AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಹೀಗಾದ್ರೆ RCB ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತೆ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 65 ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಅಗ್ರ ಅಲಂಕರಿಸಿದರೆ, ಪಂಜಾಬ್ ಕಿಂಗ್ಸ್ ತಂಡವು ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇನ್ನು ಆರ್​ಸಿಬಿ ತಂಡವು ಮೂರನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 24, 2025 | 8:33 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಸೋಲುಣಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಸೋಲುಣಿಸಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.

1 / 6
ಈ ಕುಸಿತದೊಂದಿಗೆ ಇದೀಗ ಆರ್​ಸಿಬಿ ತಂಡಕ್ಕೆ ಎಲಿಮಿನೇಟರ್ ಪಂದ್ಯದ ಆತಂಕ ಎದುರಾಗಿದೆ. ಏಕೆಂದರೆ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದರೂ ಒಟ್ಟು ಅಂಕಗಳ ಸಂಖ್ಯೆ 19 ಕ್ಕೇರಲಿದೆ. ಆದರೆ ಅತ್ತ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಗೆದ್ದರೆ ಒಟ್ಟು 20 ಅಂಕಗಳನ್ನು ಪಡೆಯಲಿದೆ.

ಈ ಕುಸಿತದೊಂದಿಗೆ ಇದೀಗ ಆರ್​ಸಿಬಿ ತಂಡಕ್ಕೆ ಎಲಿಮಿನೇಟರ್ ಪಂದ್ಯದ ಆತಂಕ ಎದುರಾಗಿದೆ. ಏಕೆಂದರೆ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದರೂ ಒಟ್ಟು ಅಂಕಗಳ ಸಂಖ್ಯೆ 19 ಕ್ಕೇರಲಿದೆ. ಆದರೆ ಅತ್ತ ಗುಜರಾತ್ ಟೈಟಾನ್ಸ್ ತಂಡವು ಸಿಎಸ್​ಕೆ ವಿರುದ್ಧ ಗೆದ್ದರೆ ಒಟ್ಟು 20 ಅಂಕಗಳನ್ನು ಪಡೆಯಲಿದೆ.

2 / 6
ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಸೋಲುಣಿಸಿದರೆ, ಒಟ್ಟು 21 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಬಹುದು.

ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಸೋಲುಣಿಸಿದರೆ, ಒಟ್ಟು 21 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಬಹುದು.

3 / 6
ಹೀಗಾದಲ್ಲಿ, ಆರ್​ಸಿಬಿ ತಂಡವು ಕೊನೆಯ ಪಂದ್ಯದಲ್ಲಿ ಗೆದ್ದರೂ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಲಿದೆ. ಈ ಮೂಲಕ ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ. ಇಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುತ್ತದೆ. ಹೀಗಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿರುವ ಎಲ್ಲಾ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದೆ.

ಹೀಗಾದಲ್ಲಿ, ಆರ್​ಸಿಬಿ ತಂಡವು ಕೊನೆಯ ಪಂದ್ಯದಲ್ಲಿ ಗೆದ್ದರೂ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಲಿದೆ. ಈ ಮೂಲಕ ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತದೆ. ಇಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳುತ್ತದೆ. ಹೀಗಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿರುವ ಎಲ್ಲಾ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶವನ್ನು ಎದುರು ನೋಡುತ್ತಿದೆ.

4 / 6
ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡವು ಗೆದ್ದರೆ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ. ಅಂದರೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡುವ ಮೂಲಕ ಫೈನಲ್​ಗೇರುವ ಅವಕಾಶ ಸಿಗಲಿದೆ. ಹೀಗಾಗಿಯೇ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಅಲಂಕರಿಸುವ ಅವಕಾಶವನ್ನು ಎಲ್ಲಾ ತಂಡಗಳು ಎದುರು ನೋಡುತ್ತಿದೆ.

ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡವು ಗೆದ್ದರೆ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ. ಅಂದರೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡುವ ಮೂಲಕ ಫೈನಲ್​ಗೇರುವ ಅವಕಾಶ ಸಿಗಲಿದೆ. ಹೀಗಾಗಿಯೇ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಅಲಂಕರಿಸುವ ಅವಕಾಶವನ್ನು ಎಲ್ಲಾ ತಂಡಗಳು ಎದುರು ನೋಡುತ್ತಿದೆ.

5 / 6
ಇಲ್ಲಿ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇನ್ನು ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬಿದ್ದರೆ, ಗೆದ್ದ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಡನೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ. 

ಇಲ್ಲಿ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇನ್ನು ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬಿದ್ದರೆ, ಗೆದ್ದ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಡನೆ ಎರಡನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ. 

6 / 6
Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!