AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡವನ್ನು ತೊರೆದ ಪ್ರಮುಖ ಆಟಗಾರ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 13 ಪಂದ್ಯಗಳಲ್ಲಿ 8 ಜಯಗಳಿಸಿರುವ ಆರ್​ಸಿಬಿ ಪಡೆ ಒಟ್ಟು 17 ಅಂಕಗಳನ್ನು ಕಲೆಹಾಕಿದೆ. ಇನ್ನು ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಒಂದು ಪಂದ್ಯವಾಡಬೇಕಿದ್ದು, ಇದಾದ ಬಳಿಕ ಪ್ಲೇಆಫ್ ಮ್ಯಾಚ್​ಗಳು ಶುರುವಾಗಲಿದೆ. ಅದಕ್ಕೂ ಮುನ್ನವೇ ಆರ್​ಸಿಬಿ ತಂಡದಿಂದ ಪ್ರಮುಖ ವೇಗಿ ಹೊರ ನಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on: May 25, 2025 | 9:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್​ ಹಂತದಲ್ಲಿ ಇನ್ನು ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳು ಶುರುವಾಗಲಿದೆ. ಅಂದರೆ ಇನ್ನು ಕೇವಲ 8 ಪಂದ್ಯಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರ ಐಪಿಎಲ್​ ತೊರೆದಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಲೀಗ್​ ಹಂತದಲ್ಲಿ ಇನ್ನು ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳು ಶುರುವಾಗಲಿದೆ. ಅಂದರೆ ಇನ್ನು ಕೇವಲ 8 ಪಂದ್ಯಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರ ಐಪಿಎಲ್​ ತೊರೆದಿದ್ದಾರೆ.

1 / 5
ಹೌದು, ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

ಹೌದು, ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

2 / 5
ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

3 / 5
ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

4 / 5
ಮತ್ತೊಂದೆಡೆ ಕಳೆದ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದ ಜೋಶ್ ಹೇಝಲ್​ವುಡ್ ತಂಡಕ್ಕೆ ಹಿಂತಿರುಗಿದ್ದಾರೆ. ಭುಜದ ನೋವಿನ ಕಾರಣ ಬ್ರಿಸ್ಬೇನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಎನ್​ಗಿಡಿ ಬದಲಿಗೆ ಹೇಝಲ್​ವುಡ್ ಕಣಕ್ಕಿಳಿಯಲಿದ್ದಾರೆ.

ಮತ್ತೊಂದೆಡೆ ಕಳೆದ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದ ಜೋಶ್ ಹೇಝಲ್​ವುಡ್ ತಂಡಕ್ಕೆ ಹಿಂತಿರುಗಿದ್ದಾರೆ. ಭುಜದ ನೋವಿನ ಕಾರಣ ಬ್ರಿಸ್ಬೇನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಝಲ್​ವುಡ್, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಎನ್​ಗಿಡಿ ಬದಲಿಗೆ ಹೇಝಲ್​ವುಡ್ ಕಣಕ್ಕಿಳಿಯಲಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!