AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್

IPL 2025 Romario Shepherd: CSK ವಿರುದ್ಧದ ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ರೊಮಾರಿಯೊ ಶೆಫರ್ಡ್ ಆರ್​ಸಿಬಿ ತಂಡದ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದರು. ಅಲ್ಲದೆ ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂಲಕ ಆರ್​ಸಿಬಿ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದೀಗ ನಿರ್ಣಾಯಕ ಪಂದ್ಯಗಲಿಗೆ ರೊಮಾರಿಯೊ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 08, 2025 | 7:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಒಂದೆಡೆ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭುಜದ ನೋವಿನಿಂದ ಬಳಲುತ್ತಿದ್ದರೆ, ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ (Romario Shepherd) ನಿರ್ಣಾಯಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಒಂದೆಡೆ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭುಜದ ನೋವಿನಿಂದ ಬಳಲುತ್ತಿದ್ದರೆ, ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ (Romario Shepherd) ನಿರ್ಣಾಯಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

1 / 5
ಆರ್​ಸಿಬಿ ತಂಡದ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಮುಂದಿನ ವಾರ ವೆಸ್ಟ್ ಇಂಡೀಸ್​ಗೆ ಹಿಂತಿರುಗುವ ಸಾಧ್ಯತೆಯಿದೆ. ಏಕೆಂದರೆ ಮೇ 21 ರಿಂದ ವೆಸ್ಟ್ ಇಂಡೀಸ್ ತಂಡವು ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದು. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ವೆಸ್ಟ್ ಇಂಡೀಸ್ ತಂಡದಲ್ಲಿ ರೊಮಾರಿಯೊ ಶೆಫರ್ಡ್ ಕಾಣಿಸಿಕೊಂಡಿದ್ದಾರೆ.

ಆರ್​ಸಿಬಿ ತಂಡದ ಆಲ್​ರೌಂಡರ್ ರೊಮಾರಿಯೊ ಶೆಫರ್ಡ್ ಮುಂದಿನ ವಾರ ವೆಸ್ಟ್ ಇಂಡೀಸ್​ಗೆ ಹಿಂತಿರುಗುವ ಸಾಧ್ಯತೆಯಿದೆ. ಏಕೆಂದರೆ ಮೇ 21 ರಿಂದ ವೆಸ್ಟ್ ಇಂಡೀಸ್ ತಂಡವು ಐರ್ಲೆಂಡ್ ವಿರುದ್ಧ ಸರಣಿ ಆಡಲಿದ್ದು. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ವೆಸ್ಟ್ ಇಂಡೀಸ್ ತಂಡದಲ್ಲಿ ರೊಮಾರಿಯೊ ಶೆಫರ್ಡ್ ಕಾಣಿಸಿಕೊಂಡಿದ್ದಾರೆ.

2 / 5
ಹೀಗಾಗಿ ಮೇ 17ರ ಬಳಿಕ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆ ಹೆಚ್ಚಿದೆ. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 17 ರಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದ ಬಳಿಕ ಶೆಫರ್ಡ್​ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಲು ಕೆರಿಬಿಯನ್ ದ್ವೀಪಕ್ಕೆ ಮರಳಲಿದ್ದಾರೆ ಎನ್ನಬಹುದು.

ಹೀಗಾಗಿ ಮೇ 17ರ ಬಳಿಕ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆ ಹೆಚ್ಚಿದೆ. ಅಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 17 ರಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದ ಬಳಿಕ ಶೆಫರ್ಡ್​ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಲು ಕೆರಿಬಿಯನ್ ದ್ವೀಪಕ್ಕೆ ಮರಳಲಿದ್ದಾರೆ ಎನ್ನಬಹುದು.

3 / 5
ಇತ್ತ ಐಪಿಎಲ್ ಪ್ಲೇಆಫ್ ಪಂದ್ಯಗಳು ಮೇ 20 ರಿಂದ ಶುರುವಾಗಲಿದೆ. ಮೇ 20 ರಂದು ಕ್ವಾಲಿಫೈಯರ್ 1 ಪಂಧ್ಯ ನಡೆದರೆ, ಮೇ 21 ರಂದು ಎಲಿಮಿನೇಟರ್ ಪಂದ್ಯ ಜರುಗಲಿದೆ. ಇದಾದ ಬಳಿಕ ಮೇ 23 ರಂದು ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 25 ರಂದು ಜರುಗಲಿದೆ.

ಇತ್ತ ಐಪಿಎಲ್ ಪ್ಲೇಆಫ್ ಪಂದ್ಯಗಳು ಮೇ 20 ರಿಂದ ಶುರುವಾಗಲಿದೆ. ಮೇ 20 ರಂದು ಕ್ವಾಲಿಫೈಯರ್ 1 ಪಂಧ್ಯ ನಡೆದರೆ, ಮೇ 21 ರಂದು ಎಲಿಮಿನೇಟರ್ ಪಂದ್ಯ ಜರುಗಲಿದೆ. ಇದಾದ ಬಳಿಕ ಮೇ 23 ರಂದು ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 25 ರಂದು ಜರುಗಲಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಒಂದು ಪಂದ್ಯ ಗೆದ್ದರೆ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಇದಾಗ್ಯೂ ಪ್ಲೇಆಫ್ ಪಂದ್ಯಗಳಲ್ಲಿ ಹೊಡಿಬಡಿ ದಾಂಡಿಗ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಅನುಮಾನ ಎಂದೇ ಹೇಳಬಹುದು. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಒಂದು ಪಂದ್ಯ ಗೆದ್ದರೆ ಪ್ಲೇಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ. ಇದಾಗ್ಯೂ ಪ್ಲೇಆಫ್ ಪಂದ್ಯಗಳಲ್ಲಿ ಹೊಡಿಬಡಿ ದಾಂಡಿಗ ರೊಮಾರಿಯೊ ಶೆಫರ್ಡ್ ಕಾಣಿಸಿಕೊಳ್ಳುವುದು ಅನುಮಾನ ಎಂದೇ ಹೇಳಬಹುದು. 

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ