AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ

IPL 2025 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್​​ನ ಮೊದಲ ಸುತ್ತಿನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ನಾಲ್ಕು ಪಂದ್ಯಗಳಲ್ಲಿ ಬಲಿಷ್ಠ ಟೀಮ್​​ಗಳನ್ನು ಎದುರಿಸಲಿದೆ. ಅಲ್ಲದೆ ಮೊದಲ ಸುತ್ತಿನಲ್ಲಿ ಆರ್​ಸಿಬಿ ತವರಿನಲ್ಲಿ ಕೇವಲ ಮೂರು ಪಂದ್ಯಗಳನ್ನು ಮಾತ್ರ ಆಡಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಆರಂಭಿಕ ಪಂದ್ಯಗಳು ಅಗ್ನಿಪರೀಕ್ಷೆ ಎನ್ನಬಹುದು.

ಝಾಹಿರ್ ಯೂಸುಫ್
| Edited By: ವಿವೇಕ ಬಿರಾದಾರ|

Updated on: Feb 17, 2025 | 2:04 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಡೇಟ್ ಫಿಕ್ಸ್​ ಆಗಿದೆ. ಈ ಬಾರಿಯ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಡೇಟ್ ಫಿಕ್ಸ್​ ಆಗಿದೆ. ಈ ಬಾರಿಯ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

1 / 7
ಇದಾದ ಬಳಿಕ ಕೂಡ ಆರ್​ಸಿಬಿ ಚಾಂಪಿಯನ್ ತಂಡಗಳನ್ನೇ ಎದುರಿಸಲಿದೆ. ಅಂದರೆ ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಾಲ್ಕು ತಂಡಗಳ ವಿರುದ್ಧ ಆರ್​ಸಿಬಿ ಮೊದಲ 4 ಪಂದ್ಯಗಳನ್ನಾಡಲಿದೆ. ಈ ನಾಲ್ಕು ಟೀಮ್​ಗಳು ಕೂಡ ಬಲಿಷ್ಠ ಪಡೆ ಎಂಬುದು ವಿಶೇಷ.

ಇದಾದ ಬಳಿಕ ಕೂಡ ಆರ್​ಸಿಬಿ ಚಾಂಪಿಯನ್ ತಂಡಗಳನ್ನೇ ಎದುರಿಸಲಿದೆ. ಅಂದರೆ ಐಪಿಎಲ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಾಲ್ಕು ತಂಡಗಳ ವಿರುದ್ಧ ಆರ್​ಸಿಬಿ ಮೊದಲ 4 ಪಂದ್ಯಗಳನ್ನಾಡಲಿದೆ. ಈ ನಾಲ್ಕು ಟೀಮ್​ಗಳು ಕೂಡ ಬಲಿಷ್ಠ ಪಡೆ ಎಂಬುದು ವಿಶೇಷ.

2 / 7
ಮಾರ್ಚ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡವು 2024ರ ಚಾಂಪಿಯನ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವಹಿಸಲಿದೆ.

ಮಾರ್ಚ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡವು 2024ರ ಚಾಂಪಿಯನ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವಹಿಸಲಿದೆ.

3 / 7
ಮಾರ್ಚ್ 28 ರಂದು ಜರುಗಲಿರುವ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಮಾರ್ಚ್ 28 ರಂದು ಜರುಗಲಿರುವ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 7
ಏಪ್ರಿಲ್ 2 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಆರ್​ಸಿಬಿ ತಂಡದ ಎದುರಾಳಿ 2022ರ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

ಏಪ್ರಿಲ್ 2 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಆರ್​ಸಿಬಿ ತಂಡದ ಎದುರಾಳಿ 2022ರ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

5 / 7
ಏಪ್ರಿಲ್ 7 ರಂದು ನಡೆಯಲಿರುವ ತನ್ನ ನಾಲ್ಕನೇ ಮ್ಯಾಚ್​ನಲ್ಲಿ ಆರ್​ಸಿಬಿ ತಂಡ ಚಾಂಪಿಯನ್ಸ್ ಖ್ಯಾತಿಯ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಏಪ್ರಿಲ್ 7 ರಂದು ನಡೆಯಲಿರುವ ತನ್ನ ನಾಲ್ಕನೇ ಮ್ಯಾಚ್​ನಲ್ಲಿ ಆರ್​ಸಿಬಿ ತಂಡ ಚಾಂಪಿಯನ್ಸ್ ಖ್ಯಾತಿಯ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

6 / 7
ಇನ್ನು ಆರ್​ಸಿಬಿ ತಂಡವು ಏಪ್ರಿಲ್ 10 ರಂದು ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 13 ರಂದು ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 18 ರಂದು ಪಂಜಾಬ್ ಕಿಂಗ್ಸ್ ತಂಡಗಳನ್ನು ಎದುರಿಸಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕೇವಲ 3 ಪಂದ್ಯಗಳನ್ನು ಮಾತ್ರ ಆಡಲಿದೆ. ಹೀಗಾಗಿಯೇ ಆರ್​ಸಿಬಿ ತಂಡದ ಪಾಲಿಗೆ ಮೊದಲ ಸುತ್ತು ಕಬ್ಬಿಣದ ಕಡಲೆ ಎಂದರೆ ತಪ್ಪಾಗಲಾರದು.

ಇನ್ನು ಆರ್​ಸಿಬಿ ತಂಡವು ಏಪ್ರಿಲ್ 10 ರಂದು ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 13 ರಂದು ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 18 ರಂದು ಪಂಜಾಬ್ ಕಿಂಗ್ಸ್ ತಂಡಗಳನ್ನು ಎದುರಿಸಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕೇವಲ 3 ಪಂದ್ಯಗಳನ್ನು ಮಾತ್ರ ಆಡಲಿದೆ. ಹೀಗಾಗಿಯೇ ಆರ್​ಸಿಬಿ ತಂಡದ ಪಾಲಿಗೆ ಮೊದಲ ಸುತ್ತು ಕಬ್ಬಿಣದ ಕಡಲೆ ಎಂದರೆ ತಪ್ಪಾಗಲಾರದು.

7 / 7
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ