AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡವನ್ನು ತೊರೆದ ಪ್ರಮುಖ ಆಟಗಾರ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 13 ಪಂದ್ಯಗಳಲ್ಲಿ 8 ಜಯಗಳಿಸಿರುವ ಆರ್​ಸಿಬಿ ಪಡೆ ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಇನ್ನು ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಪಂದ್ಯವಾಡಬೇಕಿದ್ದು, ಇದಾದ ಬಳಿಕ ಪ್ಲೇಆಫ್ ಮ್ಯಾಚ್​ಗಳು ಶುರುವಾಗಲಿದೆ. ಅದಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಪ್ರಮುಖ ವೇಗಿ ಹೊರ ನಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on: May 25, 2025 | 9:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್​ ಹಂತದಲ್ಲಿ ಇನ್ನು ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳು ಶುರುವಾಗಲಿದೆ. ಅಂದರೆ ಇನ್ನು ಕೇವಲ 8 ಪಂದ್ಯಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರ ಐಪಿಎಲ್​ ತೊರೆದಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್​ ಹಂತದಲ್ಲಿ ಇನ್ನು ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳು ಶುರುವಾಗಲಿದೆ. ಅಂದರೆ ಇನ್ನು ಕೇವಲ 8 ಪಂದ್ಯಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರ ಐಪಿಎಲ್​ ತೊರೆದಿದ್ದಾರೆ.

1 / 5
ಹೌದು, ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

ಹೌದು, ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

2 / 5
ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

3 / 5
ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

4 / 5
ಮತ್ತೊಂದೆಡೆ ಕಳೆದ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದ ಜೋಶ್ ಹೇಝಲ್​ವುಡ್ ತಂಡಕ್ಕೆ ಹಿಂತಿರುಗಿದ್ದಾರೆ. ಭುಜದ ನೋವಿನ ಕಾರಣ ಬ್ರಿಸ್ಬೇನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಎನ್​ಗಿಡಿ ಬದಲಿಗೆ ಹೇಝಲ್​ವುಡ್ ಕಣಕ್ಕಿಳಿಯಲಿದ್ದಾರೆ.

ಮತ್ತೊಂದೆಡೆ ಕಳೆದ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದ ಜೋಶ್ ಹೇಝಲ್​ವುಡ್ ತಂಡಕ್ಕೆ ಹಿಂತಿರುಗಿದ್ದಾರೆ. ಭುಜದ ನೋವಿನ ಕಾರಣ ಬ್ರಿಸ್ಬೇನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಎನ್​ಗಿಡಿ ಬದಲಿಗೆ ಹೇಝಲ್​ವುಡ್ ಕಣಕ್ಕಿಳಿಯಲಿದ್ದಾರೆ.

5 / 5
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು