AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡವನ್ನು ತೊರೆದ ಪ್ರಮುಖ ಆಟಗಾರ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 13 ಪಂದ್ಯಗಳಲ್ಲಿ 8 ಜಯಗಳಿಸಿರುವ ಆರ್​ಸಿಬಿ ಪಡೆ ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಇನ್ನು ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಪಂದ್ಯವಾಡಬೇಕಿದ್ದು, ಇದಾದ ಬಳಿಕ ಪ್ಲೇಆಫ್ ಮ್ಯಾಚ್​ಗಳು ಶುರುವಾಗಲಿದೆ. ಅದಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಪ್ರಮುಖ ವೇಗಿ ಹೊರ ನಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on: May 25, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್​ ಹಂತದಲ್ಲಿ ಇನ್ನು ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳು ಶುರುವಾಗಲಿದೆ. ಅಂದರೆ ಇನ್ನು ಕೇವಲ 8 ಪಂದ್ಯಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರ ಐಪಿಎಲ್​ ತೊರೆದಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್​ ಹಂತದಲ್ಲಿ ಇನ್ನು ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳು ಶುರುವಾಗಲಿದೆ. ಅಂದರೆ ಇನ್ನು ಕೇವಲ 8 ಪಂದ್ಯಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರ ಐಪಿಎಲ್​ ತೊರೆದಿದ್ದಾರೆ.

1 / 5
ಹೌದು, ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

ಹೌದು, ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

2 / 5
ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

3 / 5
ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

4 / 5
ಮತ್ತೊಂದೆಡೆ ಕಳೆದ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದ ಜೋಶ್ ಹೇಝಲ್​ವುಡ್ ತಂಡಕ್ಕೆ ಹಿಂತಿರುಗಿದ್ದಾರೆ. ಭುಜದ ನೋವಿನ ಕಾರಣ ಬ್ರಿಸ್ಬೇನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಎನ್​ಗಿಡಿ ಬದಲಿಗೆ ಹೇಝಲ್​ವುಡ್ ಕಣಕ್ಕಿಳಿಯಲಿದ್ದಾರೆ.

ಮತ್ತೊಂದೆಡೆ ಕಳೆದ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದ ಜೋಶ್ ಹೇಝಲ್​ವುಡ್ ತಂಡಕ್ಕೆ ಹಿಂತಿರುಗಿದ್ದಾರೆ. ಭುಜದ ನೋವಿನ ಕಾರಣ ಬ್ರಿಸ್ಬೇನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಎನ್​ಗಿಡಿ ಬದಲಿಗೆ ಹೇಝಲ್​ವುಡ್ ಕಣಕ್ಕಿಳಿಯಲಿದ್ದಾರೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ