Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂದಿನ ಪಂದ್ಯಕ್ಕೆ ಬುಮ್ರಾ, ರೋಹಿತ್ ಲಭ್ಯ; ಆರ್​ಸಿಬಿಗೆ ಕಾದಿದ್ಯಾ ಗಂಡಾಂತರ?

MI vs RCB IPL 2025: ಏಪ್ರಿಲ್ 7 ರಂದು ಮುಂಬೈನಲ್ಲಿ ನಡೆಯುವ ಐಪಿಎಲ್ 2025 ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಇತ್ತೀಚೆಗೆ ಸೋಲು ಅನುಭವಿಸಿರುವ ಉಭಯ ತಂಡಗಳಿಗೂ ಗೆಲುವು ಅತ್ಯಗತ್ಯ. ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಅವರ ಮರಳುವಿಕೆ ಮುಂಬೈಗೆ ಭರವಸೆಯನ್ನು ನೀಡಿದೆ. ಬುಮ್ರಾ ಅವರ ಮರಳುವಿಕೆ ಮುಂಬೈನ ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದೆ.

ಪೃಥ್ವಿಶಂಕರ
|

Updated on: Apr 06, 2025 | 8:18 PM

ಐಪಿಎಲ್ 2025 ರ 20ನೇ ಪಂದ್ಯ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಎರಡೂ ತಂಡಗಳು ತಮ್ಮ ಕೊನೆಯಲ್ಲಿ ಪಂದ್ಯದಲ್ಲಿ ಸೋತಿರುವ ಕಾರಣ ಉಭಯ ತಂಡಗಳಿಗೆ ಗೆಲುವಿನ ಅವಶ್ಯಕತೆ ಇದೆ.

ಐಪಿಎಲ್ 2025 ರ 20ನೇ ಪಂದ್ಯ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಎರಡೂ ತಂಡಗಳು ತಮ್ಮ ಕೊನೆಯಲ್ಲಿ ಪಂದ್ಯದಲ್ಲಿ ಸೋತಿರುವ ಕಾರಣ ಉಭಯ ತಂಡಗಳಿಗೆ ಗೆಲುವಿನ ಅವಶ್ಯಕತೆ ಇದೆ.

1 / 6
ಆರ್​ಸಿಬಿಗೆ ಹೋಲಿಸಿದರೆ, ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಉತ್ತಮ ಪ್ರದರ್ಶನ ನೀಡಿಲ್ಲ. ಆಡಿರುವ 4 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಗೆದ್ದಿರುವ ಮುಂಬೈ ಉಳಿದ 3 ಪಂದ್ಯಗಳಲ್ಲೂ ಹೀನಾಯವಾಗಿ ಸೋತಿದೆ. ಈ ಆವೃತ್ತಿಯಲ್ಲಿ ತಂಡದ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲು ವೈಫಲ್ಯ ಅನುಭವಿಸುತ್ತಿರುವುದು ಸತತ ಸೋಲಿಗೆ ಕಾರಣವಾಗಿದೆ.

ಆರ್​ಸಿಬಿಗೆ ಹೋಲಿಸಿದರೆ, ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಉತ್ತಮ ಪ್ರದರ್ಶನ ನೀಡಿಲ್ಲ. ಆಡಿರುವ 4 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಗೆದ್ದಿರುವ ಮುಂಬೈ ಉಳಿದ 3 ಪಂದ್ಯಗಳಲ್ಲೂ ಹೀನಾಯವಾಗಿ ಸೋತಿದೆ. ಈ ಆವೃತ್ತಿಯಲ್ಲಿ ತಂಡದ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲು ವೈಫಲ್ಯ ಅನುಭವಿಸುತ್ತಿರುವುದು ಸತತ ಸೋಲಿಗೆ ಕಾರಣವಾಗಿದೆ.

2 / 6
ಈ ಸತತ ಸೋಲುಗಳ ನಡುವೆ ಮುಂಬೈಗೆ ಸಂತಸದ ಸುದ್ದಿ ಸಿಕ್ಕಿದ್ದು, ತಂಡದ ಇಬ್ಬರು ಮ್ಯಾಚ್ ವಿನ್ನಿಂಗ್ ಪ್ಲೇಯರ್ಸ್​ ಇಂಜುರಿಯಿಂದ ಚೇತರಿಸಿಕೊಂಡಿದ್ದು, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆ ಇಬ್ಬರು ಆಟಗಾರರೆಂದರೆ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ.

ಈ ಸತತ ಸೋಲುಗಳ ನಡುವೆ ಮುಂಬೈಗೆ ಸಂತಸದ ಸುದ್ದಿ ಸಿಕ್ಕಿದ್ದು, ತಂಡದ ಇಬ್ಬರು ಮ್ಯಾಚ್ ವಿನ್ನಿಂಗ್ ಪ್ಲೇಯರ್ಸ್​ ಇಂಜುರಿಯಿಂದ ಚೇತರಿಸಿಕೊಂಡಿದ್ದು, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆ ಇಬ್ಬರು ಆಟಗಾರರೆಂದರೆ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ.

3 / 6
ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಮಹೇಲ ಜಯವರ್ಧನೆ, ಬುಮ್ರಾ ಅವರ ಮರಳುವಿಕೆಯನ್ನು ದೃಢಪಡಿಸಿದ್ದು, ‘ಹೌದು, ಮುಂದಿನ ಪಂದ್ಯದಿಂದ ಬುಮ್ರಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಅಭ್ಯಾಸ ಮಾಡುತ್ತಿದ್ದು, ಸೋಮವಾರದ ಪಂದ್ಯದಲ್ಲಿ ಆಡಲು ಸಿದ್ಧರಾಗಿದ್ದಾರೆ ಎಂದರು.

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಮಹೇಲ ಜಯವರ್ಧನೆ, ಬುಮ್ರಾ ಅವರ ಮರಳುವಿಕೆಯನ್ನು ದೃಢಪಡಿಸಿದ್ದು, ‘ಹೌದು, ಮುಂದಿನ ಪಂದ್ಯದಿಂದ ಬುಮ್ರಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಅಭ್ಯಾಸ ಮಾಡುತ್ತಿದ್ದು, ಸೋಮವಾರದ ಪಂದ್ಯದಲ್ಲಿ ಆಡಲು ಸಿದ್ಧರಾಗಿದ್ದಾರೆ ಎಂದರು.

4 / 6
ಬುಮ್ರಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಆನೆ ಬಲ ತಂದಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಬೌಲಿಂಗ್ ವಿಭಾಗವೇ ಹೆಚ್ಚು ದುರ್ಬಲವಾಗಿ ಕಾಣುತ್ತಿತ್ತು. ಆದರೀಗ ಬುಮ್ರಾ ಮುಂಬೈ ಇಂಡಿಯನ್ಸ್‌ಗೆ ಮರಳುವುದರೊಂದಿಗೆ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಲಿದೆ.

ಬುಮ್ರಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಆನೆ ಬಲ ತಂದಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಬೌಲಿಂಗ್ ವಿಭಾಗವೇ ಹೆಚ್ಚು ದುರ್ಬಲವಾಗಿ ಕಾಣುತ್ತಿತ್ತು. ಆದರೀಗ ಬುಮ್ರಾ ಮುಂಬೈ ಇಂಡಿಯನ್ಸ್‌ಗೆ ಮರಳುವುದರೊಂದಿಗೆ ತಂಡದ ಬೌಲಿಂಗ್ ವಿಭಾಗ ಬಲಿಷ್ಠವಾಗಲಿದೆ.

5 / 6
ಹಿಂದಿನ ಪಂದ್ಯದಲ್ಲಿ ಮೊಣಕಾಲಿನ ಗಾಯದಿಂದ ವಿಶ್ರಾಂತಿ ಪಡೆದಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿತು. ಕೋಚ್ ಜಯವರ್ಧನೆ ಮಾತನಾಡಿ, ‘ರೋಹಿತ್ ಆರೋಗ್ಯವಾಗಿದ್ದಾರೆ. ಅವರು ಇಂದು ಬ್ಯಾಟಿಂಗ್ ಮಾಡಲಿದ್ದಾರೆ. ಆ ನಂತರ ನಾವು ಅವರ ಸ್ಥಿತಿಯನ್ನು ನಿರ್ಣಯಿಸುತ್ತೇವೆ ಎಂದಿದ್ದಾರೆ.

ಹಿಂದಿನ ಪಂದ್ಯದಲ್ಲಿ ಮೊಣಕಾಲಿನ ಗಾಯದಿಂದ ವಿಶ್ರಾಂತಿ ಪಡೆದಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿತು. ಕೋಚ್ ಜಯವರ್ಧನೆ ಮಾತನಾಡಿ, ‘ರೋಹಿತ್ ಆರೋಗ್ಯವಾಗಿದ್ದಾರೆ. ಅವರು ಇಂದು ಬ್ಯಾಟಿಂಗ್ ಮಾಡಲಿದ್ದಾರೆ. ಆ ನಂತರ ನಾವು ಅವರ ಸ್ಥಿತಿಯನ್ನು ನಿರ್ಣಯಿಸುತ್ತೇವೆ ಎಂದಿದ್ದಾರೆ.

6 / 6
Follow us
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ