AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCBಗೆ ಆಘಾತದ ಮೇಲೆ ಆಘಾತ: ಪ್ಲೇಆಫ್​ ಪಂದ್ಯಗಳಿಗೆ ಐವರು ಅಲಭ್ಯ?

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಆಡಿರುವ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ 16 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಜಯ ಸಾಧಿಸಿ ಪ್ಲೇಆಫ್ ಆಡುವುದು ಖಚಿತವಾಗಲಿದೆ.

ಝಾಹಿರ್ ಯೂಸುಫ್
|

Updated on:May 15, 2025 | 11:54 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅದರಂತೆ ಮೇ 17 ರಿಂದ ಐಪಿಎಲ್​ ಮತ್ತೆ ಶುರುವಾಗಲಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಇಬ್ಬರು ಅಲಭ್ಯರಾಗಿರುವುದು ಖಚಿತವಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅದರಂತೆ ಮೇ 17 ರಿಂದ ಐಪಿಎಲ್​ ಮತ್ತೆ ಶುರುವಾಗಲಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಇಬ್ಬರು ಅಲಭ್ಯರಾಗಿರುವುದು ಖಚಿತವಾಗಿದೆ.

1 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಗಾಯಗೊಂಡಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ತಂಡಕ್ಕೆ ಕರ್ನಾಟಕದ ಬಲಗೈ ಬ್ಯಾಟರ್ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಗಾಯಗೊಂಡಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ತಂಡಕ್ಕೆ ಕರ್ನಾಟಕದ ಬಲಗೈ ಬ್ಯಾಟರ್ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ.

2 / 7
ಇನ್ನು ಭುಜದ ನೋವಿನಿಂದ ಬಳಲುತ್ತಿರುವ ಜೋಶ್ ಹೇಝಲ್​ವುಡ್ ಕೂಡ ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವೇಗಿ ಕೂಡ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗುತ್ತಿದೆ.

ಇನ್ನು ಭುಜದ ನೋವಿನಿಂದ ಬಳಲುತ್ತಿರುವ ಜೋಶ್ ಹೇಝಲ್​ವುಡ್ ಕೂಡ ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವೇಗಿ ಕೂಡ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗುತ್ತಿದೆ.

3 / 7
ಹಾಗೆಯೇ ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಜೇಕಬ್ ಬೆಥೆಲ್ ಕೂಡ ಪ್ಲೇಆಫ್ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಬೆಥೆಲ್ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರು ಕೂಡ ಕೆಕೆಆರ್ ಹಾಗೂ ಎಸ್​ಆರ್​ಹೆಚ್ ವಿರುದ್ಧದ ಪಂದ್ಯಗಳ ಬಳಿಕ ತವರಿಗೆ ಹಿಂತಿರುಗಲಿದ್ದಾರೆ.

ಹಾಗೆಯೇ ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಜೇಕಬ್ ಬೆಥೆಲ್ ಕೂಡ ಪ್ಲೇಆಫ್ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಬೆಥೆಲ್ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರು ಕೂಡ ಕೆಕೆಆರ್ ಹಾಗೂ ಎಸ್​ಆರ್​ಹೆಚ್ ವಿರುದ್ಧದ ಪಂದ್ಯಗಳ ಬಳಿಕ ತವರಿಗೆ ಹಿಂತಿರುಗಲಿದ್ದಾರೆ.

4 / 7
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ತಂಡದ ಭಾಗವಾಗಿರುವ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಕೂಡ ಮೇ 25 ರಂದು ತವರಿಗೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿದರೆ ಲುಂಗಿ ಎನ್​ಗಿಡಿ ಕೂಡ ಕಾಣಿಸಿಕೊಳ್ಳುವುದಿಲ್ಲ. 

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ತಂಡದ ಭಾಗವಾಗಿರುವ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಕೂಡ ಮೇ 25 ರಂದು ತವರಿಗೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿದರೆ ಲುಂಗಿ ಎನ್​ಗಿಡಿ ಕೂಡ ಕಾಣಿಸಿಕೊಳ್ಳುವುದಿಲ್ಲ. 

5 / 7
ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ ವೆಸ್ಟ್ ಇಂಡೀಸ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಹೀಗಾಗಿ ರೊಮಾರಿಯೊ ಶೆಫರ್ಡ್ ಕೂಡ ಪ್ಲೇಅಫ್ ಪಂದ್ಯಕ್ಕೂ ಮುನ್ನವೇ ಆರ್​ಸಿಬಿ ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ ವೆಸ್ಟ್ ಇಂಡೀಸ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಹೀಗಾಗಿ ರೊಮಾರಿಯೊ ಶೆಫರ್ಡ್ ಕೂಡ ಪ್ಲೇಅಫ್ ಪಂದ್ಯಕ್ಕೂ ಮುನ್ನವೇ ಆರ್​ಸಿಬಿ ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.

6 / 7
ಒಟ್ಟಿನಲ್ಲಿ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವ ಹಂತದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ಪ್ರಮುಖ ಆಟಗಾರರ ಅಲಭ್ಯತೆಯೇ ದೊಡ್ಡ ಚಿಂತೆ. ಏಕೆಂದರೆ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದ್ದು, ಈ ಪಂದ್ಯಗಳಿಗೆ ಆರ್​ಸಿಬಿ ತಂಡದ ಐವರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಈ ಐವರ ಅನುಪಸ್ಥಿತಿ ನಡುವೆಯೂ ಭರ್ಜರಿ ಪ್ರದರ್ಶನ ನೀಡಿ ಈ ಬಾರಿ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವ ಹಂತದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ಪ್ರಮುಖ ಆಟಗಾರರ ಅಲಭ್ಯತೆಯೇ ದೊಡ್ಡ ಚಿಂತೆ. ಏಕೆಂದರೆ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದ್ದು, ಈ ಪಂದ್ಯಗಳಿಗೆ ಆರ್​ಸಿಬಿ ತಂಡದ ಐವರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಈ ಐವರ ಅನುಪಸ್ಥಿತಿ ನಡುವೆಯೂ ಭರ್ಜರಿ ಪ್ರದರ್ಶನ ನೀಡಿ ಈ ಬಾರಿ ಆರ್​ಸಿಬಿ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 7

Published On - 12:54 pm, Wed, 14 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ