Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2025 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ ಪಡೆಯನ್ನು 50 ರನ್​ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಶಿಖರ್ ಧವನ್ ಅವರ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Mar 29, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ನಿಧಾನಗತಿಯ ಬ್ಯಾಟಿಂಗ್​​ನೊಂದಿಗೆ 31 ರನ್​ ಕಲೆಹಾಕಿರುವ ಕೊಹ್ಲಿ ಹೆಸರಿಗೆ ಹೊಸ ದಾಖಲೆಯೊಂದು ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ನಿಧಾನಗತಿಯ ಬ್ಯಾಟಿಂಗ್​​ನೊಂದಿಗೆ 31 ರನ್​ ಕಲೆಹಾಕಿರುವ ಕೊಹ್ಲಿ ಹೆಸರಿಗೆ ಹೊಸ ದಾಖಲೆಯೊಂದು ಸೇರ್ಪಡೆಯಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಸಾಲ್ಟ್ 16 ಎಸೆತಗಳಲ್ಲಿ 32 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 31 ರನ್​ ಕಲೆಹಾಕಲು ಬರೋಬ್ಬರಿ 30 ಎಸೆತಗಳನ್ನು ತೆಗೆದುಕೊಂಡರು. ಈ ಮೂವತ್ತು ರನ್​ಗಳೊಂದಿಗೆ ಕೊಹ್ಲಿ ಸಿಎಸ್​ಕೆ ವಿರುದ್ಧ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಸಾಲ್ಟ್ 16 ಎಸೆತಗಳಲ್ಲಿ 32 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 31 ರನ್​ ಕಲೆಹಾಕಲು ಬರೋಬ್ಬರಿ 30 ಎಸೆತಗಳನ್ನು ತೆಗೆದುಕೊಂಡರು. ಈ ಮೂವತ್ತು ರನ್​ಗಳೊಂದಿಗೆ ಕೊಹ್ಲಿ ಸಿಎಸ್​ಕೆ ವಿರುದ್ಧ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

2 / 5
ಐಪಿಎಲ್​ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಧವನ್ ಸಿಎಸ್​ಕೆ ವಿರುದ್ಧ ಆಡಿದ 29 ಪಂದ್ಯಗಳಲ್ಲಿ ಒಟ್ಟು 1057 ರನ್ ಬಾರಿಸಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

ಐಪಿಎಲ್​ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಧವನ್ ಸಿಎಸ್​ಕೆ ವಿರುದ್ಧ ಆಡಿದ 29 ಪಂದ್ಯಗಳಲ್ಲಿ ಒಟ್ಟು 1057 ರನ್ ಬಾರಿಸಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಕಿಂಗ್ ಕೊಹ್ಲಿ ಸಿಎಸ್​ಕೆ ವಿರುದ್ಧ ಈವರೆಗೆ 33 ಇನಿಂಗ್ಸ್ ಆಡಿದ್ದು, ಈ ವೇಳೆ 9 ಅರ್ಧಶತಕಗಳೊಂದಿಗೆ 1084 ರನ್ ಕಲೆಹಾಕಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಕಿಂಗ್ ಕೊಹ್ಲಿ ಸಿಎಸ್​ಕೆ ವಿರುದ್ಧ ಈವರೆಗೆ 33 ಇನಿಂಗ್ಸ್ ಆಡಿದ್ದು, ಈ ವೇಳೆ 9 ಅರ್ಧಶತಕಗಳೊಂದಿಗೆ 1084 ರನ್ ಕಲೆಹಾಕಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ವಿರಾಟ್ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಇನ್ನು ವಿರಾಟ್ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

5 / 5

Published On - 9:04 am, Sat, 29 March 25

Follow us
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ