Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೂ ಬಿಸಿ ಮುಟ್ಟಿಸಿದ ಸಂಜೀವ್ ಗೊಯೆಂಕಾ

IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರಲ್ಲಿ ಹೊಸ ನಾಯಕನೊಂದಿಗೆ ಕಣಕ್ಕಿಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ. ಈ ಪಂದ್ಯದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡಿದ ರಿಷಭ್ ಪಂತ್ ಶೂನ್ಯಕ್ಕೆ ಔಟಾಗಿದ್ದರು. ಅತ್ತ ಪಂದ್ಯವನ್ನೂ ಕೂಡ ಸೋತುಕೊಂಡರು. ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಪಂತ್ ಜೊತೆ ಚರ್ಚಿಸುತ್ತಿರುವುದು ಕಂಡು ಬಂದಿದೆ.

ಝಾಹಿರ್ ಯೂಸುಫ್
|

Updated on: Mar 25, 2025 | 7:30 AM

IPL 2025: ಐಪಿಎಲ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿದೆ.​ ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

IPL 2025: ಐಪಿಎಲ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿದೆ.​ ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

1 / 5
ಹೌದು, ಕಳೆದ ಸೀಸನ್​ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

ಹೌದು, ಕಳೆದ ಸೀಸನ್​ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

2 / 5
ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆಎಲ್ ರಾಹುಲ್ ಕೂಡ LSG ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆಎಲ್ ರಾಹುಲ್ ಕೂಡ LSG ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

3 / 5
ಏಕೆಂದರೆ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಅದೇನೋ ಚರ್ಚಿಸುತ್ತಿರುವಂತೆ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶದೊಂದಿಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

ಏಕೆಂದರೆ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಅದೇನೋ ಚರ್ಚಿಸುತ್ತಿರುವಂತೆ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶದೊಂದಿಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅಶುತೋಷ್ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅಶುತೋಷ್ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

5 / 5
Follow us
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ