AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಗೆದ್ದರೆ ಅಥವಾ ಸೋತರೆ ಏನಾಗಲಿದೆ?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಪುನರಾರಂಭಕ್ಕೆ ವೇದಿಕೆ ಸಿದ್ಧವಾಗಿದೆ. ಅದರಂತೆ ಶನಿವಾರದಿಂದ (ಮೇ.17) ಟೂರ್ನಿಗೆ ಮತ್ತೆ ಚಾಲನೆ ದೊರೆಯಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on: May 17, 2025 | 10:23 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿಗಿಂತ, ಕೆಕೆಆರ್ ಪಾಲಿಗೆ ನಿರ್ಣಾಯಕ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿಗಿಂತ, ಕೆಕೆಆರ್ ಪಾಲಿಗೆ ನಿರ್ಣಾಯಕ.

1 / 5
ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್​ ರೇಸ್​ನಲ್ಲಿ ಉಳಿಯಲಿದೆ. ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ದಾಖಲಿಸಿದರೆ ಪ್ಲೇಆಫ್​ಗೇರುವುದು ಖಚಿತವಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್​ ರೇಸ್​ನಲ್ಲಿ ಉಳಿಯಲಿದೆ. ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ದಾಖಲಿಸಿದರೆ ಪ್ಲೇಆಫ್​ಗೇರುವುದು ಖಚಿತವಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

2 / 5
ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಅಲ್ಲದೆ ಆರ್​ಸಿಬಿ ಪಡೆ ಪ್ಲೇಆಫ್​ ಆಡುವುದು ಬಹುತೇಕ ಖಚಿತವಾಗಲಿದೆ. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರ್​ಸಿಬಿ ತಂಡವು ಇಂದು ಗೆಲುವು ದಾಖಲಿಸಲೇಬೇಕು.

ಇನ್ನು ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಅಲ್ಲದೆ ಆರ್​ಸಿಬಿ ಪಡೆ ಪ್ಲೇಆಫ್​ ಆಡುವುದು ಬಹುತೇಕ ಖಚಿತವಾಗಲಿದೆ. ಅಷ್ಟೇ ಅಲ್ಲದೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರ್​ಸಿಬಿ ತಂಡವು ಇಂದು ಗೆಲುವು ದಾಖಲಿಸಲೇಬೇಕು.

3 / 5
ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ವಿರುದ್ಧ ಸೋಲನುಭವಿಸಿದರೆ, ಅಂಕ ಪಟ್ಟಿಯಲ್ಲಿ ಬದಲಾವಣೆ ಏನೂ ಆಗುವುದಿಲ್ಲ. ಅಲ್ಲದೆ ಆರ್​ಸಿಬಿ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲೇ ಉಳಿಯಲಿದೆ. ಇದಾಗ್ಯೂ ಪ್ಲೇಆಫ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬೇಕಿದ್ದರೆ ಎಸ್​ಆರ್​ಹೆಚ್ ಅಥವಾ ಎಲ್​ಎಸ್​ಜಿ ವಿರುದ್ಧ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ವಿರುದ್ಧ ಸೋಲನುಭವಿಸಿದರೆ, ಅಂಕ ಪಟ್ಟಿಯಲ್ಲಿ ಬದಲಾವಣೆ ಏನೂ ಆಗುವುದಿಲ್ಲ. ಅಲ್ಲದೆ ಆರ್​ಸಿಬಿ 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲೇ ಉಳಿಯಲಿದೆ. ಇದಾಗ್ಯೂ ಪ್ಲೇಆಫ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಬೇಕಿದ್ದರೆ ಎಸ್​ಆರ್​ಹೆಚ್ ಅಥವಾ ಎಲ್​ಎಸ್​ಜಿ ವಿರುದ್ಧ ಜಯ ಸಾಧಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

4 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸಲೇಬೇಕು. ಈ ಮೂಲಕ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತನ್ನ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಪಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದಾಗಿದೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸಲೇಬೇಕು. ಈ ಮೂಲಕ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತನ್ನ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ರಾಯಲ್ ಪಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದಾಗಿದೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ