AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ 11 ಮ್ಯಾಚ್​ಗಳಲ್ಲಿ ಆರ್​ಸಿಬಿ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 16 ಅಂಕಗಳನ್ನು ಹೊಂದಿರುವ ರಾಯಲ್ ಪಡೆಯು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಝಾಹಿರ್ ಯೂಸುಫ್
|

Updated on: May 15, 2025 | 8:32 AM

Share
IPL 2025: ಐಪಿಎಲ್ ಸೀಸನ್​​-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

IPL 2025: ಐಪಿಎಲ್ ಸೀಸನ್​​-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

1 / 6
ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್​ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್​ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

2 / 6
ಇನ್ನು ಇಂಗ್ಲೆಂಡ್​ ಆಟಗಾರರಾದ ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್​ ವಿರುದ್ಧ ಆರ್​ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇನ್ನು ಇಂಗ್ಲೆಂಡ್​ ಆಟಗಾರರಾದ ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್​ ವಿರುದ್ಧ ಆರ್​ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

3 / 6
ಇದಾಗ್ಯೂ ಎರಡು ಪಂದ್ಯಗಳ ಬಳಿಕ ಜೇಕಬ್ ಬೆಥೆಲ್ ಹಾಗೂ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆಯಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಬೆಥೆಲ್ ಹಾಗೂ ಶೆಫರ್ಡ್ ಮೇ 25ರ ಬಳಿಕ ಇಂಗ್ಲೆಂಡ್​ಗೆ ತೆರಳುವ ಸಾಧ್ಯತೆಯಿದೆ.

ಇದಾಗ್ಯೂ ಎರಡು ಪಂದ್ಯಗಳ ಬಳಿಕ ಜೇಕಬ್ ಬೆಥೆಲ್ ಹಾಗೂ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆಯಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಬೆಥೆಲ್ ಹಾಗೂ ಶೆಫರ್ಡ್ ಮೇ 25ರ ಬಳಿಕ ಇಂಗ್ಲೆಂಡ್​ಗೆ ತೆರಳುವ ಸಾಧ್ಯತೆಯಿದೆ.

4 / 6
ಇನ್ನು ಲಿಯಾಮ್ ಲಿವಿಂಗ್​​ಸ್ಟೋನ್ ಆರ್​ಸಿಬಿ ತಂಡದಲ್ಲೇ ಉಳಿಯಲಿದ್ದಾರೆ. ಏಕೆಂದರೆ ಈ ಬಾರಿ ಲಿವಿಂಗ್​ಸ್ಟೋನ್​ಗೆ ಇಂಗ್ಲೆಂಡ್ ತಂಡದಲ್ಲಿ  ಸ್ಥಾನ ಲಭಿಸಿಲ್ಲ. ಹೀಗಾಗಿ ಆವರು ಆರ್​ಸಿಬಿ ತಂಡದ ಜೊತೆ ಟೂರ್ನಿ ಮುಕ್ತಾಯದವರೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಫಿಲ್ ಸಾಲ್ಟ್ ಅವರ ಲಭ್ಯತೆಯ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಇನ್ನು ಲಿಯಾಮ್ ಲಿವಿಂಗ್​​ಸ್ಟೋನ್ ಆರ್​ಸಿಬಿ ತಂಡದಲ್ಲೇ ಉಳಿಯಲಿದ್ದಾರೆ. ಏಕೆಂದರೆ ಈ ಬಾರಿ ಲಿವಿಂಗ್​ಸ್ಟೋನ್​ಗೆ ಇಂಗ್ಲೆಂಡ್ ತಂಡದಲ್ಲಿ  ಸ್ಥಾನ ಲಭಿಸಿಲ್ಲ. ಹೀಗಾಗಿ ಆವರು ಆರ್​ಸಿಬಿ ತಂಡದ ಜೊತೆ ಟೂರ್ನಿ ಮುಕ್ತಾಯದವರೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಫಿಲ್ ಸಾಲ್ಟ್ ಅವರ ಲಭ್ಯತೆಯ ಬಗ್ಗೆ ಯಾವುದೇ ಖಚಿತತೆ ಇಲ್ಲ.

5 / 6
ಏಕೆಂದರೆ ಸಾಲ್ಟ್ ಅನಾರೋಗ್ಯದ ಕಾರಣ ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್​ಗೆ ತೆರಳಿರುವ ಅವರು ವಾಪಾಸಾಗಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಸಾಲ್ಟ್ ಮರಳಿದರೆ, ಆರ್​ಸಿಬಿ ತಂಡದ ಎಲ್ಲಾ ಪಂದ್ಯಗಳಿಗೂ ಲಭ್ಯರಿರಲಿದ್ದಾರೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಫಿಲ್ ಸಾಲ್ಟ್ ಕೂಡ ಆಯ್ಕೆಯಾಗಿಲ್ಲ. 

ಏಕೆಂದರೆ ಸಾಲ್ಟ್ ಅನಾರೋಗ್ಯದ ಕಾರಣ ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್​ಗೆ ತೆರಳಿರುವ ಅವರು ವಾಪಾಸಾಗಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಸಾಲ್ಟ್ ಮರಳಿದರೆ, ಆರ್​ಸಿಬಿ ತಂಡದ ಎಲ್ಲಾ ಪಂದ್ಯಗಳಿಗೂ ಲಭ್ಯರಿರಲಿದ್ದಾರೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಫಿಲ್ ಸಾಲ್ಟ್ ಕೂಡ ಆಯ್ಕೆಯಾಗಿಲ್ಲ. 

6 / 6
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು