿತ.

2 / 5
ಏಕೆಂದರೆ ಮೇ 22 ರಿಂದ ಇಂಗ್ಲೆಂಡ್ ಹಾಗೂ ಝಿಂಬಾಬ್ವೆ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಇದರ ಬೆನ್ನಲ್ಲೇ ಮೇ. 29 ರಿಂದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಕೂಡ ಆರಂಭವಾಗುತ್ತಿದೆ. ಈ ಸರಣಿಗಳಿಗೆ ಜೇಕಬ್ ಬೆಥೆಲ್, ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಫಿಲ್ ಸಾಲ್ಟ್ ಆಯ್ಕೆಯಾಗುವುದು ಖಚಿತ ಎನ್ನಬಹುದು.

ಏಕೆಂದರೆ ಮೇ 22 ರಿಂದ ಇಂಗ್ಲೆಂಡ್ ಹಾಗೂ ಝಿಂಬಾಬ್ವೆ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಇದರ ಬೆನ್ನಲ್ಲೇ ಮೇ. 29 ರಿಂದ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಕೂಡ ಆರಂಭವಾಗುತ್ತಿದೆ. ಈ ಸರಣಿಗಳಿಗೆ ಜೇಕಬ್ ಬೆಥೆಲ್, ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಫಿಲ್ ಸಾಲ್ಟ್ ಆಯ್ಕೆಯಾಗುವುದು ಖಚಿತ ಎನ್ನಬಹುದು.

3 / 5
ಅತ್ತ ಇಂಗ್ಲೆಂಡ್​ ವಿರುದ್ಧದ ಸರಣಿಗೆ ಈಗಾಗಲೇ ವೆಸ್ಟ್ ಇಂಡೀಸ್ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಆರ್​ಸಿಬಿ ಆಟಗಾರ ರೊಮಾರಿಯೊ ಶೆಫರ್ಡ್ ಕೂಡ ಕಾಣಿಸಿಕೊಂಡಿದ್ದಾರೆ. ಅಂದರೆ ಐಪಿಎಲ್​ ತಡವಾಗಿ ಆರಂಭವಾದರೆ, ಆರ್​ಸಿಬಿ ತಂಡದಿಂದ ರೊಮಾರಿಯೊ ಶೆಫರ್ಡ್, ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಅತ್ತ ಇಂಗ್ಲೆಂಡ್​ ವಿರುದ್ಧದ ಸರಣಿಗೆ ಈಗಾಗಲೇ ವೆಸ್ಟ್ ಇಂಡೀಸ್ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಆರ್​ಸಿಬಿ ಆಟಗಾರ ರೊಮಾರಿಯೊ ಶೆಫರ್ಡ್ ಕೂಡ ಕಾಣಿಸಿಕೊಂಡಿದ್ದಾರೆ. ಅಂದರೆ ಐಪಿಎಲ್​ ತಡವಾಗಿ ಆರಂಭವಾದರೆ, ಆರ್​ಸಿಬಿ ತಂಡದಿಂದ ರೊಮಾರಿಯೊ ಶೆಫರ್ಡ್, ಲಿಯಾಮ್ ಲಿವಿಂಗ್​ಸ್ಟೋನ್, ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 5
ಈ ನಾಲ್ವರು ಪ್ರಮುಖ ಆಟಗಾರರು ಆರ್​ಸಿಬಿ ತಂಡದಿಂದ ಹೊರಗುಳಿದರೆ, ಟೀಮ್​ನಲ್ಲಿ ವಿದೇಶಿ ಆಟಗಾರರಾಗಿ ಉಳಿಯುವುದು ಸೌತ್ ಆಫ್ರಿಕಾದ ಲುಂಗಿ ಎನ್​ಗಿಡಿ, ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್​ವುಡ್, ಟಿಮ್ ಡೇವಿಡ್ ಹಾಗೂ ಶ್ರೀಲಂಕಾದ ನುವಾನ್ ತುಷಾರ ಮಾತ್ರ. ಹೀಗಾಗಿ ಕೊನೆಯ ಪಂದ್ಯಗಳಿಗೆ ಆರ್​ಸಿಬಿ ನಾಲ್ವರು ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ.

ಈ ನಾಲ್ವರು ಪ್ರಮುಖ ಆಟಗಾರರು ಆರ್​ಸಿಬಿ ತಂಡದಿಂದ ಹೊರಗುಳಿದರೆ, ಟೀಮ್​ನಲ್ಲಿ ವಿದೇಶಿ ಆಟಗಾರರಾಗಿ ಉಳಿಯುವುದು ಸೌತ್ ಆಫ್ರಿಕಾದ ಲುಂಗಿ ಎನ್​ಗಿಡಿ, ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್​ವುಡ್, ಟಿಮ್ ಡೇವಿಡ್ ಹಾಗೂ ಶ್ರೀಲಂಕಾದ ನುವಾನ್ ತುಷಾರ ಮಾತ್ರ. ಹೀಗಾಗಿ ಕೊನೆಯ ಪಂದ್ಯಗಳಿಗೆ ಆರ್​ಸಿಬಿ ನಾಲ್ವರು ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!