AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿಗೆ ಬಂತು ಆನೆ ಬಲ; ತಂಡ ಸೇರಿಕೊಳ್ಳಲಿದ್ದಾರಂತೆ ರಿಷಬ್ ಪಂತ್..!

RCB: ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆಡುತ್ತಿರುವ ರಿಷಬ್ ಪಂತ್​ರನ್ನು ಡೆಲ್ಲಿ ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ತಂಡದಿಂದ ಕೈಬಿಡಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇತ್ತ ಮೆಗಾ ಹರಾಜಿನಲ್ಲಿ ಪಂತ್​ರನ್ನು ಖರೀದಿಸಲು ಆರ್​ಸಿಬಿ ಉತ್ಸುಕವಾಗಿದ್ದು, ಸಾಕಷ್ಟು ಹಣ ಖರ್ಚು ಮಾಡಿ ಪಂತ್​ರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Oct 23, 2024 | 5:20 PM

Share
2025 ರ ಐಪಿಎಲ್ ಮೆಗಾ ಹರಾಜಿಗೆ ಈಗಾಗಲೇ ಸಿದ್ಧತೆಗಳು ಬರದಿಂದ ಸಾಗುತ್ತಿವೆ. ಈ ಮಿಲಿಯನ್ ಡಾಲರ್ ಟೂರ್ನಿಯ ಹರಾಜನ್ನು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಅದಕ್ಕೂ ಮುನ್ನ ರಿಷಬ್ ಪಂತ್ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಟೈಮ್ಸ್ ಆಫ್ ಇಂಡಿಯಾ ಪ್ರಕಾರ, ರಿಷಬ್ ಪಂತ್, ಮುಂದಿನ ಆವೃತ್ತಿಯಿಂದ ಆರ್​ಸಿಬಿ ಪರ ಕಣಕ್ಕಿಳಿಯುವುದು ಎಂದು ವರದಿ ಮಾಡಿದೆ.

2025 ರ ಐಪಿಎಲ್ ಮೆಗಾ ಹರಾಜಿಗೆ ಈಗಾಗಲೇ ಸಿದ್ಧತೆಗಳು ಬರದಿಂದ ಸಾಗುತ್ತಿವೆ. ಈ ಮಿಲಿಯನ್ ಡಾಲರ್ ಟೂರ್ನಿಯ ಹರಾಜನ್ನು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಅದಕ್ಕೂ ಮುನ್ನ ರಿಷಬ್ ಪಂತ್ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಟೈಮ್ಸ್ ಆಫ್ ಇಂಡಿಯಾ ಪ್ರಕಾರ, ರಿಷಬ್ ಪಂತ್, ಮುಂದಿನ ಆವೃತ್ತಿಯಿಂದ ಆರ್​ಸಿಬಿ ಪರ ಕಣಕ್ಕಿಳಿಯುವುದು ಎಂದು ವರದಿ ಮಾಡಿದೆ.

1 / 6
ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆಡುತ್ತಿರುವ ರಿಷಬ್ ಪಂತ್​ರನ್ನು ಡೆಲ್ಲಿ ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ತಂಡದಿಂದ ಕೈಬಿಡಬಹುದು ಎಂದು ವರದಿಯಾಗಿದೆ. ಇತ್ತ ಮೆಗಾ ಹರಾಜಿನಲ್ಲಿ ಪಂತ್​ರನ್ನು ಖರೀದಿಸಲು ಆರ್​ಸಿಬಿ ಉತ್ಸುಕವಾಗಿದ್ದು, ಸಾಕಷ್ಟು ಹಣ ಖರ್ಚು ಮಾಡಿ ಪಂತ್​ರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂದು ವರದಿ ಮಾಡಿದೆ.

ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆಡುತ್ತಿರುವ ರಿಷಬ್ ಪಂತ್​ರನ್ನು ಡೆಲ್ಲಿ ಫ್ರಾಂಚೈಸಿ ಮೆಗಾ ಹರಾಜಿಗೂ ಮುನ್ನ ತಂಡದಿಂದ ಕೈಬಿಡಬಹುದು ಎಂದು ವರದಿಯಾಗಿದೆ. ಇತ್ತ ಮೆಗಾ ಹರಾಜಿನಲ್ಲಿ ಪಂತ್​ರನ್ನು ಖರೀದಿಸಲು ಆರ್​ಸಿಬಿ ಉತ್ಸುಕವಾಗಿದ್ದು, ಸಾಕಷ್ಟು ಹಣ ಖರ್ಚು ಮಾಡಿ ಪಂತ್​ರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂದು ವರದಿ ಮಾಡಿದೆ.

2 / 6
ಇದಕ್ಕೆ ಪೂರಕ ಕಾರಣವೂ ಇದ್ದು ಆರ್​ಸಿಬಿ, ಭವಿಷ್ಯದ ನಾಯಕನನ್ನು ಹುಡುಕುತ್ತಿದೆ. ತಂಡವನ್ನು ಮುನ್ನಡೆಸುತ್ತಿರುವ ಹಾಲಿ ನಾಯಕ ಫಾಫ್ ಡುಪ್ಲೆಸಿಸ್​ಗೆ ವಯಸ್ಸಾಗುತ್ತಿದೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟು ಅವರ ಸ್ಥಾನಕ್ಕೆ ಭಾರತದ ಆಟಗಾರನನ್ನು ತಂದು ಕೂರಿಸಿಲು ಆರ್​ಸಿಬಿ ಫ್ರಾಂಚೈಸಿ ಯೋಚಿಸಿದೆ. ಒಂದು ವೇಳೆ ಪಂತ್ ಆರ್​ಸಿಬಿ ತಂಡವನ್ನು ಸೇರಿಕೊಂಡರೆ, ತಂಡಕ್ಕೆ ಪ್ರಮುಖವಾಗಿ ಎರಡು ಲಾಭಗಳಾಗಲಿವೆ.

ಇದಕ್ಕೆ ಪೂರಕ ಕಾರಣವೂ ಇದ್ದು ಆರ್​ಸಿಬಿ, ಭವಿಷ್ಯದ ನಾಯಕನನ್ನು ಹುಡುಕುತ್ತಿದೆ. ತಂಡವನ್ನು ಮುನ್ನಡೆಸುತ್ತಿರುವ ಹಾಲಿ ನಾಯಕ ಫಾಫ್ ಡುಪ್ಲೆಸಿಸ್​ಗೆ ವಯಸ್ಸಾಗುತ್ತಿದೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಟ್ಟು ಅವರ ಸ್ಥಾನಕ್ಕೆ ಭಾರತದ ಆಟಗಾರನನ್ನು ತಂದು ಕೂರಿಸಿಲು ಆರ್​ಸಿಬಿ ಫ್ರಾಂಚೈಸಿ ಯೋಚಿಸಿದೆ. ಒಂದು ವೇಳೆ ಪಂತ್ ಆರ್​ಸಿಬಿ ತಂಡವನ್ನು ಸೇರಿಕೊಂಡರೆ, ತಂಡಕ್ಕೆ ಪ್ರಮುಖವಾಗಿ ಎರಡು ಲಾಭಗಳಾಗಲಿವೆ.

3 / 6
ಮೊದಲನೆಯದ್ದು, ತಂಡಕ್ಕೆ ಯುವ ನಾಯಕ ಸಿಕ್ಕಂತ್ತಾಗುತ್ತದೆ. ಪಂತ್​ಗೆ ಈಗಾಗಲೇ ನಾಯಕತ್ವ ನಿಭಾಯಿಸಿದ ಅನುಭವವಿದೆ. ಅಲ್ಲದೆ ವಯಸ್ಸಿನ ವಿಚಾರದಲ್ಲಿ ಪಂತ್​ ಇನ್ನು ಸಾಕಷ್ಟು ವರ್ಷ ಕ್ರಿಕೆಟ್ ಆಡುವುದು ಬಾಕಿ ಇದೆ. ಹೀಗಾಗಿ ಪಂತ್, ಆರ್​ಸಿಬಿ ತಂಡವನ್ನು ಸೇರಿಕೊಂಡರೆ, ಅವರು ದೀರ್ಘ ಕಾಲ ತಂಡದಲ್ಲಿ ಉಳಿಯಲಿದ್ದಾರೆ.

ಮೊದಲನೆಯದ್ದು, ತಂಡಕ್ಕೆ ಯುವ ನಾಯಕ ಸಿಕ್ಕಂತ್ತಾಗುತ್ತದೆ. ಪಂತ್​ಗೆ ಈಗಾಗಲೇ ನಾಯಕತ್ವ ನಿಭಾಯಿಸಿದ ಅನುಭವವಿದೆ. ಅಲ್ಲದೆ ವಯಸ್ಸಿನ ವಿಚಾರದಲ್ಲಿ ಪಂತ್​ ಇನ್ನು ಸಾಕಷ್ಟು ವರ್ಷ ಕ್ರಿಕೆಟ್ ಆಡುವುದು ಬಾಕಿ ಇದೆ. ಹೀಗಾಗಿ ಪಂತ್, ಆರ್​ಸಿಬಿ ತಂಡವನ್ನು ಸೇರಿಕೊಂಡರೆ, ಅವರು ದೀರ್ಘ ಕಾಲ ತಂಡದಲ್ಲಿ ಉಳಿಯಲಿದ್ದಾರೆ.

4 / 6
ಎರಡನೇಯದ್ದು, ಪಂತ್ ಸ್ಫೋಟಕ ಬ್ಯಾಟ್ಸ್‌ಮನ್ ಅಲ್ಲದೆ ಅದ್ಭುತ ವಿಕೆಟ್‌ಕೀಪರ್ ಕೂಡ ಆಗಿದ್ದಾರೆ. ಕಳೆದ ಆವೃತ್ತಿಯ ಬಳಿಕ ಕ್ರಿಕೆಟ್​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ನಿರ್ವಹಿಸುತ್ತಿದ್ದ ಕೆಲಸವನ್ನು ರಿಷಬ್ ಪಂತ್ ಮುಂದುವರೆಸಲಿದ್ದಾರೆ. ಹಾಗೆಯೇ ತಂಡಕ್ಕೆ ಸಮಸ್ಯೆಯಾಗಿರುವ ಮಧ್ಯಮ ಕ್ರಮಾಂಕಕ್ಕೆ ಪಂತ್ ಆನೆಬಲವನ್ನು ತಂದುಕೊಡಲಿದ್ದಾರೆ.

ಎರಡನೇಯದ್ದು, ಪಂತ್ ಸ್ಫೋಟಕ ಬ್ಯಾಟ್ಸ್‌ಮನ್ ಅಲ್ಲದೆ ಅದ್ಭುತ ವಿಕೆಟ್‌ಕೀಪರ್ ಕೂಡ ಆಗಿದ್ದಾರೆ. ಕಳೆದ ಆವೃತ್ತಿಯ ಬಳಿಕ ಕ್ರಿಕೆಟ್​ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ನಿರ್ವಹಿಸುತ್ತಿದ್ದ ಕೆಲಸವನ್ನು ರಿಷಬ್ ಪಂತ್ ಮುಂದುವರೆಸಲಿದ್ದಾರೆ. ಹಾಗೆಯೇ ತಂಡಕ್ಕೆ ಸಮಸ್ಯೆಯಾಗಿರುವ ಮಧ್ಯಮ ಕ್ರಮಾಂಕಕ್ಕೆ ಪಂತ್ ಆನೆಬಲವನ್ನು ತಂದುಕೊಡಲಿದ್ದಾರೆ.

5 / 6
ಇನ್ನು ಕಳೆದ ಐಪಿಎಲ್​ನಲ್ಲಿ ಡೆಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ರಿಷಬ್ ಪಂತ್ 40.55 ಸರಾಸರಿಯಲ್ಲಿ 3 ಅರ್ಧಶತಕಗಳ ನೆರವಿನಿಂದ 446 ರನ್ ಗಳಿಸಿದ್ದರು. ಇಲ್ಲಿಯವರೆಗೆ, ಡೆಲ್ಲಿ ಪರ 111 ಪಂದ್ಯಗಳನ್ನಾಡಿರುವ ಪಂತ್, 35.31 ಸರಾಸರಿಯಲ್ಲಿ 3284 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಸೇರಿದಂತೆ 18 ಅರ್ಧ ಶತಕಗಳನ್ನು ಸಹ ದಾಖಲಿಸಿದ್ದಾರೆ.

ಇನ್ನು ಕಳೆದ ಐಪಿಎಲ್​ನಲ್ಲಿ ಡೆಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ರಿಷಬ್ ಪಂತ್ 40.55 ಸರಾಸರಿಯಲ್ಲಿ 3 ಅರ್ಧಶತಕಗಳ ನೆರವಿನಿಂದ 446 ರನ್ ಗಳಿಸಿದ್ದರು. ಇಲ್ಲಿಯವರೆಗೆ, ಡೆಲ್ಲಿ ಪರ 111 ಪಂದ್ಯಗಳನ್ನಾಡಿರುವ ಪಂತ್, 35.31 ಸರಾಸರಿಯಲ್ಲಿ 3284 ರನ್ ಗಳಿಸಿದ್ದಾರೆ. ಇದರಲ್ಲಿ 1 ಶತಕ ಸೇರಿದಂತೆ 18 ಅರ್ಧ ಶತಕಗಳನ್ನು ಸಹ ದಾಖಲಿಸಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್