AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದ 7 ವಿದೇಶಿ ಆಟಗಾರರ ಆಗಮನ: ಒಬ್ಬರಿಗಾಗಿ ವೇಟಿಂಗ್

IPL 2025 RCB vs KKR: ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 8 ಜಯ ಸಾಧಿಸಿರುವ ಆರ್​ಸಿಬಿ ತಂಡವು ಒಟ್ಟು 16 ಅಂಕಗಳನ್ನು ಕಲೆಹಾಕಿದೆ. ಇದೀಗ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿರುವ ಆರ್​ಸಿಬಿ ಪಡೆ ಈ ಮ್ಯಾಚ್​ನಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: May 17, 2025 | 11:10 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 7 ವಿದೇಶಿ ಆಟಗಾರರು ಆಗಮಿಸಿದ್ದಾರೆ. ಅಲ್ಲದೆ ಈ ಎಲ್ಲಾ ಆಟಗಾರರು ಈಗಾಗಲೇ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಇವರಲ್ಲಿ ನಾಲ್ವರು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ. ಹಾಗಿದ್ರೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿರುವ 7 ವಿದೇಶಿ ಆಟಗಾರರು ಯಾರೆಲ್ಲಾ ಎಂದು ನೋಡೋಣ...

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಉಳಿದ ಪಂದ್ಯಗಳಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 7 ವಿದೇಶಿ ಆಟಗಾರರು ಆಗಮಿಸಿದ್ದಾರೆ. ಅಲ್ಲದೆ ಈ ಎಲ್ಲಾ ಆಟಗಾರರು ಈಗಾಗಲೇ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಇವರಲ್ಲಿ ನಾಲ್ವರು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ. ಹಾಗಿದ್ರೆ ಆರ್​ಸಿಬಿ ತಂಡವನ್ನು ಕೂಡಿಕೊಂಡಿರುವ 7 ವಿದೇಶಿ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 9
ಫಿಲ್ ಸಾಲ್ಟ್​: ಇಂಗ್ಲೆಂಡ್ ತಂಡದ ಹೊಡಿಬಡಿ ದಾಂಡಿಗ ಫಿಲ್ ಸಾಲ್ಟ್ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 9 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿರುವ ಸಾಲ್ಟ್ ಒಟ್ಟು 236 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕೆಕೆಆರ್ ವಿರುದ್ಧ ಅವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ.

ಫಿಲ್ ಸಾಲ್ಟ್​: ಇಂಗ್ಲೆಂಡ್ ತಂಡದ ಹೊಡಿಬಡಿ ದಾಂಡಿಗ ಫಿಲ್ ಸಾಲ್ಟ್ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 9 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿರುವ ಸಾಲ್ಟ್ ಒಟ್ಟು 236 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಕೆಕೆಆರ್ ವಿರುದ್ಧ ಅವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ.

2 / 9
ಜೇಕಬ್ ಬೆಥೆಲ್: ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕೊನೆಯ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಪರ ಇಂಗ್ಲೆಂಡ್​ನ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಈ ವೇಳೆ ಒಂದು ಅರ್ಧಶತಕ ಬಾರಿಸಿರುವ ಬೆಥೆಲ್ ಒಟ್ಟು 67 ರನ್ ಕಲೆಹಾಕಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬೆಥೆಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಜೇಕಬ್ ಬೆಥೆಲ್: ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕೊನೆಯ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಪರ ಇಂಗ್ಲೆಂಡ್​ನ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಈ ವೇಳೆ ಒಂದು ಅರ್ಧಶತಕ ಬಾರಿಸಿರುವ ಬೆಥೆಲ್ ಒಟ್ಟು 67 ರನ್ ಕಲೆಹಾಕಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬೆಥೆಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

3 / 9
ಟಿಮ್ ಡೇವಿಡ್: ಆಸ್ಟ್ರೇಲಿಯಾದ ಸ್ಪೋಟಕ ದಾಂಡಿಗ ಟಿಮ್ ಡೇವಿಡ್ ಈ ಬಾರಿ ಆರ್​ಸಿಬಿ ಪರ 11 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಒಂದು ಅರ್ಧಶತಕದೊಂದಿಗೆ 186 ರನ್ ಕಲೆಹಾಕಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧ ಕೂಡ ಟಿಮ್ ಡೇವಿಡ್ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಿಮ್ ಡೇವಿಡ್: ಆಸ್ಟ್ರೇಲಿಯಾದ ಸ್ಪೋಟಕ ದಾಂಡಿಗ ಟಿಮ್ ಡೇವಿಡ್ ಈ ಬಾರಿ ಆರ್​ಸಿಬಿ ಪರ 11 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಒಂದು ಅರ್ಧಶತಕದೊಂದಿಗೆ 186 ರನ್ ಕಲೆಹಾಕಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧ ಕೂಡ ಟಿಮ್ ಡೇವಿಡ್ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

4 / 9
ಲಿಯಾಮ್ ಲಿವಿಂಗ್​ಸ್ಟೋನ್: ಇಂಗ್ಲೆಂಡ್​ನ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಆರ್​​ಸಿಬಿ ಪರ 7 ಪಂದ್ಯಗಳನ್ನಾಡಿದ್ದು, ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 87 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು 2 ವಿಕೆಟ್ ಮಾತ್ರ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಿವಿಂಗ್​ಸ್ಟೋನ್​ಗೂ ಚಾನ್ಸ್ ಸಿಗುವುದಿಲ್ಲ.

ಲಿಯಾಮ್ ಲಿವಿಂಗ್​ಸ್ಟೋನ್: ಇಂಗ್ಲೆಂಡ್​ನ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಆರ್​​ಸಿಬಿ ಪರ 7 ಪಂದ್ಯಗಳನ್ನಾಡಿದ್ದು, ಈ ವೇಳೆ 1 ಅರ್ಧಶತಕದೊಂದಿಗೆ ಒಟ್ಟು 87 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು 2 ವಿಕೆಟ್ ಮಾತ್ರ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಲಿವಿಂಗ್​ಸ್ಟೋನ್​ಗೂ ಚಾನ್ಸ್ ಸಿಗುವುದಿಲ್ಲ.

5 / 9
ರೊಮಾರಿಯೊ ಶೆಫರ್ಡ್​: ಲಿಯಾಮ್ ಲಿವಿಂಗ್​ಸ್ಟೋನ್ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬಿದ್ದ ಬಳಿಕ ಅವರ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಕಾಣಿಸಿಕೊಂಡಿದ್ದರು. ಅಲ್ಲದೆ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶೆಪರ್ಡ್ ಒಂದು ಸ್ಪೋಟಕ ಅರ್ಧಶತಕ ಬಾರಿಸಿದ್ದಲ್ಲದೆ, ಒಂದು ವಿಕೆಟ್​ ಅನ್ನು ಸಹ ಕಬಳಿಸಿದ್ದಾರೆ. ಹಾಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಖಚಿತ.

ರೊಮಾರಿಯೊ ಶೆಫರ್ಡ್​: ಲಿಯಾಮ್ ಲಿವಿಂಗ್​ಸ್ಟೋನ್ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬಿದ್ದ ಬಳಿಕ ಅವರ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಕಾಣಿಸಿಕೊಂಡಿದ್ದರು. ಅಲ್ಲದೆ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶೆಪರ್ಡ್ ಒಂದು ಸ್ಪೋಟಕ ಅರ್ಧಶತಕ ಬಾರಿಸಿದ್ದಲ್ಲದೆ, ಒಂದು ವಿಕೆಟ್​ ಅನ್ನು ಸಹ ಕಬಳಿಸಿದ್ದಾರೆ. ಹಾಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಖಚಿತ.

6 / 9
ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಈ ಬಾರಿಯ ಐಪಿಎಲ್​ನಲ್ಲಿ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಆರ್​ಸಿಬಿ ಪರ ಈವರೆಗೆ ಪಾದಾರ್ಪಣೆ ಮಾಡುವ ಅವಕಾಶ ದೊರೆತಿಲ್ಲ. ಇದೀಗ ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಗಾಗಿ ಆಗಮಿಸಿರುವ ತುಷಾರ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಈ ಬಾರಿಯ ಐಪಿಎಲ್​ನಲ್ಲಿ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಆರ್​ಸಿಬಿ ಪರ ಈವರೆಗೆ ಪಾದಾರ್ಪಣೆ ಮಾಡುವ ಅವಕಾಶ ದೊರೆತಿಲ್ಲ. ಇದೀಗ ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಗಾಗಿ ಆಗಮಿಸಿರುವ ತುಷಾರ ಮುಂದಿನ ಮೂರು ಮ್ಯಾಚ್​ಗಳಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

7 / 9
ಲುಂಗಿ ಎನ್​ಗಿಡಿ: ಸೌತ್ ಆಫ್ರಿಕಾದ ಅನುಭವಿ ವೇಗಿ ಲುಂಗಿ ಎನ್​ಗಿಡಿ ಆರ್​ಸಿಬಿ ಪರ ಒಂದು ಪಂದ್ಯವಾಡಿದ್ದಾರೆ. ಜೋಶ್ ಹೇಝಲ್​ವುಡ್ ಅನುಪಸ್ಥಿತಿಯಲ್ಲಿ ಸಿಎಸ್​ಕೆ ವಿರುದ್ಧ ಕಣಕ್ಕಿಳಿದ ಲುಂಗಿ 4 ಓವರ್​ಗಳಲ್ಲಿ 30 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಕೆಕೆಆರ್ ವಿರುದ್ಧ ಕೂಡ ಎನ್​ಗಿಡಿ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

ಲುಂಗಿ ಎನ್​ಗಿಡಿ: ಸೌತ್ ಆಫ್ರಿಕಾದ ಅನುಭವಿ ವೇಗಿ ಲುಂಗಿ ಎನ್​ಗಿಡಿ ಆರ್​ಸಿಬಿ ಪರ ಒಂದು ಪಂದ್ಯವಾಡಿದ್ದಾರೆ. ಜೋಶ್ ಹೇಝಲ್​ವುಡ್ ಅನುಪಸ್ಥಿತಿಯಲ್ಲಿ ಸಿಎಸ್​ಕೆ ವಿರುದ್ಧ ಕಣಕ್ಕಿಳಿದ ಲುಂಗಿ 4 ಓವರ್​ಗಳಲ್ಲಿ 30 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಕೆಕೆಆರ್ ವಿರುದ್ಧ ಕೂಡ ಎನ್​ಗಿಡಿ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

8 / 9
ಜೋಶ್ ಹೇಝಲ್​ವುಡ್: ಆಸ್ಟ್ರೇಲಿಯಾ ವೇಗಿ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಇನ್ನೂ ಸಹ ಕೂಡಿಕೊಂಡಿಲ್ಲ. ಭುಜದ ನೋವಿನಿಂದ ಬಳಲುತ್ತಿರುವ ಅವರು ಭಾರತಕ್ಕೆ ಹಿಂತಿರುಗುವುದು ಬಹುತೇಕ ಖಚಿತವಾಗಿದೆ. ಇದಾಗ್ಯೂ ಅವರು ಲೀಗ್ ಹಂತದ ಪಂದ್ಯಗಳಿಗೆ ಲಭ್ಯರಿರುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಹೇಝಲ್​ವುಡ್ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

ಜೋಶ್ ಹೇಝಲ್​ವುಡ್: ಆಸ್ಟ್ರೇಲಿಯಾ ವೇಗಿ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಇನ್ನೂ ಸಹ ಕೂಡಿಕೊಂಡಿಲ್ಲ. ಭುಜದ ನೋವಿನಿಂದ ಬಳಲುತ್ತಿರುವ ಅವರು ಭಾರತಕ್ಕೆ ಹಿಂತಿರುಗುವುದು ಬಹುತೇಕ ಖಚಿತವಾಗಿದೆ. ಇದಾಗ್ಯೂ ಅವರು ಲೀಗ್ ಹಂತದ ಪಂದ್ಯಗಳಿಗೆ ಲಭ್ಯರಿರುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಹೇಝಲ್​ವುಡ್ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

9 / 9
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ