AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೂ ಬಿಸಿ ಮುಟ್ಟಿಸಿದ ಸಂಜೀವ್ ಗೊಯೆಂಕಾ

IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರಲ್ಲಿ ಹೊಸ ನಾಯಕನೊಂದಿಗೆ ಕಣಕ್ಕಿಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲ ಪಂದ್ಯದಲ್ಲೇ ಸೋಲನುಭವಿಸಿದೆ. ಈ ಪಂದ್ಯದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡಿದ ರಿಷಭ್ ಪಂತ್ ಶೂನ್ಯಕ್ಕೆ ಔಟಾಗಿದ್ದರು. ಅತ್ತ ಪಂದ್ಯವನ್ನೂ ಕೂಡ ಸೋತುಕೊಂಡರು. ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಪಂತ್ ಜೊತೆ ಚರ್ಚಿಸುತ್ತಿರುವುದು ಕಂಡು ಬಂದಿದೆ.

ಝಾಹಿರ್ ಯೂಸುಫ್
|

Updated on: Mar 25, 2025 | 7:30 AM

Share
IPL 2025: ಐಪಿಎಲ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿದೆ.​ ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

IPL 2025: ಐಪಿಎಲ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG) 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿದೆ.​ ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

1 / 5
ಹೌದು, ಕಳೆದ ಸೀಸನ್​ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

ಹೌದು, ಕಳೆದ ಸೀಸನ್​ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

2 / 5
ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆಎಲ್ ರಾಹುಲ್ ಕೂಡ LSG ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರ ಈ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದೇ ಕಾರಣದಿಂದ ಕೆಎಲ್ ರಾಹುಲ್ ಕೂಡ LSG ತಂಡವನ್ನು ತೊರೆದಿದ್ದರು. ಇದೀಗ ನಾಯಕ ಬದಲಾದರೂ, ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ಮಾತ್ರ ಬದಲಾಗಿಲ್ಲ.

3 / 5
ಏಕೆಂದರೆ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಅದೇನೋ ಚರ್ಚಿಸುತ್ತಿರುವಂತೆ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶದೊಂದಿಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

ಏಕೆಂದರೆ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಹೊಸ ನಾಯಕ ರಿಷಭ್ ಪಂತ್ ಅವರೊಂದಿಗೆ ಸಂಜೀವ್ ಗೊಯೆಂಕಾ ಅದೇನೋ ಚರ್ಚಿಸುತ್ತಿರುವಂತೆ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶದೊಂದಿಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅಶುತೋಷ್ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (72) ಹಾಗೂ ನಿಕೋಲಸ್ ಪೂರನ್ (75) ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನಿಂದ ಲಕ್ನೋ ತಂಡ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶುತೋಷ್ ಶರ್ಮಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅಶುತೋಷ್ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

5 / 5
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!