AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ 23 ಎಸೆತಗಳಲ್ಲಿ 61 ರನ್..! ಉಳಿದ 97 ಎಸೆತಗಳಲ್ಲಿ ಕೇವಲ 102 ರನ್; ಆರ್​ಸಿಬಿ ಕಳಪೆ ಬ್ಯಾಟಿಂಗ್‌

IPL 2025 RCB Poor Batting: ಐಪಿಎಲ್ 2025ರ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 163 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆರಂಭಿಕರಾದ ಸಾಲ್ಟ್ ಮತ್ತು ಕೊಹ್ಲಿ ಅದ್ಭುತ ಆರಂಭ ನೀಡಿದರೂ, ಉಳಿದ ಬ್ಯಾಟ್ಸ್‌ಮನ್‌ಗಳು ನಿರಾಶೆಗೊಳಿಸಿದರು. ಡೆಲ್ಲಿ ಬೌಲರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದರು.

ಪೃಥ್ವಿಶಂಕರ
|

Updated on: Apr 10, 2025 | 9:32 PM

Share
ಐಪಿಎಲ್ 18ನೇ ಸೀಸನ್‌ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯವು ಆರ್‌ಸಿಬಿಯ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತವರು ಮೈದಾನದ ಲಾಭ ಪಡೆಯಲು ಸಾಧ್ಯವಾಗದೆ ಕೇವಲ 163 ರನ್​ಗಳಿಸಲಷ್ಟೇ ಶಕ್ತವಾಗಿದೆ.

ಐಪಿಎಲ್ 18ನೇ ಸೀಸನ್‌ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯವು ಆರ್‌ಸಿಬಿಯ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತವರು ಮೈದಾನದ ಲಾಭ ಪಡೆಯಲು ಸಾಧ್ಯವಾಗದೆ ಕೇವಲ 163 ರನ್​ಗಳಿಸಲಷ್ಟೇ ಶಕ್ತವಾಗಿದೆ.

1 / 6
ಆರ್​ಸಿಬಿಗೆ ನಿರೀಕ್ಷಿತ ಆರಂಭವೇ ಸಿಕ್ಕಿತು. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕೇವಲ 3.5 ಓವರ್​ಗಳಲ್ಲಿ ಬರೋಬ್ಬರಿ 61 ರನ್ ಕಲೆಹಾಕಿದರು. ಆದರೆ ಈ ಇಬ್ಬರ ಜೊತೆಯಾಟ ಅಂತ್ಯವಾದ ಬಳಿಕ ಆರ್​​ಸಿಬಿಯ ಪೆವಿಲಿಯನ್ ಪರೇಡ್ ಆರಂಭವಾಯಿತು. ಡೆಲ್ಲಿ ಬೌಲರ್​ಗಳ ಕರಾರುವಕ್ಕಾದ ದಾಳಿಯ ಮುಂದೆ ಆರ್​ಸಿಬಿ ಆಟಗಾರರಿಗೆ ಮುಕ್ತವಾಗಿ ಆಡಲು ಸಾಧ್ಯವಾಗಲಿಲ್ಲ.

ಆರ್​ಸಿಬಿಗೆ ನಿರೀಕ್ಷಿತ ಆರಂಭವೇ ಸಿಕ್ಕಿತು. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕೇವಲ 3.5 ಓವರ್​ಗಳಲ್ಲಿ ಬರೋಬ್ಬರಿ 61 ರನ್ ಕಲೆಹಾಕಿದರು. ಆದರೆ ಈ ಇಬ್ಬರ ಜೊತೆಯಾಟ ಅಂತ್ಯವಾದ ಬಳಿಕ ಆರ್​​ಸಿಬಿಯ ಪೆವಿಲಿಯನ್ ಪರೇಡ್ ಆರಂಭವಾಯಿತು. ಡೆಲ್ಲಿ ಬೌಲರ್​ಗಳ ಕರಾರುವಕ್ಕಾದ ದಾಳಿಯ ಮುಂದೆ ಆರ್​ಸಿಬಿ ಆಟಗಾರರಿಗೆ ಮುಕ್ತವಾಗಿ ಆಡಲು ಸಾಧ್ಯವಾಗಲಿಲ್ಲ.

2 / 6
ಆರಂಭಿಕ ಫಿಲ್ ಸಾಲ್ಟ್ ಕೇವಲ 17 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ಗಳ ಸಮೇತ 37 ರನ್ ಕಲೆಹಾಕಿದರು. ಇವರ ಜೊತೆಗೆ ವಿರಾಟ್ ಕೊಹ್ಲಿ ಕೂಡ 14 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 22 ರನ್ ಬಾರಿಸಿದರು. ಆದರೆ ಈ ಇಬ್ಬರ ವಿಕೆಟ್ ಪತನದ ನಂತರ ಆರ್​ಸಿಬಿ ಇನ್ನಿಂಗ್ಸ್ ಹಳ್ಳ ಹಿಡಿಯಿತು.

ಆರಂಭಿಕ ಫಿಲ್ ಸಾಲ್ಟ್ ಕೇವಲ 17 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ಗಳ ಸಮೇತ 37 ರನ್ ಕಲೆಹಾಕಿದರು. ಇವರ ಜೊತೆಗೆ ವಿರಾಟ್ ಕೊಹ್ಲಿ ಕೂಡ 14 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 22 ರನ್ ಬಾರಿಸಿದರು. ಆದರೆ ಈ ಇಬ್ಬರ ವಿಕೆಟ್ ಪತನದ ನಂತರ ಆರ್​ಸಿಬಿ ಇನ್ನಿಂಗ್ಸ್ ಹಳ್ಳ ಹಿಡಿಯಿತು.

3 / 6
ಸಾಲ್ಟ್ ವಿಕೆಟ್ ನಂತರ ಬಂದ ಪಡಿಕ್ಕಲ್ 1 ರನ್​ಗಳಿಗೆ ಸುಸ್ತಾದರೆ, ಲಿಯಾಮ್ ಲಿವಿಂಗ್‌ಸ್ಟೋನ್ ಎಂದಿನಂತೆ ತಮ್ಮ ಬೇಜವಬ್ದಾರಿಯುತ ಬ್ಯಾಟಿಂಗ್‌ ಮೂಲಕ ಕೇವಲ 4 ರನ್​ಗಳಿಗೆ ಪೆವಿಲಿಯನ್ ಹಾದಿ ಹಿಡಿದಿರು. ಜಿತೇಶ್ ಶರ್ಮಾ ಅವರ ಆಟವೂ 3 ರನ್​​ಗಳಿಗೆ ಅಂತ್ಯವಾಯಿತು.

ಸಾಲ್ಟ್ ವಿಕೆಟ್ ನಂತರ ಬಂದ ಪಡಿಕ್ಕಲ್ 1 ರನ್​ಗಳಿಗೆ ಸುಸ್ತಾದರೆ, ಲಿಯಾಮ್ ಲಿವಿಂಗ್‌ಸ್ಟೋನ್ ಎಂದಿನಂತೆ ತಮ್ಮ ಬೇಜವಬ್ದಾರಿಯುತ ಬ್ಯಾಟಿಂಗ್‌ ಮೂಲಕ ಕೇವಲ 4 ರನ್​ಗಳಿಗೆ ಪೆವಿಲಿಯನ್ ಹಾದಿ ಹಿಡಿದಿರು. ಜಿತೇಶ್ ಶರ್ಮಾ ಅವರ ಆಟವೂ 3 ರನ್​​ಗಳಿಗೆ ಅಂತ್ಯವಾಯಿತು.

4 / 6
ನಾಯಕ ರಜತ್ ಪಾಟಿದರ್ ಒಂದು ತುದಿಯಲಿ ನಿಂತು ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರಾದರೂ ಉಳಿದವರಿಂದ ಸಾಥ್ ಸಿಗಲಿಲ್ಲ. ಹೀಗಾಗಿ ಅವರು ಕೂಡ ಬಿಗ್ ಶಾಟ್ ಬಾರಿಸುವ ಯತ್ನದಲ್ಲಿ 23 ಎಸೆತಗಳಲ್ಲಿ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೃನಾಲ್ ಪಾಂಡ್ಯ ಅವರ ಆಟ ಕೂಡ 18 ರನ್​​ಗಳಿಗೆ ಅಂತ್ಯವಾಯಿತು.

ನಾಯಕ ರಜತ್ ಪಾಟಿದರ್ ಒಂದು ತುದಿಯಲಿ ನಿಂತು ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರಾದರೂ ಉಳಿದವರಿಂದ ಸಾಥ್ ಸಿಗಲಿಲ್ಲ. ಹೀಗಾಗಿ ಅವರು ಕೂಡ ಬಿಗ್ ಶಾಟ್ ಬಾರಿಸುವ ಯತ್ನದಲ್ಲಿ 23 ಎಸೆತಗಳಲ್ಲಿ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೃನಾಲ್ ಪಾಂಡ್ಯ ಅವರ ಆಟ ಕೂಡ 18 ರನ್​​ಗಳಿಗೆ ಅಂತ್ಯವಾಯಿತು.

5 / 6
ಕೊನೆಯಲ್ಲಿ ಏಕಾಂಗಿ ಹೋರಾಟ ನಡೆಸಿದ ಟಿಮ್ ಡೇವಿಡ್ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 37 ರನ್ ಬಾರಿಸಿ ತಂಡವನ್ನು 163 ರನ್​​ಗಳಿಗೆ ಕೊಂಡೊಯ್ದರು. ಆರಂಭದಲ್ಲಿ ಕೇವಲ 23 ಎಸೆತಗಳಲ್ಲಿ 61 ರನ್ ಬಾರಿಸಿದ್ದ ಆರ್​ಸಿಬಿ, ಆ ಬಳಿಕ ಉಳಿದ 97 ಎಸೆತಗಳಲ್ಲಿ ಕೇವಲ 102 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರರ್ಥ ಆರ್​ಸಿಬಿಯ ಬ್ಯಾಟಿಂಗ್‌ ವಿಭಾಗ ಡೆಲ್ಲಿ ವಿರುದ್ಧ ಸಂಪೂರ್ಣವಾಗಿ ವಿಫಲವಾಗಿದೆ.

ಕೊನೆಯಲ್ಲಿ ಏಕಾಂಗಿ ಹೋರಾಟ ನಡೆಸಿದ ಟಿಮ್ ಡೇವಿಡ್ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 37 ರನ್ ಬಾರಿಸಿ ತಂಡವನ್ನು 163 ರನ್​​ಗಳಿಗೆ ಕೊಂಡೊಯ್ದರು. ಆರಂಭದಲ್ಲಿ ಕೇವಲ 23 ಎಸೆತಗಳಲ್ಲಿ 61 ರನ್ ಬಾರಿಸಿದ್ದ ಆರ್​ಸಿಬಿ, ಆ ಬಳಿಕ ಉಳಿದ 97 ಎಸೆತಗಳಲ್ಲಿ ಕೇವಲ 102 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರರ್ಥ ಆರ್​ಸಿಬಿಯ ಬ್ಯಾಟಿಂಗ್‌ ವಿಭಾಗ ಡೆಲ್ಲಿ ವಿರುದ್ಧ ಸಂಪೂರ್ಣವಾಗಿ ವಿಫಲವಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ