AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು

Kolkata Knight Riders vs Royal Challengers Bengaluru: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟರ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 174 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಫಿಲ್ ಸಾಲ್ಟ್ (56) ಹಾಗೂ ವಿರಾಟ್ ಕೊಹ್ಲಿ (59) ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಆರ್​ಸಿಬಿ 16.2 ಓವರ್​ಗಳಲ್ಲಿ 177 ರನ್ ಬಾರಿಸಿ 7 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:Mar 23, 2025 | 7:05 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿತು.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಆದರೆ ಬೌಲಿಂಗ್​ಗಾಗಿ ಕಣಕ್ಕಿಳಿದ ಆರ್​ಸಿಬಿ ಬಳಗದಲ್ಲಿ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಇಂಪ್ಯಾಕ್ಟ್ ಸಬ್ ಆಗಿಯೂ ಕೂಡ ಅವರನ್ನು ಬಳಸಿಕೊಳ್ಳಲಾಗಲಿಲ್ಲ. ಇದರ ಬೆನ್ನಲ್ಲೇ ಭುವಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ಆದರೆ ಬೌಲಿಂಗ್​ಗಾಗಿ ಕಣಕ್ಕಿಳಿದ ಆರ್​ಸಿಬಿ ಬಳಗದಲ್ಲಿ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಇಂಪ್ಯಾಕ್ಟ್ ಸಬ್ ಆಗಿಯೂ ಕೂಡ ಅವರನ್ನು ಬಳಸಿಕೊಳ್ಳಲಾಗಲಿಲ್ಲ. ಇದರ ಬೆನ್ನಲ್ಲೇ ಭುವಿ ಕಣಕ್ಕಿಳಿಯದಿರಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

2 / 5
ಕೊಲ್ಕತ್ತಾದಲ್ಲಿ ನಡೆದ ಅಭ್ಯಾಸದ ವೇಳೆ ಭುವನೇಶ್ವರ್ ಕುಮಾರ್ ಅವರ ಕೈಗೆ ಸಣ್ಣ ಗಾಯವಾಗಿದ್ದು, ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಗಾಯವು ಗಂಭೀರವಲ್ಲದಿದ್ದರೂ, ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.

ಕೊಲ್ಕತ್ತಾದಲ್ಲಿ ನಡೆದ ಅಭ್ಯಾಸದ ವೇಳೆ ಭುವನೇಶ್ವರ್ ಕುಮಾರ್ ಅವರ ಕೈಗೆ ಸಣ್ಣ ಗಾಯವಾಗಿದ್ದು, ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಗಾಯವು ಗಂಭೀರವಲ್ಲದಿದ್ದರೂ, ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.

3 / 5
ಏಕೆಂದರೆ ಭುವಿ ಆರ್​ಸಿಬಿ ತಂಡದ ಪ್ರಮುಖ ವೇಗಿ. ಇನ್ನುಳಿದ 13 ಲೀಗ್​ ಪಂದ್ಯಗಳು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಖ್ಯ. ಹೀಗಾಗಿ ಅವರ ಗಾಯವು ಸಂಪೂರ್ಣವಾಗಿ ಗುಣವಾದರೆ ಮಾತ್ರ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

ಏಕೆಂದರೆ ಭುವಿ ಆರ್​ಸಿಬಿ ತಂಡದ ಪ್ರಮುಖ ವೇಗಿ. ಇನ್ನುಳಿದ 13 ಲೀಗ್​ ಪಂದ್ಯಗಳು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಖ್ಯ. ಹೀಗಾಗಿ ಅವರ ಗಾಯವು ಸಂಪೂರ್ಣವಾಗಿ ಗುಣವಾದರೆ ಮಾತ್ರ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

4 / 5
ಆರ್​ಸಿಬಿ ತಂಡದ ಮುಂದಿನ ಪಂದ್ಯವು ಮಾರ್ಚ್ 28 ರಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಇನ್ನೂ ಐದು ದಿನಗಳ ಕಾಲಾವಕಾಶವಿದೆ. ಇದರೊಳಗೆ ಭುವನೇಶ್ವರ್ ಕುಮಾರ್ ಅವರ ಗಾಯವು ಸಂಪೂರ್ಣ ವಾಸಿಯಾದರೆ, ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಆರ್​ಸಿಬಿ ತಂಡದ ಮುಂದಿನ ಪಂದ್ಯವು ಮಾರ್ಚ್ 28 ರಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಇನ್ನೂ ಐದು ದಿನಗಳ ಕಾಲಾವಕಾಶವಿದೆ. ಇದರೊಳಗೆ ಭುವನೇಶ್ವರ್ ಕುಮಾರ್ ಅವರ ಗಾಯವು ಸಂಪೂರ್ಣ ವಾಸಿಯಾದರೆ, ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.

5 / 5

Published On - 7:04 am, Sun, 23 March 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ