AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ 11 ಮ್ಯಾಚ್​ಗಳಲ್ಲಿ ಆರ್​ಸಿಬಿ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 16 ಅಂಕಗಳನ್ನು ಹೊಂದಿರುವ ರಾಯಲ್ ಪಡೆಯು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಝಾಹಿರ್ ಯೂಸುಫ್
|

Updated on: May 15, 2025 | 8:32 AM

Share
IPL 2025: ಐಪಿಎಲ್ ಸೀಸನ್​​-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

IPL 2025: ಐಪಿಎಲ್ ಸೀಸನ್​​-18ರ ದ್ವಿತೀಯಾರ್ಧದ ಪಂದ್ಯವು ಮೇ 17 ರಿಂದ ಶುರುವಾಗಲಿದೆ. ಶನಿವಾರ ಆರಂಭವಾಗಲಿರುವ ಪಂದ್ಯಾವಳಿಯ ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಆರ್​ಸಿಬಿ ತಂಡದ ಮೂವರು ವಿದೇಶಿ ಆಟಗಾರರು ಆಗಮಿಸಿದ್ದಾರೆ.

1 / 6
ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್​ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಭಾರತ ಮತ್ತು ಪಾಕ್ ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ತವರಿಗೆ ತೆರಳಿದ್ದ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ರೊಮಾರಿಯೊ ಶೆಫರ್ಡ್​ ಬುಧವಾರ ಭಾರತಕ್ಕೆ ಹಿಂತಿರುಗಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯದಲ್ಲಿ ಕೆರಿಬಿಯನ್ ದೈತ್ಯ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

2 / 6
ಇನ್ನು ಇಂಗ್ಲೆಂಡ್​ ಆಟಗಾರರಾದ ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್​ ವಿರುದ್ಧ ಆರ್​ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇನ್ನು ಇಂಗ್ಲೆಂಡ್​ ಆಟಗಾರರಾದ ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್ ಕೂಡ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಲಭ್ಯರಿರಲಿದ್ದಾರೆ. ಹೀಗಾಗಿ ಕೆಕೆಆರ್​ ವಿರುದ್ಧ ಆರ್​ಸಿಬಿ ಪರ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

3 / 6
ಇದಾಗ್ಯೂ ಎರಡು ಪಂದ್ಯಗಳ ಬಳಿಕ ಜೇಕಬ್ ಬೆಥೆಲ್ ಹಾಗೂ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆಯಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಬೆಥೆಲ್ ಹಾಗೂ ಶೆಫರ್ಡ್ ಮೇ 25ರ ಬಳಿಕ ಇಂಗ್ಲೆಂಡ್​ಗೆ ತೆರಳುವ ಸಾಧ್ಯತೆಯಿದೆ.

ಇದಾಗ್ಯೂ ಎರಡು ಪಂದ್ಯಗಳ ಬಳಿಕ ಜೇಕಬ್ ಬೆಥೆಲ್ ಹಾಗೂ ರೊಮಾರಿಯೊ ಶೆಫರ್ಡ್ ತವರಿಗೆ ಹಿಂತಿರುವ ಸಾಧ್ಯತೆಯಿದೆ. ಏಕೆಂದರೆ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಬೆಥೆಲ್ ಹಾಗೂ ಶೆಫರ್ಡ್ ಮೇ 25ರ ಬಳಿಕ ಇಂಗ್ಲೆಂಡ್​ಗೆ ತೆರಳುವ ಸಾಧ್ಯತೆಯಿದೆ.

4 / 6
ಇನ್ನು ಲಿಯಾಮ್ ಲಿವಿಂಗ್​​ಸ್ಟೋನ್ ಆರ್​ಸಿಬಿ ತಂಡದಲ್ಲೇ ಉಳಿಯಲಿದ್ದಾರೆ. ಏಕೆಂದರೆ ಈ ಬಾರಿ ಲಿವಿಂಗ್​ಸ್ಟೋನ್​ಗೆ ಇಂಗ್ಲೆಂಡ್ ತಂಡದಲ್ಲಿ  ಸ್ಥಾನ ಲಭಿಸಿಲ್ಲ. ಹೀಗಾಗಿ ಆವರು ಆರ್​ಸಿಬಿ ತಂಡದ ಜೊತೆ ಟೂರ್ನಿ ಮುಕ್ತಾಯದವರೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಫಿಲ್ ಸಾಲ್ಟ್ ಅವರ ಲಭ್ಯತೆಯ ಬಗ್ಗೆ ಯಾವುದೇ ಖಚಿತತೆ ಇಲ್ಲ.

ಇನ್ನು ಲಿಯಾಮ್ ಲಿವಿಂಗ್​​ಸ್ಟೋನ್ ಆರ್​ಸಿಬಿ ತಂಡದಲ್ಲೇ ಉಳಿಯಲಿದ್ದಾರೆ. ಏಕೆಂದರೆ ಈ ಬಾರಿ ಲಿವಿಂಗ್​ಸ್ಟೋನ್​ಗೆ ಇಂಗ್ಲೆಂಡ್ ತಂಡದಲ್ಲಿ  ಸ್ಥಾನ ಲಭಿಸಿಲ್ಲ. ಹೀಗಾಗಿ ಆವರು ಆರ್​ಸಿಬಿ ತಂಡದ ಜೊತೆ ಟೂರ್ನಿ ಮುಕ್ತಾಯದವರೆಗೆ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಫಿಲ್ ಸಾಲ್ಟ್ ಅವರ ಲಭ್ಯತೆಯ ಬಗ್ಗೆ ಯಾವುದೇ ಖಚಿತತೆ ಇಲ್ಲ.

5 / 6
ಏಕೆಂದರೆ ಸಾಲ್ಟ್ ಅನಾರೋಗ್ಯದ ಕಾರಣ ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್​ಗೆ ತೆರಳಿರುವ ಅವರು ವಾಪಾಸಾಗಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಸಾಲ್ಟ್ ಮರಳಿದರೆ, ಆರ್​ಸಿಬಿ ತಂಡದ ಎಲ್ಲಾ ಪಂದ್ಯಗಳಿಗೂ ಲಭ್ಯರಿರಲಿದ್ದಾರೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಫಿಲ್ ಸಾಲ್ಟ್ ಕೂಡ ಆಯ್ಕೆಯಾಗಿಲ್ಲ. 

ಏಕೆಂದರೆ ಸಾಲ್ಟ್ ಅನಾರೋಗ್ಯದ ಕಾರಣ ಐಪಿಎಲ್​ನ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಇಂಗ್ಲೆಂಡ್​ಗೆ ತೆರಳಿರುವ ಅವರು ವಾಪಾಸಾಗಲಿದ್ದಾರಾ ಎಂಬುದೇ ಪ್ರಶ್ನೆ. ಒಂದು ವೇಳೆ ಸಾಲ್ಟ್ ಮರಳಿದರೆ, ಆರ್​ಸಿಬಿ ತಂಡದ ಎಲ್ಲಾ ಪಂದ್ಯಗಳಿಗೂ ಲಭ್ಯರಿರಲಿದ್ದಾರೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಫಿಲ್ ಸಾಲ್ಟ್ ಕೂಡ ಆಯ್ಕೆಯಾಗಿಲ್ಲ. 

6 / 6
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌